Home / ಕವನ / ಕವಿತೆ / ಕಲಪುರಂಷನ ಕಂತೆಯು

ಕಲಪುರಂಷನ ಕಂತೆಯು

ಕಲಿಯ ಕಾಲದ ಕಂತೆಯ ಕೇಳಿರಿ ಕೂಡಿದ ಜನರೆಲ್ಲಾ |
ಕಲಿಯು ತನ್ನಯ ತಾಂಡವ ಪೂಡಿಹ ವಿಶ್ವದೊಳೆಲ್ಲೆಲ್ಲಾ || ೧ ||

ಹುಲಿಗೆಯಂಜದವ ನಿಲಿಗೆಯಂಜುವುದು ಪ್ಲೇಗದ ಭಯವಲ್ಲಾ |
ಸುಲಿಗೆಯೆಲ್ಲೆಡೆ ಹಬ್ಬಿದೆ ನರರೊಳು ವಿಶ್ವದೊಳೆಲ್ಲೆಲ್ಲಾ || ೨ ||

ರಾಷ್ಟ್ರ ರಾಷ್ಟ್ರದ ನಡುವೆ ಹೆಬ್ಬುತಿದೆ ಹಗೆತನವೆಲ್ಲೆಲ್ಲಾ
ರಾಷ್ಟ್ರನಾಯಕರು ಸ್ವಾರ್ಥದಿ ಶಾಂತಿಯ ಕದಡುವರೆಲ್ಲೆಲ್ಲಾ || ೩||

ವಿಶ್ವಪಿತನ ಪರಮಾತ್ಮನ ನಂಬುವ ಜನಗಳೆ ಉಳಿದಿಲ್ಲಾ |
ವಿಶ್ವಮೇಧದೊಳ್ಕಲೆಯುತೆ ರಕುತವ ಹರಿಸುವರೆಲ್ಲೆಲ್ಲಾ || ೪ ||

ತಂದೆತಾಯಿ ಗುರುಹಿರಿಯರ ಸ್ಮರಣೆಗೆ ಮನದೊಳಗಿಂಬಿಲ್ಲಾ
ಕಂಡಕಂಡಪೆಣ್ಣೊಳ್ಳುತೆ ಗೃಹಿಣಿಯ ಮಾಳ್ಪರು ಎಲ್ಲೆಲ್ಲಾ || ೫ ||

ಧರ್ಮಗುರುಗಳೇ ಧರ್ಮದ ಛದ್ಮದಿ ಸುಲಿಗೆ ಮಾಳ್ಪಬರಲ್ಲಾ
ಕರ್‍ಮಮಾಡದಲೆ ಫಲವ ಬೇಡಿಪಬಂಟರೆಯೆಲ್ಲೆಲ್ಲಾ || ೬||

ಕಪ್ಪು ಸಂತೆಯೆ ದುಡ್ಡನು ಗಳಿಸುವ ಮಾರ್ಗವೆನಿಪುದಲ್ಲಾ |
ಉಪ್ಪುವುಂಡವಗೆ ಮೋಸಗೊಳಿಪುದೆ ಜಾಣ್ಮೆಲಕ್ಕಣಲ್ಲಾ || ೭||

ದೇಶಭಕ್ತರ ಸೋಗಿಲಿ ಲಂಚವ ಪಡೆದರೆ ತಪ್ಪಲ್ಲಾ |
ದೇಶಶೀಳುತೆ ಜನಗಳ ಕೊಲ್ವುದೆ ಪರಮ ಧರ್ಮವಲ್ಲಾ || ೮ ||

ಬಿಳಿಯ ಟೊಪ್ಪಿಗೆ ವೇಷದಿ ಜನಗಳ ಸುಲಿದರೆ ತಪ್ಪಲ್ಲಾ |
ಸುಳಿಯನರಿಯುತೆ ಸುಳ್ಳನು ಪೇಳ್ವುದೆ ಲೋಕರೂಢಿಯಲ್ಲಾ || ೯ ||

ಕರ್ಮಯೋಗಿಯ ಗಾಂಧಿಯ ಕೊಲ್ವುದೆ ತೂರಲಕ್ಕಣಲ್ಲಾ |
ಮರ್ಮವಿದನು ನೀಂ ತಿಳಿದು ನಡೆದೊಡೆ ಕಲಿಯಭಯವೆಯಿಲ್ಲಾ || ೧೦ ||
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...