Home / ಕವನ / ಅನುವಾದ / ಎರಡು ಮನಸ್ಸು

ಎರಡು ಮನಸ್ಸು

ಹೋಗಬಾರದೆ ನಾವು-
ಅವನು ನಾನು!
ಆಗ ಜಗದಲಿ ದುಃಖ
ಸವೆಯಬಹುದು.
ಕಣ್ಣಿಲ್ಲದವನವನು,
ತಿಳಿಯದವನು.
ನನ್ನ ಮನೆ ಮನೆಯಾಯ್ತೆ?
ಕೆಳೆ ಕೆಳೆಯರೆ?
ಬಾಳ ಬಂಡೆಗೆ ಬಡಿದು,
ಅಲೆ ಹೊಡೆದು, ಹೊಡೆದು,
ಆಳದಲಿ ಸೋತಿಹೆವು:
ನಿಲುವು – ಸಾವು!
ಕ್ಷಮಿಸು, ಧೀರರ ದೇವ,
ಹೇಡಿಯೆದೆಯ;
ನೊಂದು ಸೊಕ್ಕಿದ ಮರುಳ
ಕೀಳುಬಗೆಯ;
ಊದು ಉಸಿರನು; ತುಂಬು
ನಂಬುಗೆಯನು.
ಜೀವ, ಕಾಳಗ ಕಾದು,
ಏಳು, ಗೆಲ್ಲು.
*****
ANON : Two moods
`Two moods’ ಮೂಲ ಇಂಗ್ಲಿಷ್ ಕವನವನ್ನು ಬರೆದವರು ಬಿ. ಎಂ. ಶ್ರೀಕಂಠಯ್ಯನವರು.  Anon ಎಂಬುದಾಗಿ ಅವರು ಇಂಗ್ಲಿಷ್ ಗೀತಗಳಲ್ಲಿ ಪ್ರಕಟಿಸಿದ್ದರೂ ಈ ಕವನವನ್ನು ಬರೆದವರು ಬಿ.ಎಂ.ಶ್ರೀ ಅವರು.  ಈ ಕವನದ ಬಿ.ಎಂ.ಶ್ರೀ ಹಸ್ತಾಕ್ಷರ ಪ್ರತಿ ದೆಹಲಿ ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿರುವ ಶ್ರೀ ಶಾ. ಬಾಲುರಾಯರ ಬಳಿ ಇದೆ.  ಈ ವಿಷಯವನ್ನು ಸಂಪಾದಕ ಮಂಡಳಿಗೆ ತಿಳಿಸಿದವರು ಪ್ರೊ|| ಎಂ.ವಿ.ಸೀತಾರಾಮಯ್ಯ ಮತ್ತು ಡಾ|| ಬಿ.ಸಿ.ರಾಮಚಂದ್ರಶರ್ಮ.  ಮೂಲ ಇಂಗ್ಲಿಷ್ ಕವನನ್ನು ಇಲ್ಲಿ ಪ್ರಕಟಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗಲಿಲ್ಲ.
Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...