Home / ಕವನ / ಕವಿತೆ / ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕ್ಷಣ ಕ್ಷಣಕೂ ಏರುಬ್ಬರವಾಗಿ
ಭಗ್ನವಾಗುವ ಕನಸುಗಳ ಎಸೆಯದಿರಿ
ತುಂಬು ಕತ್ತಲೆಯ ಹೆಜ್ಜೆಗಳಿಗೆ
ಚುಕ್ಕೆಗಳ ಭರವಸೆಯ ಮಾತುಗಳು
ಗಜಿಬಿಜಿ ಹಾದಿಯಲ್ಲೂ
ಕುರುಡನಿಗೆ ಕೋಲು, ನಿರಾಳ ಉಸಿರು

ಅಂತರಂಗದ ಮಾತುಗಳು
ಮೂಕ ಕುರುಡು ಹೆಳವುಗಳೆಂದು
ನಿರಾಶರಾದರೆ ಹೇಗೆ?
ಮೌನ ಮುರಿದು ಮಾತು ಚಿಗಿತು
ಕಣ್ಣಂಚಿನ ಹನಿಗಳು
ಗಲ್ಲ ಸ್ಪರ್ಶಿಸಿ ಮುಂಗೈಗೆ ಬಿದ್ದದ್ದೇ
ಹೃದಯ ಹಗುರು ಸಂತೃಪ್ತ ಉಸಿರು

ವರ್ತಮಾನ ಭವಿಷ್ಯವೆಲ್ಲಾ
ಅರ್ಥವಿಲ್ಲದ್ದು ಎಂದಿರಾ !
ಹುಷಾರು, ಕಸಕಡ್ಡಿ ಬೆಳೆದು
ಬರಡಾದೀತು ಮನಸು
ಸುಟ್ಟು ಸುಣ್ಣವಾದಾವು ಕನಸುಗಳು,
ಮೇಲೆ ಕಟ್ಟಿಬಿಟ್ಟಾರು ಸಮಾಧಿ-
ನೋಡಿ ಆಕಾಶದಂಗಳ
ತೆರ ತೆರನಾದ ಬೆಳ್ಳಿಮೋಡಗಳ
ಕ್ಷಣ ಕ್ಷಣದ ಸಂತಸ
ಇದ್ದರೆ ಇರಲಿ ಏನಂತೆ ನಡುವೆ
ಕಪ್ಪು ಹಳದಿ ಮೋಡಗಳೂ-
ಕೆನ್ನೆ ಮೇಲಿನ ಗುಳಿಯಂತೆ.

ಬಿಸಿಲು ಬೇಗೆ
ಎಲ್ಲೆಲ್ಲೂ ದಾವಾನಲ, ನೀರಡಿಕೆ
ಎದುರಿಗೆ ಸಮುದ್ರದ ಭೋರ್ಗರೆತ
ಸಮುದ್ರಕ್ಕೆ ಬಾಯಿಹಚ್ಚಿ
ತಣಿಯುವ ತವಕ
ಆದರೆ, ಉಪ್ಪುಪ್ಪು ಜಿಗುಟು ಎಂದರೆ ಹೇಗೆ?
ಇರಲಿ, ಮುಖದ ಮೇಲಾದರೂ
ನೀರು ಚಿಮುಕಿಸಿಕೊಳ್ಳಿ
ಕಡಲಿನಲಿ ಕಾಲಾದರೂ ಎದ್ದಿ
ತಂಪಡರೀತು ಮೈಮನ.

ಬಿಡಿ ಆತ್ಮ ನಿಂದನೆ
ಮನದಾಳದ ಮೌನ, ನಿರಾಶೆ
ಒಂದೊಂದೆ ಒಡಲಾಳಕ್ಕೆ (ಕಲೀಡೋಸ್ಕೋಪ್) ಇಳಿಸಿ.

ಆಹಾ !!
ಎಷ್ಟೊಂದು ಮಾತುಗಳು
ಎಷ್ಟೊಂದು ಚಿತ್ರಗಳು
ಎಷ್ಟೊಂದು ಅರ್ಥಗಳು
ಈ ಮಗ್ಗಲು ಆ ಮಗ್ಗಲು
ಮತ್ತೊಂದು ಮಗ್ಗಲು ಇನ್ನೊಂದು ಮಗ್ಗಲು
ಹಾಗೇ ಮತ್ತೆ ಮತ್ತೆ
ತಡಕಾಟ ಹುಡುಕಾಟ

ಏನಿದು ಸಂಭ್ರಮ
ಬಿರಿದ ನೆಲಕೆ ಮಳೆ ಹನಿಯ ಸ್ಪರ್ಶ
ಮೊಗ್ಗೊಡೆದು ಘಮ್ಮೆನ್ನುವ ಸಮಯ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...