Home / ಕವನ / ಅನುವಾದ / ಮುದಿಯ ರಾಮಗೌಡ

ಮುದಿಯ ರಾಮಗೌಡ

ಕುರಿಗಳೆಲ್ಲಾ ರೊಪ್ಪದಲ್ಲಿ, ದನಗಳೆಲ್ಲಾ ತೊಟ್ಟಿಯಲ್ಲಿ,
ಜನಗಳೆಲ್ಲಾ ಹಟ್ಟಿಯಲ್ಲಿ ಬಳಲಿ ಕೆಡೆದರು ತೆಪ್ಪಗೆ;
ಗಂಡ ಗೊರಕೆಹೊಯ್ಯುತಿಹನು ನಿದ್ದೆ ಕವಿದು ಮಗ್ಗುಲಲ್ಲಿ-
ನನಗೋ ಹೊಟ್ಟೆಯ ದುಃಖವೆಲ್ಲಾ ಕಣ್ಣ ಹನಿಯಲಿ ಸುರಿವುದು.

ಚಿಕ್ಕ ಹರೆಯದ ಚಾಮನೊಲಿದು ಮದುವೆಗೆನ್ನ ಬಯಸುತ್ತಿದ್ದ.
ಮಾತನೆತ್ತಲು ರೆಕ್ಕವಿಲ್ಲದೆ ನಾಚಿ ಸುಮ್ಮನೆ ಇರುವನು.
ದುಡ್ಡು ಕಾಸನು ಕೂಡಿಹಾಕಲು ಹೋಗಿ ಹಡಗ ಸೇರಿಕೊಂಡ-
ದುಡ್ಡು ಕಾಸನು ನನ್ನ ಸಲುವೇ ಕೂಡಿಹಾಕಲು ಹೋದನು.

ಅವನು ಹೋಗಿ ನೆಟ್ಟಗೆಲ್ಲಾ ಎರಡು ವಾರ ಕಳೆಯಲಿಲ್ಲ.
ಅಪ್ಪ ಕೈಯ ಮುರಿದುಕೊಂಡ; ಕಳ್ಳರೊಯ್ದರು ದನವನು.
ಅವ್ವ ನರಳುತ ಬಿದ್ದುಕೊಂಡಳು, ಚಾಮ ಎತ್ತಲೋ ಕಡಲಲಿದ್ದನು.
ಇತ್ತ ಮುದಿಯ ರಾಮಗೌಡ ನನ್ನ ಬಯಸಿ ಬಂದನು.

ಅಪ್ಪ ಹೊರಗೆ ಗೆಯ್ಯಲಾರ, ಅವ್ವ ಒಳಗೆ ನೆಯ್ಯಲಾರಳು;
ಹಗಲು ಇರುಳು ನಾನು ದುಡಿದೂ ನಮಗೆ ಹಿಟ್ಟು ಹುಟ್ಟದು.
ರಾಮಗೌಡ ಕಷ್ಟಕಾದ : ಕೈಯ ಹಿಡಿದು ಕಣ್ಣ ನೆನಸಿ,
ಅವರ ಸಲುವಾಗೆನ್ನ ಚೆನ್ನಿ, ಮದುವೆಯಾಗು ಎಂದನು.

ನನ್ನ ಮನಸೋ ಒಲ್ಲೆನೆನುವುದು; ಚಾಮ ಬರುವ ನಚ್ಚು ಹೋಗದು;
ಎಲ್ಲಿ ಬರುವನು? ಗಾಳಿ ಬಡಿದು ಹಡಗು ಪುಡಿಪುಡಿಯಾಯಿತು.
ಹಡಗು ಪುಡಿಪುಡಿಯಾಯಿತಯ್ಯೋ ಸಾಯದೇತಕೆ ಚಾಮ ಉಳಿದ!
ಕೊರಗಿ ನಾನೀ ಬೇಗೆಯಲ್ಲಿ ಏಕೆ ಬದುಕುತ್ತಿರುವೆನು!

ಅಪ್ಪ ಹೇಳಿದ, ಗದರಿಕೊಂಡ; ಅವ್ವ ಬಾಯಲಿ ಆಡಒಲ್ಲಳು;
ಅವಳು ನೋಡಿದ ನೋಟವೇ ನನ್ನೆದೆಯನಿರಿಯಿತು, ಮುರಿಯಿತು.
ಅವನ ಕೈಯಲಿ ಕೈಯನಿಟ್ಟರು; ಮನಸು ಕಡಲಲಿ ನಿಂತುಹೋಯಿತು.
ಅಂತು ಮುದಿಯ ರಾಮಗೌಡ ನನಗೆ ಗಂಡನಾದನು.

ಮದುವೆಯಾಗಿ ನೆಟ್ಟಗೆಲ್ಲಾ ನಾಲ್ಕುವಾರ ಕಳೆಯಲಿಲ್ಲ.
ಬಾಗಿಲಲ್ಲಿ ಕಲ್ಲಮೇಲೆ ಕುಳಿತು ಕೊರಗುತ – ಕಂಡೆನು!
ಗಾಳಿಯಾಗಿ ಬಂದ ಚಾಮ ಎಂದುಕೊಂಡೆನು – ಚಾಮು ನಕ್ಕು,
ತೆರವ ತಂದೆ, ಮದುವೆಯಾಗಲು ಬಂದೆ, ಚೆನ್ನಿ , ಎಂದನು .

ಬಿಕ್ಕಿ ಬಿಕ್ಕಿ ನುಡಿಸಿ ನುಡಿಸಿ, ದುಃಖವೆಲ್ಲಾ ಹೇಳಿಕೊಂಡೆವು,
ಒಂದು ಮುತ್ತ ಸೆಳೆದುಕೊಂಡೆವು-ಅಟ್ಟಿಬಿಟ್ಟೆ, ಆಗಲೆ!
ಸಾಯ ಒಲ್ಲೆನೆ ನಾನು ಪಾಪಿ! ಅಯ್ಯೊ! ಪಾಪಿಗೆ ಸಾವು ಬಹುದೆ?
ಹುಟ್ಟದೇ ಇರಬಾರದೇ! ಈ ಬೇಗೆಬಾಳನು ತಾಳೆನೇ!

ಗಾಳಿಯಾಗಿ ಸುಳಿಯುತಿರುವೆ-ಮನೆಯ ಕೆಲಸ ಅಕ್ಕರಿಲ್ಲ,
ಚಾಮನನು ನೆನೆಯುವುದು ಪಾಪ ; ಎಷ್ಟೋ ತಡೆಯುವೆ ಮನಸನು.
ಒಳ್ಳೆ ಗರತಿಯಾಗಿ ಬದುಕಲು ಎದೆಯನೆಷ್ಟೋ ಗಟ್ಟಿಮಾಡುವೆ,
ರಾಮಗೌಡನ ಪ್ರೀತಿ ನಂಬಿಕೆಗೆಂತು ದ್ರೋಹವ ಬಗೆವೆನು!
*****
LADY LINDSAY (1750-1825): Auld Robin Gray

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...