Home / ಕಥೆ / ಕಿರು ಕಥೆ / ಧ್ಯಾನಾನುಭವ

ಧ್ಯಾನಾನುಭವ

ಒಮ್ಮೆ ಗುರುಗಳು ತನ್ನ ಪಟ್ಟ ಶಿಷ್ಯನನ್ನು ಕರೆದು ಹೀಗೆ ಹೇಳಿದರು. ಇಂದು ನೀನು ನಿನ್ನ ಉಸಿರನ್ನು ವೀಕ್ಷಿಸುತ್ತಾ ಧ್ಯಾನ ಮಾಡು. ನಿನ್ನ ಧ್ಯಾನದ ಅನುಭವವನ್ನು ನಂತರ ನನಗೆ ಬಂದು ಹೇಳು”-ಎಂದು ಹೇಳಿದರು.

ಶಿಷ್ಯ ಗುರುವಿನ ಅಣತಿಯ ಮೇರೆಗೆ ನಿಬಿಡವಾದ ವನಕ್ಕೆ ಹೋಗಿ ಒಂದು ವೃಕ್ಷದ ಕೆಳಗೆ ಧ್ಯಾನಕ್ಕೆ ಕುಳಿತುಕೊಂಡ. ಕಣ್ಣು ಮುಚ್ಚಿ, ಭುಜ, ಕತ್ತು, ಬೆನ್ನು ಒಂದು ನಿಲಿವಿನಲ್ಲಿಟ್ಟು, ಉಸಿರನ್ನು ವೀಕ್ಷಿಸುತ್ತಾ ಧ್ಯಾನ ಆರಂಭಿಸಿದ.

ಶ್ಯಾಸವನ್ನು ರೇಚಕದಿಂದ ಪೂರಕ, ಪೂರಕದಿಂದ ಕುಂಭಕದಲ್ಲಿ ಶ್ವಾಸವನ್ನು ವೀಕ್ಷಿಸುತ್ತಾ ಕಾಲದ ಅನಂತತೆಯಲ್ಲಿ ಲೀನವಾದ. ಅವನ ಉಸಿರು ಮಂದ ಪವನದೊಂದಿಗೆ ಒಂದಾಯಿತು. ಹಾಡುವ ಕೋಗಿಲೆಯ ನಾದದಲ್ಲಿ ತೇಲಾಡಿತು. ಎಲೆಯ ಮರ್ಮರದಲ್ಲಿ ಒಂದಾಯಿತು. ವೃಕ್ಷದ ಬೇರಲ್ಲಿ ಬೇರೂರಿತು. ಹೂಗಂಧವಾಯಿತು. ಹಣ್ಣಿನ ಪಕ್ವತೆ ಪಡೆಯಿತು. ವನವೆಲ್ಲಾ ಸುತ್ತಾಡಿತು. ಉಸಿರಿಗೆ ದೇಹದ ಅಸ್ತಿತ್ವ, ದೂರವಾಯಿತು. ಮನದ ಹಿಡಿತದಿಂದ ಉಸಿರು ವಿಶ್ವಗಾಮಿಯಾಯಿತು. ಸೀಮೆಗಳ ದಾಟಿತು. ವಿಶ್ವದ ಎಲ್ಲಾ ಚೇತನಕ್ಕೆ ಹೊಂದಿಕೊಂಡಿತು. ಬೆಸೆದುಕೊಂಡಿತು. ಆಗಸದ ನೀಲಿಯಲ್ಲಿ ಬೆರೆತಿತು. ಕಿರಣದಲ್ಲಿ ಮುಳುಗಿತು. ಬೆಳದಿಂಗಳಲ್ಲಿ ಆಡಿತು. ನಕ್ಷತ್ರದೊಡನೆ ನರ್ತಿಸಿತು. ಸಾಗರದ ಅನಂತತೆಯಲ್ಲಿ ತೇಲಾಡಿತು. ನದಿಯೊಡನೆ ಹರಿಯಿತು.

ಜಲಪಾತದಲ್ಲಿ ಲಾಸ್ಯವಾಡಿತು. ಮಳೆಯಲ್ಲಿ ಮಿಂದಿತು. ಮಿಂಚಲ್ಲಿ ಬೆಳಗಿತು. ನಾನು ಎಂಬುದಿಲ್ಲದೆ ಉಸಿರು ತಾನೇತಾನಾಗಿ ಮೆಲ್ಲ ಮೆಲ್ಲನೆ ವಿಶ್ವವ್ಯಾಪಿಯಾಯಿತು. ಪ್ರಾಣ ವಿಶ್ವಪ್ರಾಂಗಣವಾಯಿತು. ‘ನಾ’ನಿಲ್ಲದ ಆವಿಶ್ವ ಐಕ್ಯದಲ್ಲಿ ಉಸಿರದೆಷ್ಟು ಜೀವಂತ. ಉಸಿರು ಅದೆಷ್ಟು ಹಸಿರು ವಸಂತ. ಉಸಿರು ಅದೆಷ್ಟು ಅನಂತ ಭವ್ಯತೆಯ ಭಗವಂತ! ವಿಶ್ವಚೇತನದಲ್ಲಿ ಅನುಭಾವಿ ಶಿಷ್ಯ ಮಾರನೆ ದಿನ ಗುರುವಿನಲ್ಲಿ ಬಂದ.

“ಪ್ರಿಯ ಶಿಷ್ಯ! ನಿನ್ನ ಧ್ಯಾನದ ಅನುಭವವೇನು?”ಎಂದು ಗುರುಗಳು ಕೇಳಿದರು.

“ಧ್ಯಾನದಲ್ಲಿ ನಾನಿರಲಿಲ್ಲ. ನಾನೇನು ಹೇಳಬಲ್ಲೆ? ಉಸಿರು ಮಾತ್ರ ಇದ್ದಾಗ ನಾ ಮೌನ ಚೇತನವಾಗಿದ್ದೆ.” ಎಂದ ಶಿಷ್ಯ.

“ಅಹುದು ಶಿಷ್ಯ! ನಿನ್ನ ಮೌನ ಸ್ಪಂದನ ನಿನ್ನ ಅನುಭವ ಸಾರುತ್ತಿದೆ” ಎಂದರು ಗುರುಗಳು.
*****

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...