Home / ಕವನ / ಕವಿತೆ / ತಂಗದಿರ!

ತಂಗದಿರ!

ವಾರ್ಧಿಕ

ಮುಗಿಲುಗಳ ಮೆಟ್ಟಲಿನ ಮೇಲೆ ಮೆಲುನಡಿಗೆಯಲಿ
ನಗು ನಗುತ ಬಿಡದೇರಿ ಬರುತಿರುವೆ ತ೦ಗದಿರ!
ಒಗುಮಿಗೆಯ ಗಮನದಲಿ ಹೋಗುತಿಹೆ ಯಾವೆಡೆಗೆ?
ಗುರಿಯೇನು ಗುರುತಿಲ್ಲವೇ?
ಸೊಗದ ಸನ್ಮಾಂತ್ರಿಕದ ಮಾಟದನುಭವದಿಂದ
ಮೊಗವು ವಿಕಸಿತವಾಗಿ ತೋರುವುದು. ಶಶಿ! ನಿನ್ನ
ಸೊಗಸುಗಾರ್ತಿಯ ಮಡದಿ ರೋಹಿಣಿಯ ಬಳಿಗೆಂದು
ವಿಹರಿಸಲು ಪೋಪೆಯೇನು?


ಅನುದಿನವು ವಿಧು! ನೀನು ಮೂಡುತಿಹೆ-ಮುಳುಗುತಿಹೆ,
ಮನಸಿನೊಳಗಿದಕಾಗಿ ಬೇಸರಿಸಿ, ಬಿದಿಯೊಡನೆ
ಅನುನಯದಿ ಮಾಸಕೊ೦ದಾವರ್ತಿ ದಿನವೊಂದ
‘ರಜೆ’ ಯೆಂದು ಪಡೆದೆಯೇನು?
ಇನನೊಂದು ವಿಧಿಯಿಂದ ಇನಿತೊಂದು ತಪ್ಪದೇ
ದಿನ ದಿನಂ ಮೂಡುವಂ-ಬಾಡುವಂ; ಶಶಿ! ನೀನು
ಹುಣ್ಣಿಮೆಯ ಬಿಟ್ಟುಳಿದ ರಜನಿಯಲಿ ಅನಿತಿನಿತು
ಬೆಳಗಿ ಮರೆಯಾಗುವೇಕೆ?


ನೀನೋಷಧೀಶನಾಗಿರುವೆಯಾದುದರಿಂದ,
ಸಾನುರಾಗದಿ ತರು-ಲತಾಳಿ ಸಸ್ಯಗಳೆಲ್ಲ
ಆನನವನೊಲೆಯುತ್ತಲಿರುತಿಹವು ನಿನ್ನಮೃತ
ಕಿರಣ ಶೀತ ಸ್ಪರ್ಶದಿಂ.
ಕಾನನದಿ ಮಲ್ಲಿಗೆಯು ಮೊದಲಾದ ಕುಸುಮಗಳು
ಸಾನಂದದಿ೦ದ ನಗು ನಗುತ ನೀರಾಜನವ-
ನಾನುವಂತೆಸೆಯುತಿವೆ; ಶಶಿ! ನಿನಗೆ, ನೀನೆಸಗಿ
ದುಪಕಾರದರಿವಿಗಾಗಿ.


ಎತ್ತಲೂ ತಿರೆಯನ್ನು ತೀವಿ ಜೊನ್ನದ ಸರಿಯು
ಸುತ್ತಲಿಡಿದತಿ ಶೋಭೆಯಾಂತೆಸೆವ ಬಿಳಿ ಮೊಸರ
ಮೊತ್ತ ಚೆಲ್ಲಿದ ತೆರದಿ ಬಿತ್ತರವನಾಂತಿಹುದು.
ಆದರೂ ತಂಗದಿರನೇ!
ಕತ್ತಲೆಯ ಕಾಲವಾದುದರಿಂದ ಮರಗಳಡಿ-
ಯತ್ತ ಬಿದ್ದೊರಗಿಹುದು ನೆರಳ ಕಾಳಿಮೆಯದನು
ಕಿತ್ತಳಿಸಿ ಬಿಸುಡಲಾರದೆ, ನಾಚಿ, ಮೊಗದಲ್ಲಿ
ಮಾಲಿನ್ಯವನ್ನಾಂತೆಯೆ?


ತೊಳತೊಳಗಿ, ಬೆಳಬೆಳಗಿ, ಕಳೆವೆತ್ತು ಪೊಳೆಯುತಿಹೆ!
ಕಿಲಕಿಲನೆ ನಗುನಗುತ ಹಾಸ್ಯರೋಚಿಯನೆಲ್ಲ
ಬಳಿಗಳಿಗು ಪಸರಿಸುತ್ತ, ಸಂತೋಷ ಸಾಗರದೊ-
ಳೋಲಾಡಿ ತೇಲಾಡುತ.
ಒಲಿಯುತ್ತ, ನಲಿಯುತ್ತ, ಮುಗಿಲುಗಳ ಮರೆಯಲ್ಲಿ
ನೆಲಸುತ್ತ, ಹೊರಬರುತ, `ಕಣ್ಣ ಮುಚ್ಚಾಲೆ’ ಯಲಿ
ಲಲಿತ ಲೀಲೆಯನಾಂತು, ಬಾಲಕೇಳಿಯ ನಟಿಸಿ,
ಮೆರೆವೆಯೇಂ ತಂಗದಿರನೇ?
*****
೧೯೩೭

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...