Home / ಕವನ / ಕವಿತೆ / ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕ್ಷಣ ಕ್ಷಣಕೂ ಏರುಬ್ಬರವಾಗಿ
ಭಗ್ನವಾಗುವ ಕನಸುಗಳ ಎಸೆಯದಿರಿ
ತುಂಬು ಕತ್ತಲೆಯ ಹೆಜ್ಜೆಗಳಿಗೆ
ಚುಕ್ಕೆಗಳ ಭರವಸೆಯ ಮಾತುಗಳು
ಗಜಿಬಿಜಿ ಹಾದಿಯಲ್ಲೂ
ಕುರುಡನಿಗೆ ಕೋಲು, ನಿರಾಳ ಉಸಿರು

ಅಂತರಂಗದ ಮಾತುಗಳು
ಮೂಕ ಕುರುಡು ಹೆಳವುಗಳೆಂದು
ನಿರಾಶರಾದರೆ ಹೇಗೆ?
ಮೌನ ಮುರಿದು ಮಾತು ಚಿಗಿತು
ಕಣ್ಣಂಚಿನ ಹನಿಗಳು
ಗಲ್ಲ ಸ್ಪರ್ಶಿಸಿ ಮುಂಗೈಗೆ ಬಿದ್ದದ್ದೇ
ಹೃದಯ ಹಗುರು ಸಂತೃಪ್ತ ಉಸಿರು

ವರ್ತಮಾನ ಭವಿಷ್ಯವೆಲ್ಲಾ
ಅರ್ಥವಿಲ್ಲದ್ದು ಎಂದಿರಾ !
ಹುಷಾರು, ಕಸಕಡ್ಡಿ ಬೆಳೆದು
ಬರಡಾದೀತು ಮನಸು
ಸುಟ್ಟು ಸುಣ್ಣವಾದಾವು ಕನಸುಗಳು,
ಮೇಲೆ ಕಟ್ಟಿಬಿಟ್ಟಾರು ಸಮಾಧಿ-
ನೋಡಿ ಆಕಾಶದಂಗಳ
ತೆರ ತೆರನಾದ ಬೆಳ್ಳಿಮೋಡಗಳ
ಕ್ಷಣ ಕ್ಷಣದ ಸಂತಸ
ಇದ್ದರೆ ಇರಲಿ ಏನಂತೆ ನಡುವೆ
ಕಪ್ಪು ಹಳದಿ ಮೋಡಗಳೂ-
ಕೆನ್ನೆ ಮೇಲಿನ ಗುಳಿಯಂತೆ.

ಬಿಸಿಲು ಬೇಗೆ
ಎಲ್ಲೆಲ್ಲೂ ದಾವಾನಲ, ನೀರಡಿಕೆ
ಎದುರಿಗೆ ಸಮುದ್ರದ ಭೋರ್ಗರೆತ
ಸಮುದ್ರಕ್ಕೆ ಬಾಯಿಹಚ್ಚಿ
ತಣಿಯುವ ತವಕ
ಆದರೆ, ಉಪ್ಪುಪ್ಪು ಜಿಗುಟು ಎಂದರೆ ಹೇಗೆ?
ಇರಲಿ, ಮುಖದ ಮೇಲಾದರೂ
ನೀರು ಚಿಮುಕಿಸಿಕೊಳ್ಳಿ
ಕಡಲಿನಲಿ ಕಾಲಾದರೂ ಎದ್ದಿ
ತಂಪಡರೀತು ಮೈಮನ.

ಬಿಡಿ ಆತ್ಮ ನಿಂದನೆ
ಮನದಾಳದ ಮೌನ, ನಿರಾಶೆ
ಒಂದೊಂದೆ ಒಡಲಾಳಕ್ಕೆ (ಕಲೀಡೋಸ್ಕೋಪ್) ಇಳಿಸಿ.

ಆಹಾ !!
ಎಷ್ಟೊಂದು ಮಾತುಗಳು
ಎಷ್ಟೊಂದು ಚಿತ್ರಗಳು
ಎಷ್ಟೊಂದು ಅರ್ಥಗಳು
ಈ ಮಗ್ಗಲು ಆ ಮಗ್ಗಲು
ಮತ್ತೊಂದು ಮಗ್ಗಲು ಇನ್ನೊಂದು ಮಗ್ಗಲು
ಹಾಗೇ ಮತ್ತೆ ಮತ್ತೆ
ತಡಕಾಟ ಹುಡುಕಾಟ

ಏನಿದು ಸಂಭ್ರಮ
ಬಿರಿದ ನೆಲಕೆ ಮಳೆ ಹನಿಯ ಸ್ಪರ್ಶ
ಮೊಗ್ಗೊಡೆದು ಘಮ್ಮೆನ್ನುವ ಸಮಯ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಲೇಖಕರಿಂದ ದೊರೆತ ಕೀಲಿಕರಣಗೊಂಡ ಕೃತಿ