Home / ಕವನ / ಕವಿತೆ / ಕರುಣೆ

ಕರುಣೆ

ದೇವ ನಿನ್ನಪಾರ ಕರುಣೆಗಾವ ನೆಲೆಯ ಕಾಣಲಿ!
ಈವ ಶಕ್ತಿ ಈಯುತಿರಲಿ ಭಕ್ತಿಭಾವ ಬೆಳೆಯಲಿ!
ಬೆಳಕು ಗಾಳಿ ನೀರು ನೆಲ ಇತ್ತುದೆಲ್ಲ ಸಾಲದೆ?
ಬೆಳೆವ ಬದುಕಿಗಿದುವೆ ಭಾರವೆಂದರೆಂತು ಹೇವವೆ?
ತಾಯಿ ಈದ ಮಗುವು ನೀನು ಬಂದೆ ಇತ್ತರಲ್ಲವೆ?
ಮಾಯ ಬಿಸುಟಿ ನಿನ್ನ ನೋಡು ಅದೇ ಶಕ್ತಿ ಅಂಶವೆ.
ಬೆಳೆವುದೊಂದೆ ಉಳಿದ ಕೆಲಸ ಇಲ್ಲವದಕೆ ಎಡೆ ತಡೆ;
ಇಳೆಯ ತುಂಬು ವಿಶ್ವ ವ್ಯಾಪಿ ನಿಲ್ಲಜೇಡ ನಡೆ ನಡೆ.


ಜಗದ ಬೆಳಕಿಗುಗಮ ನಿನ್ನ ಹೊಳೆವ ಕಣ್ಣ ಕಾಂತಿಯು
ಗಂಧವೀನ ಗಂಧವತಿಯು ನಿನ್ನ ಮ್ಬೆ ಸುಗಂಧವು
ಉಸುರಿನೆಳೆತ ಎದೆಯ ಕುಣಿತ ಕಡಲಿನೇರು ಇಳಿತವು,
ಇದಕೆ ತಾಳ ಹಾಕುತಿಹವು ಚಿಕ್ಕೆ ಬೆರಗುಗೊಂಡವು.
ನೀನು ಸಾಗೆ ಅಮರನಾಗಿ ಹತ್ತು ದಿಕ್ಕು ತುಂಬುತ
ಗಾನ ಬಂತು ಗಗನದಿಂದ ನಿನ್ನ ಬೆನ್ನ ಹತ್ತುತ
ತುಂಬಿ ತುಳುಕಿತಿಳೆಯ ಕಲಶ ಕಾದಿಹ ಕದಲಾರತಿ
ಪ್ರಕೃತಿ ಪುರುಷಗೆತ್ತಿ ಹಿಡಿದ ಹೊನ್ನ ಮಂಗಲಾರತಿ


ದೇಹವಿದ್ದರೇನು ಜೀವ ನಿನ್ನನೆ ನೀ ಮರೆವೆಯಾ?
ನೀನು ಹೊತ್ತ ಪರಿಗಳನ್ನೆ ನೀನೆ ಅರಿಯದಿರುವೆಯಾ?
ಹುಟ್ಟಿನಲ್ಲೆ ಹುದುಗಿ ಸಾವು ದೇಹರೂಪ ತಾಳಿತು
ಸೃಷ್ಟಿಯಲ್ಲಿ ತಾನು ತೋರಿ ನಿನ್ನನು ಮರೆ ಮಾಡಿತು
ನಿನ್ನ ಜರೆದು ತಾನು ಮರೆದು ಇದಕೆ ಬಾಳು ಎಂದಿತು
ದಣಿದು ಕೊನೆಗೆ ಮಣ್ಣುಗೂಡೆ ದೇಹವಳಿದು ಹೋಯಿತು
ತನ್ನ ಅರಿವು ತನಗೆ ಬರದೆ ಇದ್ದು ಇಲ್ಲದಾಯಿತು
ಅಳಿದ ದೇಹದಿಂದ ಉಳಿದ ನಿನಗೆ ವಿಜಯವಾಯಿತು
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...