Home / ಕವನ / ಕವಿತೆ / ಜಾತೀಯತೆಯು

ಜಾತೀಯತೆಯು

ಸಾತ್ವಿಕರಾಜಸ ತಾಮಸಗುಣಗಳ ತಾತ್ವಿಕವಿಧಿಯಿಂಮಿಶ್ರಣ ಮಾಡುತೆ |
ಸಾತ್ವಿಕ ಬೊಮ್ಮನು ದೇಹಘಟಗಳ ನಿತ್ಯದಿ ನಿರ್ಮಿಪನೂ |
ಆತ್ಮನು ನೆಮ್ಮುದಿ ಪಡೆಯುತೆ ಘಟದೊಳು ವಾಸಿಸಿದೇಹಿಯುಎನಿಸುತ್ತೆ |
ಆತ್ಮನು ಕಾಯಕವೆಸಗಲು ಬರುವನು ಜಗದೊಳು ತಾನಂದೂ || ೧ ||

ಶ್ರಮವಿಭಾಗವ ಮಾಡಲು ಗುಣಗಳ ಹೊಂದಿಸಿ ಸಿರಿರಮಣಾ |
ಶ್ರಮದಿಂ ನಾಲ್ವರ್ಣಗಳನು ಪೇಳಿದ ಪಾಲಿಸೆ ಮಾನವರೂ |
ಶ್ರಮವರಿಯುತೆ ನರಕಾಯಕವೆಸಗಲು ನಿಪುಣತೆ ತಾಪಡೆದು |
ಶ್ರಮವೆನಿಸದೆ ತಾಬಾಳುವ ಜಗದೊಳು ಸಂತಸಪಡೆಯುತ್ತೆ || ೨ ||

ಜಾತಿಯಮೂಲವ ನರಿಯದೆ ಜನಗಳು ಸ್ವಾರ್ಥದಿರೇಗುತ್ತೆ |
ಕೋತಿಯಂದದಿ ಕುಣಿಯುತೆ ವಿಶ್ವದಶಾಂತಿಯ ಕದಡುವರೂ ||
ಜಾತಿಯಜಗಳದ ನಂಜಿನ ಬೀಜವನೂಳುತೆ ವಿಶ್ವದೊಳೂ |
ಕೋತಿಮನದ ಮುಂದಾಳ್ಗಳು ಸ್ವಾರ್ಥದಿ ಬೇಳೆಯ ಬೇಯ್ಸುವರು || ೩ ||

ತಿಳಿದುನೋಡೆ ಮಾನವ ಕುಲವೆಲ್ಲವು ಮನುವಿನ ಸಂತತಿಯೂ |
ಅಳಿದು ಪ್ರೇಮವ ತಮ್ಮೊಳು ಜಗಳವಹೂಡಿಹರೆಲ್ಲೆಲ್ಲೂ ||
ತಳೆದು ಪ್ರೇಮವ ನಡೆದೊಡೆ ಜನತೆಯು ನಲಿವುದು ಸಂತಸದಿ |
ತಿಳುವುಪುಟ್ಟೆ ಜನಮರೆವುದು ಜಾತಿಯ ಕಲಹವನೆಂದೆಂದೂ || ೪ ||

ತಂದೆ ತಾಯಿಗಳ ಜಾತಿಯು ಬಾರದುಮನುಜರನಿನೆಂದೆಂದೂ |
ಒಂದೆಕಾಯಕವ ಸಂತಸಮಾಡಲು ಜಾತಿಯ ಹೊಂದುವನೂ ||
ಹಿಂದೆ ಕೌಸಿಕನು ತಪವನುಗೈಯುತೆ ಪಾರ್‍ವನು ತಾನಾದ |
ನಿಂದ್ಯಕರ್ಮದಿಂ ಪುತ್ತಿನ ಕುವರನು ಬೇಡನು ತಾನಾದ || ೫ ||

ಆರ್ಯ ಜನಗಳೇ ಅಲೆಯುತೆ ವಿಶ್ವದಿ ಸಂಸ್ಕೃತಿ ಬೀರಿದರೂ |
ಬೇರೆಬೇರೆ ಋಷಿಶಿಷ್ಯರೆ ಆದರು ಜಾತಿಯ ಬಾಂಧವರು ||
ಸಾರಿ ಹೇಳುವೆನು ನಡದಿದೆ ಬೆರಿಕೆಯು ವಿಶ್ವದೊಳೆಂದೆಂದೂ
ದೂರುಮಾಡುತೆ ಜಾತಿಯ ಕುರುಡನು ಬಾಳ್ವುದು ಶಾಂತಿಯಲಿ || ೬ ||
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...