Home / ಕವನ / ಕವಿತೆ / ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕ್ಷಣ ಕ್ಷಣಕೂ ಏರುಬ್ಬರವಾಗಿ
ಭಗ್ನವಾಗುವ ಕನಸುಗಳ ಎಸೆಯದಿರಿ
ತುಂಬು ಕತ್ತಲೆಯ ಹೆಜ್ಜೆಗಳಿಗೆ
ಚುಕ್ಕೆಗಳ ಭರವಸೆಯ ಮಾತುಗಳು
ಗಜಿಬಿಜಿ ಹಾದಿಯಲ್ಲೂ
ಕುರುಡನಿಗೆ ಕೋಲು, ನಿರಾಳ ಉಸಿರು

ಅಂತರಂಗದ ಮಾತುಗಳು
ಮೂಕ ಕುರುಡು ಹೆಳವುಗಳೆಂದು
ನಿರಾಶರಾದರೆ ಹೇಗೆ?
ಮೌನ ಮುರಿದು ಮಾತು ಚಿಗಿತು
ಕಣ್ಣಂಚಿನ ಹನಿಗಳು
ಗಲ್ಲ ಸ್ಪರ್ಶಿಸಿ ಮುಂಗೈಗೆ ಬಿದ್ದದ್ದೇ
ಹೃದಯ ಹಗುರು ಸಂತೃಪ್ತ ಉಸಿರು

ವರ್ತಮಾನ ಭವಿಷ್ಯವೆಲ್ಲಾ
ಅರ್ಥವಿಲ್ಲದ್ದು ಎಂದಿರಾ !
ಹುಷಾರು, ಕಸಕಡ್ಡಿ ಬೆಳೆದು
ಬರಡಾದೀತು ಮನಸು
ಸುಟ್ಟು ಸುಣ್ಣವಾದಾವು ಕನಸುಗಳು,
ಮೇಲೆ ಕಟ್ಟಿಬಿಟ್ಟಾರು ಸಮಾಧಿ-
ನೋಡಿ ಆಕಾಶದಂಗಳ
ತೆರ ತೆರನಾದ ಬೆಳ್ಳಿಮೋಡಗಳ
ಕ್ಷಣ ಕ್ಷಣದ ಸಂತಸ
ಇದ್ದರೆ ಇರಲಿ ಏನಂತೆ ನಡುವೆ
ಕಪ್ಪು ಹಳದಿ ಮೋಡಗಳೂ-
ಕೆನ್ನೆ ಮೇಲಿನ ಗುಳಿಯಂತೆ.

ಬಿಸಿಲು ಬೇಗೆ
ಎಲ್ಲೆಲ್ಲೂ ದಾವಾನಲ, ನೀರಡಿಕೆ
ಎದುರಿಗೆ ಸಮುದ್ರದ ಭೋರ್ಗರೆತ
ಸಮುದ್ರಕ್ಕೆ ಬಾಯಿಹಚ್ಚಿ
ತಣಿಯುವ ತವಕ
ಆದರೆ, ಉಪ್ಪುಪ್ಪು ಜಿಗುಟು ಎಂದರೆ ಹೇಗೆ?
ಇರಲಿ, ಮುಖದ ಮೇಲಾದರೂ
ನೀರು ಚಿಮುಕಿಸಿಕೊಳ್ಳಿ
ಕಡಲಿನಲಿ ಕಾಲಾದರೂ ಎದ್ದಿ
ತಂಪಡರೀತು ಮೈಮನ.

ಬಿಡಿ ಆತ್ಮ ನಿಂದನೆ
ಮನದಾಳದ ಮೌನ, ನಿರಾಶೆ
ಒಂದೊಂದೆ ಒಡಲಾಳಕ್ಕೆ (ಕಲೀಡೋಸ್ಕೋಪ್) ಇಳಿಸಿ.

ಆಹಾ !!
ಎಷ್ಟೊಂದು ಮಾತುಗಳು
ಎಷ್ಟೊಂದು ಚಿತ್ರಗಳು
ಎಷ್ಟೊಂದು ಅರ್ಥಗಳು
ಈ ಮಗ್ಗಲು ಆ ಮಗ್ಗಲು
ಮತ್ತೊಂದು ಮಗ್ಗಲು ಇನ್ನೊಂದು ಮಗ್ಗಲು
ಹಾಗೇ ಮತ್ತೆ ಮತ್ತೆ
ತಡಕಾಟ ಹುಡುಕಾಟ

ಏನಿದು ಸಂಭ್ರಮ
ಬಿರಿದ ನೆಲಕೆ ಮಳೆ ಹನಿಯ ಸ್ಪರ್ಶ
ಮೊಗ್ಗೊಡೆದು ಘಮ್ಮೆನ್ನುವ ಸಮಯ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...