Home / ಕವನ / ಕವಿತೆ / ನಸುಕು

ನಸುಕು

“ಜಗಕೆಲ್ಲ ಬಿದ್ದಿತ್ತೊ ಇಷ್ಟು ಹೊತ್ತಿರುಳೆಂಬ
ಕಂಪಾದುದೊಂದು ಕನಸು!
ಹಗಲಿನ್ನು ಬಂದು ಬೆಳಕಿನ ಸೊಬಗು ಬೆಳಗುವದು-
ಕನಸು ಆಗುವುದು ನನಸು!
ಕನಸು ಕನಸೆಂದು ಕಂಗಳರು ಕನಕರಿಸುವರು
ಕನಸು ಕನಸಾಗಬಹುದೇ?
ಜನಿಸದಿರೆ ಕನಸಿನೊಳು ನನಸು, ನನಸಿನ ಜಗವು
ಕನಸಾಗಿ ಸಾವಬಹುದೇ ?
“ಕನಸು ನನಸಿನ ಕಸುಕು, ನನಸು ಕನಸಿನ ನಸುಕು”
ಎಂಬ ಸವಿಗವನವನ್ನು
ಇನಿದಾಗಿ ಕಟ್ಟುತಿಹ ಕವಿಯಾಗಿ ಒಪ್ಪುವದು
ಬೆಳಗುಮುಂಜಾವು ಮುನ್ನು!
ಚಿಕ್ಕಿಯಾಗಿರುಳೆಲ್ಲ ಮುಗಿಲಲ್ಲಿ ನಗೆಮೊಗದಿ
ಆಟವನ್ನಾಡಿ ದಣಿದು
ಹಕ್ಕಿಯಾಗೀಗ ಸಲೆ ಹಾಡುವನು ಇಂಪಾಗಿ
ದೇವ ತಾ ಮನದಿ ತಣಿದು!
ಅಂದಲರ ಕಂಪಿನಲಿ ತಣ್ಣೆಲರ ತಂಪಿನಲಿ
ಪಾಡುಗಳ ಪೆಂಪಿನಲ್ಲಿ
ಕೆಂದಳಿರ ಕೆಂಪಿನಲಿ ಸೊಬಗೊಗೆವ ಸೊಂಪಿನಲಿ
ಮೈದೋರ್ವಲಂಪಿನಲ್ಲಿ!
ಒಪ್ಪಾಗಿ ಚಿಗುರುತಿಹ ಮೂಡಲದ ಬೆಳಕಿನೊಳು
ಸೊಗಸುಳ್ಳ ಮನದಲಿಂದು
ಬಪ್ಪುತಿರುವದು ಬೆಳಗು ಮುಂಜಾವು ನುಣ್ಪುಳ್ಳ
ಬೆಳಕನೀರಿಂದ ಮಿ೦ದು!
ಚೊಕ್ಕಟವದೆ೦ತಹದೊ ಈ ಬಗೆಯ ಬೆಳಗುಮುಂ-
ಜಾವಿನಾ ಸೊಬಗು-ಸೊಗಸು!
ಅಕ್ಕ ನಸುಕೇ! ಅಕ್ಕರದಿ ನಕ್ಕು ನನ್ನಯೀ
ಅ೦ತರ೦ಗವನ್ನು ನಗಿಸು!
*****
Tagged:

Leave a Reply

Your email address will not be published. Required fields are marked *

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...