Home / ಕವನ / ಕವಿತೆ / ಶ್ರೀ ಕೃಷ್ಣನ ಕಾಣಿಕೆ

ಶ್ರೀ ಕೃಷ್ಣನ ಕಾಣಿಕೆ

[ಒಂದಾನೊಂದು ದಿನ ಸುಧಾಮನ ಸಹಧರ್ಮಿಣಿ ತನ್ನ ಪತಿರಾಯನನ್ನು ಕುರಿತು ಹೀಗೆ ನುಡಿದಳು]
ಭಾಗ್ಯವನು ಬಳೆದುಕೊಂಡಿಹರು ಕೆಲ ಜನರು ಸೌ-
ಭಾಗ್ಯವನು ಸುರಿದುಕೊಂಡಿಹರು ಹಲ ಜನರು ಸೌ-
ಭಾಗೃತಿಲಕನೆ ಕೇಳು ಭಾಗ್ಯಲಕ್ಷ್ಮಿಯು ನಮ್ಮ
ಗುಡಿಸಲವ ತೊಲಗಿ ತಾನು!
ಈಗ್ಗೆ ಹೋದಳು- ನೆಲೆಯು ಹತ್ತದೀ ಬಡತನದ
ತಗ್ಗಿನೊಳಗಿಂದ ಹೊರಬರುವ ಹಾದಿಯ ಕಾಣೆ
ಮುಗ್ಗಿ ಹೋಗಿದೆ ಮನವು ತಗ್ಗಿ ಹೋಗಿದೆ ತನುವು
ನಮಗೆ ಯಾರಿಲ್ಲವೇನು?
[ಆಗ ಅಂತಃಕರಣಕ್ಕೆ ಒಳಒಳಗಿಂದೇ ಅಳುವು ಬಂದು ಸುದಾಮನು ತನ್ನ ಪತ್ನಿಗೆ ಈ ಪ್ರಕಾರ ಹೇಳಿದನು:-]
ಬಂಧುಬಳಗದ ಜನರು ಯಾರಿಲ್ಲ, ಅಣ್ಣ ತ-
ಮ್ಮಂದಿರನು ನಾನು ಹುಟ್ಟಾ ಕಾಣೆ ಮಡದಿಯೇ
ಮುಂದೆ ಕರೆವವರಿಲ್ಲ ಹಿಂದುಮುಂದಿಲ್ಲ ಹಾಯ್
ನಮಗೀಗ ಯಾವನಿಲ್ಲ!
ಇಂದು ನೆರವಿನ ನರನು ನಮಗಿಲ್ಲ ಜಗದಲ್ಲಿ
ಹಿಂದೆ ಗುರ್ವಾಶ್ರಮದೊಳಿದ್ದನೊಬ್ಬನು ಕೃಷ್ಣ
ಚೆಂದ ಚೆನ್ನಿಗ ಚೆಲುವ- ದ್ವಾರಕೆಯೊಳಿರುವಾತ-
“ಎಳೆಮನದ ಗೆಳೆಯ” ನೊಬ್ಬ!
[ಕೃಷ್ಣನಿಂದಾದರೂ ತನ್ನ ಬಡತನ ಬತ್ತಿತೆಂದು ಬಗೆದು ಸಹಧರ್ಮಿಣಿಯು “ಕೃಷ್ಣನ ಕಡೆಗೆ ಹೋಗಿ ಬರ್ರಿ” ಎಂದು ಹೇಳಿದ್ದಕ್ಕೆ ಸುದಾಮನು ಒಪ್ಪಿ ಎಲ್ಲಿಂದಲೋ ಒಪ್ಪಿಡಿ ಅವಲಕ್ಕಿಯನ್ನು ಪತ್ನಿ ತಂದು ಕೊಟ್ಟಿದ್ದನ್ನು ತೆಗೆದುಕೊಂಡು ಹೊರಟು ದ್ವಾರಕೆಗೆ ಬಂದು ತನ್ನ ಗೆಳೆಯನಿಗೆ ಹೀಗೆ ಹೇಳಿದನು:-]
ಒಪ್ಪಿಡಿಯ ತುಂಬಿರುವ ಅವಲಕ್ಕಿಯನು ತಗೋ
ಒಪ್ಪಾಗಿ ಒಪ್ಪುತಿಹ ಭಾಗ್ಯಲಕ್ಷ್ಮಿಯ ನಲ್ಲ
ಅಪ್ಪಯ್ಯ ನಿನಗೆಂದು ತಂದಿರುವೆನೀ ಒಂದೆ
ಹಿಡಿಯ ಅವಲಕ್ಕಿಯನ್ನು!
ಉಪ್ಪಿಲ್ಲ ಊಟಕ್ಕೆ ತುಪ್ಪವಿಲ್ಲವು ತುಟಿಗೆ
ಕಪ್ಪಿಟ್ಟು ಹೋಗಿರುವೆ ಮತ್ತೆ ಮೇಲಿಂದ ಮೇಲ್
ಬಪ್ಪ ಬಡತನವನ್ನು ಭಂಗಿಸೋ ಹಿಂಗಿಸೋ-
ಭಾಗ್ಯವನು ಸೂರೆಗೊಳಿಸೋ!
