Home / ಕವನ / ಅನುವಾದ / ಕಾರಿಹೆಗ್ಗಡೆಯ ಮಗಳು

ಕಾರಿಹೆಗ್ಗಡೆಯ ಮಗಳು

ಪಡುವದಿಬ್ಬದ ಗೌಡನೊಬ್ಬನು
ಬಿಡದೆ ತೊರೆಯನ ಕೂಗಿಕೊಂಡನು;
ತಡೆಯದೀಗಲೆ ಗಡುವ ಹಾಯಿಸು,
ಕೊಡುವೆ ಕೇಳಿದ ಹೊನ್ನನು.
ಆರು ನೀವೀ ಕರುಗಿ ಮೊರೆಯುವ
ನೀರ ಕಾಯಲ ಕಾಯುವವರು?
ಪಡುವದಿಬ್ಬದ ಗೌಡ ನಾನೀ
ಮಡದಿ ಕಾರಿಯ ಕುವರಿಯು.
ಓಡಿ ಬಂದೆವು ಮೂರು ದಿವಸ;
ಜಾಡ ಹಿಡಿದು ಹಿಂದೆ ಬಂದರು;
ನಮ್ಮ ನೀಕಣಿವೆಯಲಿ ಕಂಡರೆ
ಚಿಮ್ಮಿ ಹರಿವುದು ನೆತ್ತರು.
ಹತ್ತಿ ಕುದುರೆಯ ತರುಬಿ ಬರುವರು,
ಮುತ್ತಿಕೊಂಡರೆ ನನ್ನ ಕೊಲುವರು;
ಘೋರದುಃಖದ ನಾರಿಯನು ಬಳಿ
ಕಾರು ನಗಿಸಲು ಬಲ್ಲರು?
ಆಗ, ಅಂಜದೆ ತೊರೆಯನೆಂದನು;
ಬೇಗ, ಜೀಯಾ, ಓಡ ತರುವೆನು.
ಸುಡಲಿ ಹೊನ್ನು, ಬೆಡಗಿ ನಿನ್ನೀ
ಮಡದಿಗೋಸುಗ ಬರುವೆನು.
ಆದುದಾಗಲಿ, ಮುದ್ದಿನರಗಿಣಿ
ಗಾದ ಗಂಡವ ಕಾದುಕೊಡುವೆನು.
ಕಡಲು ನೊರೆಗಡೆದೆದ್ದು ಕುದಿಯಲಿ
ಗಡುವ ಹಾಯಿಸಿ ಬಿಡುವೆನು.
ತೂರುಗಾಳಿಗೆ ಕಡಲು ಕುದಿಯಿತು,
ನೀರ ದೆವ್ವಗಳರಚಿಕೊಂಡುವು.
ಹೆಪ್ಪು ಮೋಡದ ಹುಬ್ಬುಗಂಟಿಗೆ
ಕಪ್ಪಗಾದುವು ಮುಖಗಳು.
ಕೆರಳಿ ಕೆರಳಿ ಗಾಳಿ ಚಚ್ಚಿತು;
ಇರುಳ ಕತ್ತಲೆ ಕವಿದು ಮುಚ್ಚಿತು;-
ಕಣಿವೆಯಿಳಿವರ ಕುದುರೆ ಕತ್ತಿಯ
ಖಣಿಖಣಿಧ್ವನಿ ಕೇಳಿತು!
ಏಳು, ಬೇಗೇಳಣ್ಣ, ಎಂದಳು;
ಹೂಳಿಕೊಳಲಿ ನನ್ನ ಕಡಲು,
ಮುಳಿದ ಮುಗಿಲ ತಡೆಯಬಲ್ಲೆ,
ಮುಳಿದ ತಂದೆಯ ತಡೆಯೆನು.
ಇತ್ತ ಕರೆಮೊರೆ ಹಿಂದಕಾಯಿತು;
ಅತ್ತ ತೆರೆಮೊರೆ ಸುತ್ತಿಕೊಂಡಿತು;
ಆಳ ಕೈಯಲಿ ತಾಳಬಹುದೇ
ಏಳುಬೀಳಿನ ಕಡಲದು!
ಅಲೆಗಳಬ್ಬರದಲ್ಲಿ ಮೀಟಿ
ಮುಳುಗುತಿಹರು, ಏಳುತಿಹರು-
ಕರೆಗೆ ಬಂದ ಕಾರಿಹೆಗ್ಗಡೆ,
ಕರಗಿ ಮುಳಿಸು, ಅತ್ತನು!
ತೊಂಡುತೆರೆಗಳ ಮುಸುಕಿನಲ್ಲಿ,
ಕಂಡು ಮಗಳ, ಕರಗಿಹೋದ-
ಒಂದು ಕೈ ನೀಡಿದಳು ನೆರವಿಗೆ,
ಒಂದು ತಬ್ಬಿತು ನಲ್ಲನ!
ಮರಳು, ಮರಳು, ಮಗಳೆ ಎಂದ,
ಮೊರೆವ ಕಾಯಲ ಗಂಟಲಿಂದ;
ಮರೆತೆ, ಒಪ್ಪಿದೆ ನಿನ್ನ ನಲ್ಲನ,
ಮರಳು ಕಂದಾ ಎಂದನು .
ಮರುಳಬಹುದೇ? ಹೋಗಬಹುದೆ?
ಕರೆಯ ತೆರೆಯಪ್ಪಳಿಸಿ ಹೋಯ್ದು
ಹೊರಳಿಹೋದುವು ಮಗಳ ಮೇಲೆ,
ಕೊರಗಿನಲಿ ಅವನುಳಿದನು .
*****
CAMPBELL (1777-1844) : Lord Ullin’s Daughter
Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...