Home / ಕವನ / ಕವಿತೆ / ಎಳೆ ನೇಸರು

ಎಳೆ ನೇಸರು

ಭುವಿಯಲ್ಲಿ ಹಿಮದ ಖುತು ಅರೆಗಣ್ಣ ತೆರದಿತ್ತು
ರವಿ ಮೂಡಿ ಮೇಲ್ಬಂದು ಇರ್ಗಳಿಗೆ ಸ೦ದಿತ್ತು

ಮುಚ್ಚಿದ್ದ ಬೆಳ್ಮಂಜು ತೆರೆಯುಗಿದ ತೆರನಿತ್ತು
ಹೆಚ್ಚಿದ್ದ ಕುಳಿರೊರತೆ ಕಾವಿಂಗೆ ಬಾಗಿತ್ತು

ನೇಸರಿನ ಎಳೆಗದಿರು ಹಿಮ ಮಣಿಯ ಮಾಲೆಯನು
ನೇಯ್ದು, ನಲಿಯುತಲಿತ್ತು ರಿಂಗಣಂಗುಣಿತವನು

ದಿನಕರನ ಸಂಖ್ಯಾತ ಕಿರಣಗಳು ಪೂರ್ವದಿಂ
ಸುಸ್ಪಷ್ಟತೆಯನಾಂತು, ವಿವಿಧ ವಿಧ ವರ್ಣದಿ೦-

ಹರಿತಂದು ಮೋದದಿಂ ತಿರೆವೆಣ್ಣನಪ್ಪುತ್ತ,
ಮೃದು ಚುಂಬನವನಿತ್ತು ಪುಲಕವನ್ನಾಗಿಸುತ.-

ಮಿರುಗಿರೆ, ‘ಸಹಸ್ರಕರ’ ನೆಂಬ ಸಂಕುಚಿತಾಖ್ಯೆ
ಮಿಥ್ಯವಾಗಲಸಂಖ್ಯಕರನೆಂಬ ನವ್ಯಾಖ್ಯೆ-

ಸಮನಿಸಿದ ತೆರನಾಯ್ತು! ಹೂಬಿಸಿಲು ಹೂಗಳಗೆ
ಎಸಳೆವೆಯನಲರಿಸಲು, ಹಿಮಬಿಂದು ಜೇನ್‌ಪನಿಗೆ-

ಬೆರೆದೊಂದು ಗೂಡುತ್ತ, ತುಂಬಿಗಳಿಗಾಹ್ವಾನ-
ವೀಯಲವು ಬ೦ದೊಲಿದು ಮಾಡಿದುವು ಮಧುಪಾನ,

ಸೌಸವದ ತನಿಜೇನನೊಲಿದೀಂಟಿ, ಸೊಕ್ಕೇರಿ,
ಅಳಿಗಳೊಂದೇ ಸರದಿ ಸೂಸಿದುವು ಹಾಡ ಸರಿ.

ಹಕ್ಕಿಗಳ ಕೊರಲುಲಿಯು ಕಟ್ಟೊಡೆದು, ಹೊನಲಾಗಿ,
ಬಾನ ದನಿಯಲೆಯಿ೦ದ ದುಂದುಮಿಸಿತಿ೦ಪಾಗಿ

ಬಯಲಿನೊಂದರೆಯಲ್ಲಿ ನಾನಾಗ ನಿಂದಿರಲು,
ಮೂಡಣದ ಬಾನ್ ಚೆಲುವು ಚೆಲುಮೆಯಲಿ ಚಿಮ್ಮಿರಲು,-

ಬಾಲಾರ್ಕನಿದಿರಾಗಿ ನನ್ನ ಕಣ್ಣೆವೆಗಳನು
ಅರಳಿಸುತ, ಮುಗುಳಿಸುತ, ನನ್ನೆಲ್ಲ ದೇಹವನು-

ಎಳೆಬಿಸಿಲ ಮಳೆಯಿಂದ ತೋಯಿಸುತ, ಸ್ವರ್ಗೀಯ
ಸಂತೋಷ ಸಾಗರದಿ ತೇಲಿಸುತಲಾತ್ಮೀಯ-

ಭಾವವನು ಬೆಳಗಿಸುತ, ಮುಗಿಲೋಳಿಗಳ ಮೇಲೆ
ಇರುವೆನಡಿಗೆಯ ನಡೆದು, ಬರುತಿದ್ದ ಮೇಲ್ಮೇಲೆ!

ಗಿಡ ಬಳ್ಳಿಯೆಲೆಗಳಲಿ ನೆಯ್ದಿರುವ ಜೇಡ ಬಲೆ
ನೂಲಿನೆಳೆಗಳು ಚಿನ್ನ ಸರಿಗೆಯಂತಿಹವು ಸಲೆ.

ಭೂದೇವಿಯುಟ್ಟಿರುವ ಹಸುರುಡಿಗೆಯ೦ತೆಸೆವ
ಎಳೆಗಳವೆ ಮಡಿಗಳಿಗೆ ಹೊ೦ಬಣ್ಣ ರವಿಯೀವ.

ಎತ್ತೆತ್ತಲೂ ತಿರೆಯು ಹೊನ್ನ ಹೊಳೆಯಲಿ ತೇಲಿ.
ತನ್ನತನವನು ಮರೆತು, ಹರಿದು ಸೊಗಗಡಲಿನಲಿ-

ಸಂಗಮ೦ಗೊಂಡಂತೆ ಭಾಸವಾಗುತ್ತಲಿತ್ತು.
ಒಂದಿನಿತು ಚಣ ಕಳೆಯಲೊಪ್ಪವೇ ಬೇರಾಯ್ತು:-

ಸ್ವರ್ಣ ಲೇಪದ ಮೇಲೆ ರಜತ ರಸ ಬೆರೆದಂತೆ.
ಬಿಸಿಲೊಸರು ಕಣ್ಗೂಟವನ್ನೂಡಿಸಿತು ಮುಂತೆ!
*****
೧೯೪೦

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...