Home / ಲೇಖನ / ಇತರೆ / ಕಾಳಿ ಕತೆ

ಕಾಳಿ ಕತೆ

ಈಗೀಗ ವಿದೇಶಗಳಲ್ಲಿ ವಿದೇಶಿಯರಲ್ಲಿ ಭವ್ಯ ಭಾರತದ ಬಗ್ಗೆ ಭವ್ಯ ಭಾರತೀಯ ದೇವಾನುದೇವತೆಗಳ ಬಗ್ಗೆ ತುಂಬಾ ತುಂಬಾ ಗೌರವ ಮೂಡುತ್ತಿದೆ. ಇದೆಲ್ಲ ಸ್ವಾಗತಾರ್ಹ.

ಭವ್ಯ ಭಾರತದ ಪ್ರಭಾವ, ಸಂಸ್ಕೃತಿ, ನಾಗರೀಕತೆ ಅಂಥಾದ್ದು! ಇಡೀ ವಿಶ್ವಕ್ಕೆ ಮಾದರಿ ಎಂಬುದರಲ್ಲಿ ಎರಡು ಮಾತಿಲ್ಲ!

ಇದೆಲ್ಲದ್ದಕ್ಕೂ ಪುಷ್ಠಿದಾಯಕವಾಗಿ ಇತ್ತೀಚೆಗೆ ಆಗಸ್ಟ್ ೨೦೧೫ ರ ಮೊದಲ ವಾರದಲ್ಲಿ ನೂಯಾರ್ಕ್‌ನ ಎಂಪೈರ್ ಬಿಲ್ಡಿಂಗ್ ಮೇಲೆ ಕಾಳಿದೇವಿಯ ಪ್ರದರ್ಶನವಿತ್ತು!

ಇಡೀ ನ್ಯೂಯಾರ್ಕಿನ ಜನತೆ ಅದರಲ್ಲೂ ಅಲ್ಲಿ ನೆಲೆಸಿರುವ ಭವ್ಯ ಭಾರತೀಯರೆಲ್ಲ ಈ ಅಭೂತಪೂರ್ವ ದೃಶ್ಯವೊಂದನ್ನು ಕಂಡು ಪುನೀತರಾಗಿದ್ದಾರೆ.

ನ್ಯೂಯಾರ್ಕಿನ ಕಲಾವಿದ ಆಂಡ್ರ್ಯೂ ಜೋನ್ಸ್- ಕಾಳಿದೇವಿಯ ಬೃಹತ್ ಚಿತ್ರ ರಚಿಸಿದ್ದರು. ಅದನ್ನು ಕಟ್ಟಡದ ಉದ್ದಕ್ಕೂ ಡಿಜಿಟಲ್ ಪರದೆಯಲ್ಲಿ ಪ್ರದರ್ಶಿಸಿದ್ದರು.

ಈ ಬೃಹತ್ ಚಿತ್ರ ನೋಡುಗರನ್ನು ಮಂತ್ರ ಮುಗ್ಧರನ್ನಾಗಿಸಿತ್ತು! ಸಾಕ್ಷಾತ್ ಕಾಳಿಕಾದೇವಿಯೇ ಆಕಾಶದಿಂದ ಧರೆಗಿಳಿದು ಬಂದಿದ್ದಳೆಂಬಂತೆ ಎದ್ದು ಕಾಣುತ್ತಿತ್ತು!

ಈಗೀನ ಪ್ರಕೃತಿ ಮಾತೆ ಹಿಂದೆಂದಿಗಿಂತಲೂ ಹೆಚ್ಚೆಚ್ಚು ಮಾನವನ ದುರಾಸೆಗಳಿಗಾಗಿ ನಾನಾ ರೀತಿಯ ಅತ್ಯಾಚಾರ ಅನಾಚಾರ… ಹಿಂಸೆ… ಅವಮಾನ, ಕ್ರೌರ್ಯ, ಬಲಿಗೆ ತುತ್ತಾಗಿ ನಿರಂತರವಾಗಿ ಮಾನವನ ಘೋರ ದಾಳಿಗಳಿಗೆ ಒಳಗಾಗುತ್ತಿರುವಳು. ಇದನ್ನೆ ಕಂಡು ರೋಸಿ ಹೋಗಿ ಇಂದು ಭೂಮಿಯನ್ನು ರಕ್ಷಿಸಲು ತಾಯಿ ಕಾಳಿಕಾ ಮಾತೆಯೇ ಪ್ರಚಂಡಾವತಾರ ಎತ್ತಲು ಕಾಲ ಸನಿಹವಾಗಿದೆಯೆಂಬ ಸಂದೇಹ ಸಾರಲು ಈ ಚಿತ್ರವೆಂದು ಕಲಾವಿದ ಆಂಡ್ರ್ಯೂ ಜೋನ್ಸ್ ತನ್ನ ಅಳಲನ್ನು ಅಂದು ತೋಡಿಕೊಂಡಿರುವನು.

ಇಲ್ಲಿ ನ್ಯೂಯಾರ್ಕಿನ ಜನಪ್ರಿಯ ಎಂಪೈರ್ ಬಿಲ್ಡಿಂಗ್‌ನ ಮೇಲೆ ಆಗಾಗ ಇಂಥ ಹಲವು ಚಿತ್ರಗಳನ್ನು ಪ್ರದರ್ಶಿಸುವುದು ಸರ್ವೇ ಸಾಮಾನ್ಯವಾಗಿದೆ. ಈಗ ಕಾಳಿ ಕತೆ ಜನರ ಮನದಲ್ಲಿ ನೆಲೆಯೂರಲಿ ಎಂದಿಗೂ ಈ ಪ್ರದರ್ಶನದ ಘನ ಉದ್ದೇಶವೆಂದು ಕಲಾವಿದ ಸಾರಿಕೊಂಡಿದ್ದಾನೆ.

ನಮ್ಮಲ್ಲಿಯೂ ಸಾಹಿತಿಗಳಿಗೆ, ಕಲಾವಿದರಿಗೆ ಇಂಥಾದೊಂದು ವೇದಿಕೆ ನಿರ್ಮಾಣವಾಗಬೇಕು. ಅದಕ್ಕಾಗಿ ನಾವು ನೀವು ಕಾಯೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...