Home / ಕವನ / ಅನುವಾದ / ಕಾರಿಹೆಗ್ಗಡೆಯ ಮಗಳು

ಕಾರಿಹೆಗ್ಗಡೆಯ ಮಗಳು

ಪಡುವದಿಬ್ಬದ ಗೌಡನೊಬ್ಬನು
ಬಿಡದೆ ತೊರೆಯನ ಕೂಗಿಕೊಂಡನು;
ತಡೆಯದೀಗಲೆ ಗಡುವ ಹಾಯಿಸು,
ಕೊಡುವೆ ಕೇಳಿದ ಹೊನ್ನನು.
ಆರು ನೀವೀ ಕರುಗಿ ಮೊರೆಯುವ
ನೀರ ಕಾಯಲ ಕಾಯುವವರು?
ಪಡುವದಿಬ್ಬದ ಗೌಡ ನಾನೀ
ಮಡದಿ ಕಾರಿಯ ಕುವರಿಯು.
ಓಡಿ ಬಂದೆವು ಮೂರು ದಿವಸ;
ಜಾಡ ಹಿಡಿದು ಹಿಂದೆ ಬಂದರು;
ನಮ್ಮ ನೀಕಣಿವೆಯಲಿ ಕಂಡರೆ
ಚಿಮ್ಮಿ ಹರಿವುದು ನೆತ್ತರು.
ಹತ್ತಿ ಕುದುರೆಯ ತರುಬಿ ಬರುವರು,
ಮುತ್ತಿಕೊಂಡರೆ ನನ್ನ ಕೊಲುವರು;
ಘೋರದುಃಖದ ನಾರಿಯನು ಬಳಿ
ಕಾರು ನಗಿಸಲು ಬಲ್ಲರು?
ಆಗ, ಅಂಜದೆ ತೊರೆಯನೆಂದನು;
ಬೇಗ, ಜೀಯಾ, ಓಡ ತರುವೆನು.
ಸುಡಲಿ ಹೊನ್ನು, ಬೆಡಗಿ ನಿನ್ನೀ
ಮಡದಿಗೋಸುಗ ಬರುವೆನು.
ಆದುದಾಗಲಿ, ಮುದ್ದಿನರಗಿಣಿ
ಗಾದ ಗಂಡವ ಕಾದುಕೊಡುವೆನು.
ಕಡಲು ನೊರೆಗಡೆದೆದ್ದು ಕುದಿಯಲಿ
ಗಡುವ ಹಾಯಿಸಿ ಬಿಡುವೆನು.
ತೂರುಗಾಳಿಗೆ ಕಡಲು ಕುದಿಯಿತು,
ನೀರ ದೆವ್ವಗಳರಚಿಕೊಂಡುವು.
ಹೆಪ್ಪು ಮೋಡದ ಹುಬ್ಬುಗಂಟಿಗೆ
ಕಪ್ಪಗಾದುವು ಮುಖಗಳು.
ಕೆರಳಿ ಕೆರಳಿ ಗಾಳಿ ಚಚ್ಚಿತು;
ಇರುಳ ಕತ್ತಲೆ ಕವಿದು ಮುಚ್ಚಿತು;-
ಕಣಿವೆಯಿಳಿವರ ಕುದುರೆ ಕತ್ತಿಯ
ಖಣಿಖಣಿಧ್ವನಿ ಕೇಳಿತು!
ಏಳು, ಬೇಗೇಳಣ್ಣ, ಎಂದಳು;
ಹೂಳಿಕೊಳಲಿ ನನ್ನ ಕಡಲು,
ಮುಳಿದ ಮುಗಿಲ ತಡೆಯಬಲ್ಲೆ,
ಮುಳಿದ ತಂದೆಯ ತಡೆಯೆನು.
ಇತ್ತ ಕರೆಮೊರೆ ಹಿಂದಕಾಯಿತು;
ಅತ್ತ ತೆರೆಮೊರೆ ಸುತ್ತಿಕೊಂಡಿತು;
ಆಳ ಕೈಯಲಿ ತಾಳಬಹುದೇ
ಏಳುಬೀಳಿನ ಕಡಲದು!
ಅಲೆಗಳಬ್ಬರದಲ್ಲಿ ಮೀಟಿ
ಮುಳುಗುತಿಹರು, ಏಳುತಿಹರು-
ಕರೆಗೆ ಬಂದ ಕಾರಿಹೆಗ್ಗಡೆ,
ಕರಗಿ ಮುಳಿಸು, ಅತ್ತನು!
ತೊಂಡುತೆರೆಗಳ ಮುಸುಕಿನಲ್ಲಿ,
ಕಂಡು ಮಗಳ, ಕರಗಿಹೋದ-
ಒಂದು ಕೈ ನೀಡಿದಳು ನೆರವಿಗೆ,
ಒಂದು ತಬ್ಬಿತು ನಲ್ಲನ!
ಮರಳು, ಮರಳು, ಮಗಳೆ ಎಂದ,
ಮೊರೆವ ಕಾಯಲ ಗಂಟಲಿಂದ;
ಮರೆತೆ, ಒಪ್ಪಿದೆ ನಿನ್ನ ನಲ್ಲನ,
ಮರಳು ಕಂದಾ ಎಂದನು .
ಮರುಳಬಹುದೇ? ಹೋಗಬಹುದೆ?
ಕರೆಯ ತೆರೆಯಪ್ಪಳಿಸಿ ಹೋಯ್ದು
ಹೊರಳಿಹೋದುವು ಮಗಳ ಮೇಲೆ,
ಕೊರಗಿನಲಿ ಅವನುಳಿದನು .
*****
CAMPBELL (1777-1844) : Lord Ullin’s Daughter
Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...