Home / ಕವನ / ಕವಿತೆ / ಭಿಕ್ಷುಕನು

ಭಿಕ್ಷುಕನು

ಕುಂಬಳ ಸೊಟ್ಟೀಕೈಯೊಳು ಪಿಡಿದು ನಡುವಿಗೆ ಲಂಗುಟಪಟ್ಟಿಯ ಬಿಗಿದು|
ಕುಂಬಳರಾಜನ ಪಟ್ಟಣದೊಳಗೆ ನಡೆದನು ತಾಜೋಗಿ || ೧||

ಉಂಬಳಿ ತನಗೆ ಮೂಜಗವಾಗೆ ತಿಂಬುವ ಅನ್ನದ ಕೊರೆತೆಯನೀಗಿ |
ತುಂಬಿದ ಊರೊಳು ಜನಮನ ಪರಿಕಿಸೆ ನಡೆದನು ತಾಜೋಗಿ || ೨||

ಭಿಕ್ಷೆಯ ಬೇಡಲು ಬಂದಿಹೆನಮ್ಮಾ ಮತ್ಸರಿವಿರದಿರೆ ಭಿಕ್ಷೆಯ ನೀಡು |
ತುಚ್ಛರ ಮನೆಯ ಭಿಕ್ಷೆಯ ನೆಂದಿಗೂ ಗ್ರಹಿಸೆನು ನಾನಿಂದೂ || ೩ ||

ಮನೆಯಜಮಾನನು ಮೈಮುರಿ ದುಡಿದು ಹೊಲದೊಳು ಧಾನ್ಯವ ಬೆಳೆದಿರೆ ನೀ |
ನನುನಯದಿಂದಲಿ ನೀಡಲು ಭಿಕ್ಷೆಯ ಗ್ರಹಿಸುವೆ ಪ್ರೇಮದಲ್ಲಿ || ೪ ||

ಮಾನಸ ಶ್ರಮವನು ಮಾಡುತೆ ನಿನ್ನಯ ಪ್ರೇಮದಪತಿ ಧನಗಳಿಸುತಿರೆ |
ದಾನವ ಭಕುತಿಲಿ ಮಾಡಿದೊಡದನನು ಸಾನಂದದಿನಾಂ ಕೊಳ್ಳುವೆನೂ ||೫||

ಅನ್ನದ ವಸ್ತ್ರದ ಕೊರೆತೆಯನರಿಯೆನು ನನ್ನಯಗೆಳೆಯವ ಧನಪತಿಯು |
ಚಿನ್ನ ಮನದಿನೀ ನೆನ್ನೊಳು ನೀಡುವ ಭಕುತಿಯ ಭಿಕ್ಷೆಯ ಕೊಳ್ಳುವೆನು ||೬||

ಜಾತಿ ವಿಜಾತಿಯ ಭೇಧವ ನೆರಿಯೆನು ಪ್ರೀತಿಯಿಂದೆ ನೀಭಿಕ್ಷೆಯನೀಡಲು |
ಓತುಹರಿಸುವೆ ನಖಂಡಸು ಮಂಗಲೆಯಾಗುತೆ ನೀ ಪೊಳೆಯೆಂದೂ || ೭||

ಪೆಣ್ಣನು ಪೊರೆವೆನು ಪತಿರೂಪದಿ ನಾಧನ್ಯ ಸದಾಶಿವ ಮೂರುತಿಯು |
ಇನ್ನು ಜನಗಳ ಪಾಲಿಪೆ ತಂದೆಯ ರೂಪದಿ ಶ್ರೀಹರಿ ವಿಶ್ವಾತ್ಮಾ || ೮ ||

ಸಂಣಮಕ್ಕಳರೂಪದಿ ಪೊರೆವಳು ಎನ್ನಯಸತಿಜಗದಂಬೆ |
ನಿನ್ನಯ ಅತಿಥಿಯ ರೂಪದಿ ಬಂದಿಹೆ ಜಗದೊಳು ನಾನಿಂದೂ || ೯ ||

ಸನ್ನುತ ಬಿಜ್ಜೆಯ ವಿತರಣ ಕಾರ್ಯವ ಸರಸತಿರೂಪದಿ ಮಾಡುವೆನೂ |
ಇನ್ನುನಾನು ಮಾಡದ ಕಾಯಕವದು ಜಗದೊಳಗೇನುಂಟು || ೧೦||

ಕಪ್ಪು ಸಂತೆಯಿಂ ಜನಗಳು ದುಡ್ಡನು ಗಳಿಸುವರೆಂಬ ದೂರನುಕೇಳುತೆ |
ತಪ್ಪನು ತಿದ್ದಲು ಜಗದಲಿ ಬಂದಿಹೆ ಜೋಗಿಯ ವೇಷದಲಿ || ೧೧ ||

ವಕ್ಕಲಿಗರು ತಾ ರೊಕ್ಕದ ಆಶಿಲಿ ಹೊಲಬೀಳ್ಗೆಡಹುತೆ ಪೀಡಿಪರೊಡೆಯ ನ|
ಚೊಕ್ಕು ಭೂಮಿಯನು ಮಾಡುತೆ ಬೆಳೆಯಲು ಬುದ್ಧಿಯ ಹೇಳುವೆನೂ || ೧೨ ||

ಚಿಕ್ಕಮಕ್ಕಳು ಬಸವಮೋಹನರು ಜಗದಿ ಮಾಡಿದ ಬೋಧೆಗಳಾ |
ಚೊಕ್ಕಮನದಿ ಜನ ತಿಳಿದು ನಡೆದೊಡೆನಾನಲಿನೆನು ಸಂತಸದಿ || ೧೩||

ಶಿವಾ ಮಾದೇವಾ ನಾನೇ ಶಿವಾ ನೀತಿಗೆಟ್ಟವಗೆ ಎಲ್ಲಿ ಶಿವಾ||
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...