Home / ಕವನ / ಕವಿತೆ / ಕಲಪುರಂಷನ ಕಂತೆಯು

ಕಲಪುರಂಷನ ಕಂತೆಯು

ಕಲಿಯ ಕಾಲದ ಕಂತೆಯ ಕೇಳಿರಿ ಕೂಡಿದ ಜನರೆಲ್ಲಾ |
ಕಲಿಯು ತನ್ನಯ ತಾಂಡವ ಪೂಡಿಹ ವಿಶ್ವದೊಳೆಲ್ಲೆಲ್ಲಾ || ೧ ||

ಹುಲಿಗೆಯಂಜದವ ನಿಲಿಗೆಯಂಜುವುದು ಪ್ಲೇಗದ ಭಯವಲ್ಲಾ |
ಸುಲಿಗೆಯೆಲ್ಲೆಡೆ ಹಬ್ಬಿದೆ ನರರೊಳು ವಿಶ್ವದೊಳೆಲ್ಲೆಲ್ಲಾ || ೨ ||

ರಾಷ್ಟ್ರ ರಾಷ್ಟ್ರದ ನಡುವೆ ಹೆಬ್ಬುತಿದೆ ಹಗೆತನವೆಲ್ಲೆಲ್ಲಾ
ರಾಷ್ಟ್ರನಾಯಕರು ಸ್ವಾರ್ಥದಿ ಶಾಂತಿಯ ಕದಡುವರೆಲ್ಲೆಲ್ಲಾ || ೩||

ವಿಶ್ವಪಿತನ ಪರಮಾತ್ಮನ ನಂಬುವ ಜನಗಳೆ ಉಳಿದಿಲ್ಲಾ |
ವಿಶ್ವಮೇಧದೊಳ್ಕಲೆಯುತೆ ರಕುತವ ಹರಿಸುವರೆಲ್ಲೆಲ್ಲಾ || ೪ ||

ತಂದೆತಾಯಿ ಗುರುಹಿರಿಯರ ಸ್ಮರಣೆಗೆ ಮನದೊಳಗಿಂಬಿಲ್ಲಾ
ಕಂಡಕಂಡಪೆಣ್ಣೊಳ್ಳುತೆ ಗೃಹಿಣಿಯ ಮಾಳ್ಪರು ಎಲ್ಲೆಲ್ಲಾ || ೫ ||

ಧರ್ಮಗುರುಗಳೇ ಧರ್ಮದ ಛದ್ಮದಿ ಸುಲಿಗೆ ಮಾಳ್ಪಬರಲ್ಲಾ
ಕರ್‍ಮಮಾಡದಲೆ ಫಲವ ಬೇಡಿಪಬಂಟರೆಯೆಲ್ಲೆಲ್ಲಾ || ೬||

ಕಪ್ಪು ಸಂತೆಯೆ ದುಡ್ಡನು ಗಳಿಸುವ ಮಾರ್ಗವೆನಿಪುದಲ್ಲಾ |
ಉಪ್ಪುವುಂಡವಗೆ ಮೋಸಗೊಳಿಪುದೆ ಜಾಣ್ಮೆಲಕ್ಕಣಲ್ಲಾ || ೭||

ದೇಶಭಕ್ತರ ಸೋಗಿಲಿ ಲಂಚವ ಪಡೆದರೆ ತಪ್ಪಲ್ಲಾ |
ದೇಶಶೀಳುತೆ ಜನಗಳ ಕೊಲ್ವುದೆ ಪರಮ ಧರ್ಮವಲ್ಲಾ || ೮ ||

ಬಿಳಿಯ ಟೊಪ್ಪಿಗೆ ವೇಷದಿ ಜನಗಳ ಸುಲಿದರೆ ತಪ್ಪಲ್ಲಾ |
ಸುಳಿಯನರಿಯುತೆ ಸುಳ್ಳನು ಪೇಳ್ವುದೆ ಲೋಕರೂಢಿಯಲ್ಲಾ || ೯ ||

ಕರ್ಮಯೋಗಿಯ ಗಾಂಧಿಯ ಕೊಲ್ವುದೆ ತೂರಲಕ್ಕಣಲ್ಲಾ |
ಮರ್ಮವಿದನು ನೀಂ ತಿಳಿದು ನಡೆದೊಡೆ ಕಲಿಯಭಯವೆಯಿಲ್ಲಾ || ೧೦ ||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...