Home / ಕವನ / ಕವಿತೆ / ಅಮರ ಲೀಲೆ

ಅಮರ ಲೀಲೆ


ಆಕಾಶ ಕುಸುಮವನ್ನಭಿವರ್ಣಿಸುವ ಕಾವ್ಯ
ವಿದ್ದೇನು ಸಾರ್ಥಕ್ಯ? ಕುರುಡಗಣ್ಣು!
ಸಾಕಾರ ದೇವನಿಗೆ ನೈವೇದ್ಯವೇ ಶೂನ್ಯ
ಉದ್ಧಾರ ವೇನಿದಕೆ? ಘೋರ ಹುಣ್ಣು!


ಹಣವಂತ ಮಾನವನ ಹೆಣಗೈದರೂ ತೃಪ್ತಿ
ಇಲ್ಲೆಂದು ಕುದಿಕುದಿದು ಲಾಭಕಾಗಿ;
ಒಣ ರೊಟ್ಟಿ ಸಿಕ್ಕದೊಲು ಗೈದು ರಕ್ತವ ಹೀರಿ
ಕೊಲ್ಲುವನು ಕೂಲಿಯನು ಸ್ವಾರ್ಥಿಯಾಗಿ


ಹೊಟ್ಟೆಯನು ನೆನೆದಾಗ ಬೆಟ್ಟ ನಿಲುವುದು ಮುಂದೆ
ಬಟ್ಟೆಯುಂಟೇ ಬಟ್ಟೆ ಇಲ್ಲದರಿಗೆ?
ಸಿಟ್ಟು ರಟ್ಟೆಯೊಳಿಲ್ಲ; ಮೈ ಮೂಳೆ ಗೂಡಮಮ!
ಎಷ್ಟು ದಿನವೀ ಮೋಸ ಕಾರ್ಮಿಕರಿಗೆ?


ಗಗನ ಮಧ್ಯದ ಗುಹೆಯೊಳಾರುಂಟು ಗೊತ್ತುಂಟೆ?
ನೋಡ ಬಯಸುವರೊಮ್ಮೆ ನೋಡಿ ಜೋಕೆ!
ಮುಗಿದೀತು ಇಹಪರದ ಕತೆಯೆ ಬಲು ಎಚ್ಚರಿಕೆ
ಗುಡುಗು ಮೋಡದ ಸಿಡಿಲು ಕಾಣಬೇಕೆ?


ವಿಷಮತೆಯ ವಿಷವದೋ ಹೊನಲಾಗಿ ಹರಿಯುತಿದೆ
ಜೀವ ಕೋಟಿಯ ಕೊಂದು ಮುಂದೆ ಸಾಗಿ
ಕಸಕೆ ಕಸವರವೆಂದು ಬಾಯ್ಬಿಟ್ಟು ಚೀರುತಿದೆ
ಸಾವು ಕಾದಿದ್ದರತಿಯಾಶೆಯಾಗಿ


ಧನದ ಧರ್ಮವು ಕೂರ ಬಲು ಘೋರವಾಗುತಿದೆ
ಜನವೆಲ್ಲ ಕಾಲ ಹುಡಿ ಉಸಿರಿದ್ದರೂ
ಘನವು ಕಿರಿದಾಗದಿರೆ ಬಾಳು ಬರಡಾಗಲಿದೆ
ಕನಸು ಮನಸಿನ ಮಂತ್ರ ಮಿಡಿದಿದ್ದರೂ


ತೇಜಸ್ಸು ತುಂಬೋಣ ಕಾವ್ಯ ವೀಣೆಯ ಮಿಡಿದು
‘ಲೇಖನಿಯು ಕೂರಸಿ’ ಯಿದೆಂದು ತೋರಿ
ಓಜಸ್ಸು ನಮಗೆಲ್ಲ ಧೀ ಶಕ್ತಿ ನೀಡಲದು
ನಾಕವನೆ ನಿರ್ಮಿಸುವ ಹಾಡಿ ಹಾರಿ


ಜೀವಂತ ಸಾಮ್ರಾಜ್ಯ ಮೈವೆತ್ತು ನಿಂತಿರಲಿ
ಸುಖ ಜೀವ ನಾಡಿಯದು ಶಾಂತಿಕಣ್ಣು!
ಭಾವನೆಯ ಭಾಗ್ಯ ಸುರನಾರಿ ಕೆಲಸಾರಿರಲಿ
ಮುಖವೆ ಸ್ವರ್ಲೋಕವಾಗಿರುವ ಹಣ್ಣು.


ದಿನದ ಮೊಳೆತದ ಮುನ್ನ ಕಾರಿರುಳು ಕೊರೆದಿತ್ತು
ಕಣ್ಸನ್ನೆ ಕೈಸನ್ನೆ ಕಾಣದಂತೆ!
ಮನಕೆ ಮೋಡಿಯ ಮಾಡಿ ತನ್ನ ತಾ ಮರೆಸಿತ್ತು
ಶ್ರಮಜೀವಿ ಬಲೆಯಿದನ್ನರಿಯದಂತೆ-!

೧೦
ಬದುಕುವಾಸೆಯು ಯಾರಿಗಿಲ್ಲವೋ ನಿಜ ಹೇಳಿ
ಎಲ್ಲ ಹೋರಾಟವೂ ಬದುಕಿಗಾಗಿ
ಮುದದಿಂದ ಬಾಳಗೊಡಿ ಬಡವವನು ಬಲ್ಲಿದರೆ
ಇಲ್ಲದಿರೆ ದುಡಿವನವ ಕ್ರಾಂತಿಗಾಗಿ

೧೧
ನೆತ್ತರೋಕುಳಿಯಾಡಿ ತನ್ನಗೋರಿಯ ಕಟ್ಟಿ
ಕೀರ್ತಿ ಗುಡಿ ನಿಲ್ಲಿಸುವನದರ ಮೇಲೆ
ಸುತ್ತಲೂ ಸಾಮ್ರಾಜ್ಯ ಚಾಚುವೊಲು ಮನಮುಟ್ಟಿ
ದುಡಿವ ಜೀವಿಯ ದುಡಿತ “ಅಮರ ಲೀಲೆ”
*****
ಬೆಂಗಳೂರು : ೧೯೪೪

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...