Home / ಕವನ / ಕವಿತೆ / ಭಿಕ್ಷುಕನು

ಭಿಕ್ಷುಕನು

ಕುಂಬಳ ಸೊಟ್ಟೀಕೈಯೊಳು ಪಿಡಿದು ನಡುವಿಗೆ ಲಂಗುಟಪಟ್ಟಿಯ ಬಿಗಿದು|
ಕುಂಬಳರಾಜನ ಪಟ್ಟಣದೊಳಗೆ ನಡೆದನು ತಾಜೋಗಿ || ೧||

ಉಂಬಳಿ ತನಗೆ ಮೂಜಗವಾಗೆ ತಿಂಬುವ ಅನ್ನದ ಕೊರೆತೆಯನೀಗಿ |
ತುಂಬಿದ ಊರೊಳು ಜನಮನ ಪರಿಕಿಸೆ ನಡೆದನು ತಾಜೋಗಿ || ೨||

ಭಿಕ್ಷೆಯ ಬೇಡಲು ಬಂದಿಹೆನಮ್ಮಾ ಮತ್ಸರಿವಿರದಿರೆ ಭಿಕ್ಷೆಯ ನೀಡು |
ತುಚ್ಛರ ಮನೆಯ ಭಿಕ್ಷೆಯ ನೆಂದಿಗೂ ಗ್ರಹಿಸೆನು ನಾನಿಂದೂ || ೩ ||

ಮನೆಯಜಮಾನನು ಮೈಮುರಿ ದುಡಿದು ಹೊಲದೊಳು ಧಾನ್ಯವ ಬೆಳೆದಿರೆ ನೀ |
ನನುನಯದಿಂದಲಿ ನೀಡಲು ಭಿಕ್ಷೆಯ ಗ್ರಹಿಸುವೆ ಪ್ರೇಮದಲ್ಲಿ || ೪ ||

ಮಾನಸ ಶ್ರಮವನು ಮಾಡುತೆ ನಿನ್ನಯ ಪ್ರೇಮದಪತಿ ಧನಗಳಿಸುತಿರೆ |
ದಾನವ ಭಕುತಿಲಿ ಮಾಡಿದೊಡದನನು ಸಾನಂದದಿನಾಂ ಕೊಳ್ಳುವೆನೂ ||೫||

ಅನ್ನದ ವಸ್ತ್ರದ ಕೊರೆತೆಯನರಿಯೆನು ನನ್ನಯಗೆಳೆಯವ ಧನಪತಿಯು |
ಚಿನ್ನ ಮನದಿನೀ ನೆನ್ನೊಳು ನೀಡುವ ಭಕುತಿಯ ಭಿಕ್ಷೆಯ ಕೊಳ್ಳುವೆನು ||೬||

ಜಾತಿ ವಿಜಾತಿಯ ಭೇಧವ ನೆರಿಯೆನು ಪ್ರೀತಿಯಿಂದೆ ನೀಭಿಕ್ಷೆಯನೀಡಲು |
ಓತುಹರಿಸುವೆ ನಖಂಡಸು ಮಂಗಲೆಯಾಗುತೆ ನೀ ಪೊಳೆಯೆಂದೂ || ೭||

ಪೆಣ್ಣನು ಪೊರೆವೆನು ಪತಿರೂಪದಿ ನಾಧನ್ಯ ಸದಾಶಿವ ಮೂರುತಿಯು |
ಇನ್ನು ಜನಗಳ ಪಾಲಿಪೆ ತಂದೆಯ ರೂಪದಿ ಶ್ರೀಹರಿ ವಿಶ್ವಾತ್ಮಾ || ೮ ||

ಸಂಣಮಕ್ಕಳರೂಪದಿ ಪೊರೆವಳು ಎನ್ನಯಸತಿಜಗದಂಬೆ |
ನಿನ್ನಯ ಅತಿಥಿಯ ರೂಪದಿ ಬಂದಿಹೆ ಜಗದೊಳು ನಾನಿಂದೂ || ೯ ||

ಸನ್ನುತ ಬಿಜ್ಜೆಯ ವಿತರಣ ಕಾರ್ಯವ ಸರಸತಿರೂಪದಿ ಮಾಡುವೆನೂ |
ಇನ್ನುನಾನು ಮಾಡದ ಕಾಯಕವದು ಜಗದೊಳಗೇನುಂಟು || ೧೦||

ಕಪ್ಪು ಸಂತೆಯಿಂ ಜನಗಳು ದುಡ್ಡನು ಗಳಿಸುವರೆಂಬ ದೂರನುಕೇಳುತೆ |
ತಪ್ಪನು ತಿದ್ದಲು ಜಗದಲಿ ಬಂದಿಹೆ ಜೋಗಿಯ ವೇಷದಲಿ || ೧೧ ||

ವಕ್ಕಲಿಗರು ತಾ ರೊಕ್ಕದ ಆಶಿಲಿ ಹೊಲಬೀಳ್ಗೆಡಹುತೆ ಪೀಡಿಪರೊಡೆಯ ನ|
ಚೊಕ್ಕು ಭೂಮಿಯನು ಮಾಡುತೆ ಬೆಳೆಯಲು ಬುದ್ಧಿಯ ಹೇಳುವೆನೂ || ೧೨ ||

ಚಿಕ್ಕಮಕ್ಕಳು ಬಸವಮೋಹನರು ಜಗದಿ ಮಾಡಿದ ಬೋಧೆಗಳಾ |
ಚೊಕ್ಕಮನದಿ ಜನ ತಿಳಿದು ನಡೆದೊಡೆನಾನಲಿನೆನು ಸಂತಸದಿ || ೧೩||

ಶಿವಾ ಮಾದೇವಾ ನಾನೇ ಶಿವಾ ನೀತಿಗೆಟ್ಟವಗೆ ಎಲ್ಲಿ ಶಿವಾ||
*****

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...