Home / ಕಥೆ / ಕಿರು ಕಥೆ / ಧ್ಯಾನಾನುಭವ

ಧ್ಯಾನಾನುಭವ

ಒಮ್ಮೆ ಗುರುಗಳು ತನ್ನ ಪಟ್ಟ ಶಿಷ್ಯನನ್ನು ಕರೆದು ಹೀಗೆ ಹೇಳಿದರು. ಇಂದು ನೀನು ನಿನ್ನ ಉಸಿರನ್ನು ವೀಕ್ಷಿಸುತ್ತಾ ಧ್ಯಾನ ಮಾಡು. ನಿನ್ನ ಧ್ಯಾನದ ಅನುಭವವನ್ನು ನಂತರ ನನಗೆ ಬಂದು ಹೇಳು”-ಎಂದು ಹೇಳಿದರು.

ಶಿಷ್ಯ ಗುರುವಿನ ಅಣತಿಯ ಮೇರೆಗೆ ನಿಬಿಡವಾದ ವನಕ್ಕೆ ಹೋಗಿ ಒಂದು ವೃಕ್ಷದ ಕೆಳಗೆ ಧ್ಯಾನಕ್ಕೆ ಕುಳಿತುಕೊಂಡ. ಕಣ್ಣು ಮುಚ್ಚಿ, ಭುಜ, ಕತ್ತು, ಬೆನ್ನು ಒಂದು ನಿಲಿವಿನಲ್ಲಿಟ್ಟು, ಉಸಿರನ್ನು ವೀಕ್ಷಿಸುತ್ತಾ ಧ್ಯಾನ ಆರಂಭಿಸಿದ.

ಶ್ಯಾಸವನ್ನು ರೇಚಕದಿಂದ ಪೂರಕ, ಪೂರಕದಿಂದ ಕುಂಭಕದಲ್ಲಿ ಶ್ವಾಸವನ್ನು ವೀಕ್ಷಿಸುತ್ತಾ ಕಾಲದ ಅನಂತತೆಯಲ್ಲಿ ಲೀನವಾದ. ಅವನ ಉಸಿರು ಮಂದ ಪವನದೊಂದಿಗೆ ಒಂದಾಯಿತು. ಹಾಡುವ ಕೋಗಿಲೆಯ ನಾದದಲ್ಲಿ ತೇಲಾಡಿತು. ಎಲೆಯ ಮರ್ಮರದಲ್ಲಿ ಒಂದಾಯಿತು. ವೃಕ್ಷದ ಬೇರಲ್ಲಿ ಬೇರೂರಿತು. ಹೂಗಂಧವಾಯಿತು. ಹಣ್ಣಿನ ಪಕ್ವತೆ ಪಡೆಯಿತು. ವನವೆಲ್ಲಾ ಸುತ್ತಾಡಿತು. ಉಸಿರಿಗೆ ದೇಹದ ಅಸ್ತಿತ್ವ, ದೂರವಾಯಿತು. ಮನದ ಹಿಡಿತದಿಂದ ಉಸಿರು ವಿಶ್ವಗಾಮಿಯಾಯಿತು. ಸೀಮೆಗಳ ದಾಟಿತು. ವಿಶ್ವದ ಎಲ್ಲಾ ಚೇತನಕ್ಕೆ ಹೊಂದಿಕೊಂಡಿತು. ಬೆಸೆದುಕೊಂಡಿತು. ಆಗಸದ ನೀಲಿಯಲ್ಲಿ ಬೆರೆತಿತು. ಕಿರಣದಲ್ಲಿ ಮುಳುಗಿತು. ಬೆಳದಿಂಗಳಲ್ಲಿ ಆಡಿತು. ನಕ್ಷತ್ರದೊಡನೆ ನರ್ತಿಸಿತು. ಸಾಗರದ ಅನಂತತೆಯಲ್ಲಿ ತೇಲಾಡಿತು. ನದಿಯೊಡನೆ ಹರಿಯಿತು.

ಜಲಪಾತದಲ್ಲಿ ಲಾಸ್ಯವಾಡಿತು. ಮಳೆಯಲ್ಲಿ ಮಿಂದಿತು. ಮಿಂಚಲ್ಲಿ ಬೆಳಗಿತು. ನಾನು ಎಂಬುದಿಲ್ಲದೆ ಉಸಿರು ತಾನೇತಾನಾಗಿ ಮೆಲ್ಲ ಮೆಲ್ಲನೆ ವಿಶ್ವವ್ಯಾಪಿಯಾಯಿತು. ಪ್ರಾಣ ವಿಶ್ವಪ್ರಾಂಗಣವಾಯಿತು. ‘ನಾ’ನಿಲ್ಲದ ಆವಿಶ್ವ ಐಕ್ಯದಲ್ಲಿ ಉಸಿರದೆಷ್ಟು ಜೀವಂತ. ಉಸಿರು ಅದೆಷ್ಟು ಹಸಿರು ವಸಂತ. ಉಸಿರು ಅದೆಷ್ಟು ಅನಂತ ಭವ್ಯತೆಯ ಭಗವಂತ! ವಿಶ್ವಚೇತನದಲ್ಲಿ ಅನುಭಾವಿ ಶಿಷ್ಯ ಮಾರನೆ ದಿನ ಗುರುವಿನಲ್ಲಿ ಬಂದ.

“ಪ್ರಿಯ ಶಿಷ್ಯ! ನಿನ್ನ ಧ್ಯಾನದ ಅನುಭವವೇನು?”ಎಂದು ಗುರುಗಳು ಕೇಳಿದರು.

“ಧ್ಯಾನದಲ್ಲಿ ನಾನಿರಲಿಲ್ಲ. ನಾನೇನು ಹೇಳಬಲ್ಲೆ? ಉಸಿರು ಮಾತ್ರ ಇದ್ದಾಗ ನಾ ಮೌನ ಚೇತನವಾಗಿದ್ದೆ.” ಎಂದ ಶಿಷ್ಯ.

“ಅಹುದು ಶಿಷ್ಯ! ನಿನ್ನ ಮೌನ ಸ್ಪಂದನ ನಿನ್ನ ಅನುಭವ ಸಾರುತ್ತಿದೆ” ಎಂದರು ಗುರುಗಳು.
*****

Tagged:

Leave a Reply

Your email address will not be published. Required fields are marked *

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...