ಕೃಷ್ಣ ಕೊಳಲಿನ ಕೃಷ್ಣ! ಕೆನೆವಾಲ ಕೃಷ್ಣನೇ!
ಕೃಷ್ಣೆಯಾ ದೇವಕಿಯ ಸವಿಮಾವೆ-ಗಿಳಿಮಾವೆ!
ವಿಷ್ಣು ವರ್ಣಗಳುಳ್ಳ ವಿಶ್ವವನು ವ್ಯಾಪಿಸಿದ
ಭಾಗ್ಯಸ್ವರೂಪ ರೂಪ!
ನಿಷ್ಣಾತ ಯೋಗೀಂದ್ರ ಬವರದಲ್ಲಿಯ ಬಂಟ!
ಉಷ್ಣತೆಯು ಹೃದಯವನು ತುಂಬಿಹುದು ಹೃದಯದೀ
ಕೃಷ್ಣೆಯನು ಕಡೆಗೋಲ ಬೆಣ್ಣೆಯಲಿ ಸಂತೈಸಿ
ಸೊಗಸುಗೊಳಿಸೀಗ ಬೇಗ!
ನೋಯುತ್ತ ನೆರಳುವೆನು ಬೇಯುತ್ತ ಬಳಲುವೆನು
ಕಾಯವೀ ತೋಯದೊಳು ತೋಯುತ್ತ ತೊಳಲುವದು
ಕಾಯಬೇಕೆನ್ನ ಮಿತ್ರನೆ ಮೀಯಿಸೀಗ ನಿನ್ನಯ
ನನ್ನಿ-ನನ್ನಿ ಯಲ್ಲಿ!
ನೋಯುತ್ತ ಬಸಿಯುತಿಹ ಗಾಯವನ್ನಾರೈಸಿ
ಮಾಯಿಸೈ, ಸೀಯಾದ ತೋಯವನು-ಪೀಯೂಷ-
ಪ್ರಾಯವಹ ತೋಯವನು ತಾಯೀಗ ಸಾಯುವೆನು
ನೀರಡಿಕೆಸಾವಿನಿಂದ!
[ಆಗ ಶ್ರೀಕೃಷ್ಣನು ಪ್ರೇಮಾಂತಃಕರಣದಿಂದ ಗೆಳೆಯನನ್ನು ಬಿಗಿತಾಗಿ ಅಪ್ಪಿಕೊಂಡು ಇಂತೆಂದನು:-]
ಅಣ್ಣಯ್ಯ ಅಲ್ಲಯ್ಯ ಈ ಸೊಲ್ಲು ಸಲ್ಲದೈ
ಕಣ್ಣೀರುಗಳು ತುಂಬಿ ಕೋಡಿಯೊಡೆಯುವದೀಗ
ತಣ್ಣನ್ನ ಶಿಲೆಯಂತೆ ನಾನೇನು ಕೂತಿರುವದಿಲ್ಲವೋ
ಇಲ್ಲ ಇಲ್ಲ!
ನಿನ್ನನ್ನು ನಿನ್ನ ಮೊಗವನು ನೋಡಿ ಜೀವದ-
ಲ್ಲಿನ್ನು ಕಳೆ ಬಂದಿತೈ, ಮೊಗದಲ್ಲಿ ನಗೆ ಬಂತು
ಅಣ್ಣಯ್ಯ ನನ್ನದೀ ಭಾಗ್ಯವೆಲ್ಲವು ನಿನ್ನದೇ,
ನನ್ನದಿರುವದಿಲ್ಲ!
ಮೇಲೆ:-
ಕೃಷ್ಣ ನೂರೊಳಗೆ ಗೆಳೆಯನು ಇರುವ ಕಾಲದಲಿ
ಕೃಷ್ಣನೇ ಉಪಚರಿಸಿ ಕಳಿಸಿದನು ಕೊಡದೆ ಗಡ,
ಕೃಷ್ಣ ಕೊಡದದ್ದೆ ತನ್ನೂರಿಗೈತಂದ ಬಳಿಕಾಯಿತೈ
ಭಾಗ್ಯ ಸಾಕ್ಷಾತ್!
ಕೃಷ್ಣನೀಯುವ ಬೇವೆ ಮಾವಾಗಿ ಫಲಿಸುವದು!
ಕೃಷ್ಣನೀಯುವ ಕನಸೆ ನನಸಾಗಿ ಜನಿಸುವದು!
ಕೃಷ್ಣ ಕೊಡುವಂಥ ವಿಷ ಪೀಯೂಷವಾಗಿ ರುಚಿಸುವದೀಗ
ಪೃಥ್ವಿಯಲ್ಲಿ!
*****
Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...