Home / ಕಥೆ / ಕಿರು ಕಥೆ / ದುಂಬಿದಂಡು

ದುಂಬಿದಂಡು

ಝೆನ್ ಗುರುಗಳು ಧ್ಯಾನಕ್ಕೆ ಕುಳಿತಾಗ ದುಂಬಿಯ ದಂಡು ಒಂದು ಗುರುಗಳನ್ನು ಸತಾಯಿಸುತಿತ್ತು. ಗುರುಗಳ ಧ್ಯಾನ ಭಂಗವಾಗದಂತೆ ಶಿಷ್ಯ ಬಹಳ ಶ್ರಮವಹಿಸಿ ದುಂಬಿಗಳನ್ನು ಓಡಿಸುತ್ತಿದ್ದ. ದುಂಬಿಗಳು ಝೇಂಕಾರ ಮಾಡುತ್ತ ಕೆಲವೊಮ್ಮೆ ಗುರುಗಳನ್ನು ಕುಟುಕುತಿತ್ತು. ಕಿವಿಯ ಹತ್ತಿರ ಹೋಗಿ ಗುಂಯ್ ಗುಟ್ಟುತಿತ್ತು. ಅತೀವ ಕಳವಳದಿಂದ ಶಿಷ್ಯ ಗುರುಗಳಲ್ಲಿ ಹೇಳಿದ- “ನಿಮಗೆ ತೊಂದರೆ ಕೊಡುತ್ತಿರುವ ಈ ದುಂಬಿ ದುಂಡನ್ನು ನಾನು ಇಂದು ಜಾಲದಲ್ಲಿ ಸೆರೆಹಿಡಿಯುತ್ತೇನೆ” ಎಂದು. ಸರ್ವಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ.

ಮಾರನೆಯದಿನ ಶಿಷ್ಯ ದುಂಬಿ ದಂಡನ್ನು ಮರ್ದಿಸಲು ಖಡ್ಗ ಪ್ರಯೋಗ ಮಾಡಲು ಅನುವಾದ. ಇದನ್ನು ನೋಡಿದ ಗುರುಗಳು- “ಶಿಷ್ಯ ದುಡಕಬೇಡ, ಇದಕ್ಕೆ ಒಂದು ಸುಲಭೋಪಾಯವಿದೆ” ಎಂದರು. “ಗುರುಗಳೇ ಹೇಳಿ ನಾನು ಏನು ಮಾಡಬೇಕು?” ಎಂದ ಶಿಷ್ಯ.

ಸುಗಂಧಿತ ಪುಷ್ಪದ ಕುಂಡಗಳಿಂದ ನಮ್ಮ ಬೌದ್ಧ ವಿಹಾರವನ್ನು ಅಲಂಕರಿಸು. ಆಗ ದುಂಬಿದಂಡು ತಮ್ಮ ಧ್ಯಾನವನ್ನು, ಗಮನವನ್ನು ಹೂವಿನ ಹೃದಯದ ಕಡೆ ತಿರುಗಿಸುತ್ತವೆ. ನನ್ನ ಧ್ಯಾನಕ್ಕೆ ಏನು ಅಡ್ಡಿಯಾಗುವುದಿಲ್ಲ.” ಎಂದರು ಗುರುಗಳು.

ಶಿಷ್ಯನ ಕೈಯಲ್ಲಿದ್ದ ಖಡ್ಗದ ಬ್ರಹ್ಮಾಸ್ತ್ರನಾಚಿ ಮೂಲೆ ಸೇರಿತು. ಸ್ವರ್ಣ ಸಂಪಿಗೆ, ಮಲ್ಲಿಗೆ, ಜಾಜಿ, ಕಮಲಗಳು ವಿಹಾರದಲ್ಲಿ ಅರಳಿ ದುಂಬಿವಿಂಡಿಗೆ ಸ್ವಾಗತವಿತ್ತವು. ಸಮಸ್ಯೆಗೆ ಶಾಂತ ಪರಿಹಾರ ಸೂಚಿಸಿದ ಗುರುಗಳಿಗೆ ಶಿಷ್ಯ ನಮಿಸಿದ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...