Home / ಕವನ / ಅನುವಾದ / ಮುದಿಯ ರಾಮಗೌಡ

ಮುದಿಯ ರಾಮಗೌಡ

ಕುರಿಗಳೆಲ್ಲಾ ರೊಪ್ಪದಲ್ಲಿ, ದನಗಳೆಲ್ಲಾ ತೊಟ್ಟಿಯಲ್ಲಿ,
ಜನಗಳೆಲ್ಲಾ ಹಟ್ಟಿಯಲ್ಲಿ ಬಳಲಿ ಕೆಡೆದರು ತೆಪ್ಪಗೆ;
ಗಂಡ ಗೊರಕೆಹೊಯ್ಯುತಿಹನು ನಿದ್ದೆ ಕವಿದು ಮಗ್ಗುಲಲ್ಲಿ-
ನನಗೋ ಹೊಟ್ಟೆಯ ದುಃಖವೆಲ್ಲಾ ಕಣ್ಣ ಹನಿಯಲಿ ಸುರಿವುದು.

ಚಿಕ್ಕ ಹರೆಯದ ಚಾಮನೊಲಿದು ಮದುವೆಗೆನ್ನ ಬಯಸುತ್ತಿದ್ದ.
ಮಾತನೆತ್ತಲು ರೆಕ್ಕವಿಲ್ಲದೆ ನಾಚಿ ಸುಮ್ಮನೆ ಇರುವನು.
ದುಡ್ಡು ಕಾಸನು ಕೂಡಿಹಾಕಲು ಹೋಗಿ ಹಡಗ ಸೇರಿಕೊಂಡ-
ದುಡ್ಡು ಕಾಸನು ನನ್ನ ಸಲುವೇ ಕೂಡಿಹಾಕಲು ಹೋದನು.

ಅವನು ಹೋಗಿ ನೆಟ್ಟಗೆಲ್ಲಾ ಎರಡು ವಾರ ಕಳೆಯಲಿಲ್ಲ.
ಅಪ್ಪ ಕೈಯ ಮುರಿದುಕೊಂಡ; ಕಳ್ಳರೊಯ್ದರು ದನವನು.
ಅವ್ವ ನರಳುತ ಬಿದ್ದುಕೊಂಡಳು, ಚಾಮ ಎತ್ತಲೋ ಕಡಲಲಿದ್ದನು.
ಇತ್ತ ಮುದಿಯ ರಾಮಗೌಡ ನನ್ನ ಬಯಸಿ ಬಂದನು.

ಅಪ್ಪ ಹೊರಗೆ ಗೆಯ್ಯಲಾರ, ಅವ್ವ ಒಳಗೆ ನೆಯ್ಯಲಾರಳು;
ಹಗಲು ಇರುಳು ನಾನು ದುಡಿದೂ ನಮಗೆ ಹಿಟ್ಟು ಹುಟ್ಟದು.
ರಾಮಗೌಡ ಕಷ್ಟಕಾದ : ಕೈಯ ಹಿಡಿದು ಕಣ್ಣ ನೆನಸಿ,
ಅವರ ಸಲುವಾಗೆನ್ನ ಚೆನ್ನಿ, ಮದುವೆಯಾಗು ಎಂದನು.

ನನ್ನ ಮನಸೋ ಒಲ್ಲೆನೆನುವುದು; ಚಾಮ ಬರುವ ನಚ್ಚು ಹೋಗದು;
ಎಲ್ಲಿ ಬರುವನು? ಗಾಳಿ ಬಡಿದು ಹಡಗು ಪುಡಿಪುಡಿಯಾಯಿತು.
ಹಡಗು ಪುಡಿಪುಡಿಯಾಯಿತಯ್ಯೋ ಸಾಯದೇತಕೆ ಚಾಮ ಉಳಿದ!
ಕೊರಗಿ ನಾನೀ ಬೇಗೆಯಲ್ಲಿ ಏಕೆ ಬದುಕುತ್ತಿರುವೆನು!

ಅಪ್ಪ ಹೇಳಿದ, ಗದರಿಕೊಂಡ; ಅವ್ವ ಬಾಯಲಿ ಆಡಒಲ್ಲಳು;
ಅವಳು ನೋಡಿದ ನೋಟವೇ ನನ್ನೆದೆಯನಿರಿಯಿತು, ಮುರಿಯಿತು.
ಅವನ ಕೈಯಲಿ ಕೈಯನಿಟ್ಟರು; ಮನಸು ಕಡಲಲಿ ನಿಂತುಹೋಯಿತು.
ಅಂತು ಮುದಿಯ ರಾಮಗೌಡ ನನಗೆ ಗಂಡನಾದನು.

ಮದುವೆಯಾಗಿ ನೆಟ್ಟಗೆಲ್ಲಾ ನಾಲ್ಕುವಾರ ಕಳೆಯಲಿಲ್ಲ.
ಬಾಗಿಲಲ್ಲಿ ಕಲ್ಲಮೇಲೆ ಕುಳಿತು ಕೊರಗುತ – ಕಂಡೆನು!
ಗಾಳಿಯಾಗಿ ಬಂದ ಚಾಮ ಎಂದುಕೊಂಡೆನು – ಚಾಮು ನಕ್ಕು,
ತೆರವ ತಂದೆ, ಮದುವೆಯಾಗಲು ಬಂದೆ, ಚೆನ್ನಿ , ಎಂದನು .

ಬಿಕ್ಕಿ ಬಿಕ್ಕಿ ನುಡಿಸಿ ನುಡಿಸಿ, ದುಃಖವೆಲ್ಲಾ ಹೇಳಿಕೊಂಡೆವು,
ಒಂದು ಮುತ್ತ ಸೆಳೆದುಕೊಂಡೆವು-ಅಟ್ಟಿಬಿಟ್ಟೆ, ಆಗಲೆ!
ಸಾಯ ಒಲ್ಲೆನೆ ನಾನು ಪಾಪಿ! ಅಯ್ಯೊ! ಪಾಪಿಗೆ ಸಾವು ಬಹುದೆ?
ಹುಟ್ಟದೇ ಇರಬಾರದೇ! ಈ ಬೇಗೆಬಾಳನು ತಾಳೆನೇ!

ಗಾಳಿಯಾಗಿ ಸುಳಿಯುತಿರುವೆ-ಮನೆಯ ಕೆಲಸ ಅಕ್ಕರಿಲ್ಲ,
ಚಾಮನನು ನೆನೆಯುವುದು ಪಾಪ ; ಎಷ್ಟೋ ತಡೆಯುವೆ ಮನಸನು.
ಒಳ್ಳೆ ಗರತಿಯಾಗಿ ಬದುಕಲು ಎದೆಯನೆಷ್ಟೋ ಗಟ್ಟಿಮಾಡುವೆ,
ರಾಮಗೌಡನ ಪ್ರೀತಿ ನಂಬಿಕೆಗೆಂತು ದ್ರೋಹವ ಬಗೆವೆನು!
*****
LADY LINDSAY (1750-1825): Auld Robin Gray

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...