Home / ಕವನ / ಕವಿತೆ / ಕರುಣೆ

ಕರುಣೆ

ದೇವ ನಿನ್ನಪಾರ ಕರುಣೆಗಾವ ನೆಲೆಯ ಕಾಣಲಿ!
ಈವ ಶಕ್ತಿ ಈಯುತಿರಲಿ ಭಕ್ತಿಭಾವ ಬೆಳೆಯಲಿ!
ಬೆಳಕು ಗಾಳಿ ನೀರು ನೆಲ ಇತ್ತುದೆಲ್ಲ ಸಾಲದೆ?
ಬೆಳೆವ ಬದುಕಿಗಿದುವೆ ಭಾರವೆಂದರೆಂತು ಹೇವವೆ?
ತಾಯಿ ಈದ ಮಗುವು ನೀನು ಬಂದೆ ಇತ್ತರಲ್ಲವೆ?
ಮಾಯ ಬಿಸುಟಿ ನಿನ್ನ ನೋಡು ಅದೇ ಶಕ್ತಿ ಅಂಶವೆ.
ಬೆಳೆವುದೊಂದೆ ಉಳಿದ ಕೆಲಸ ಇಲ್ಲವದಕೆ ಎಡೆ ತಡೆ;
ಇಳೆಯ ತುಂಬು ವಿಶ್ವ ವ್ಯಾಪಿ ನಿಲ್ಲಜೇಡ ನಡೆ ನಡೆ.


ಜಗದ ಬೆಳಕಿಗುಗಮ ನಿನ್ನ ಹೊಳೆವ ಕಣ್ಣ ಕಾಂತಿಯು
ಗಂಧವೀನ ಗಂಧವತಿಯು ನಿನ್ನ ಮ್ಬೆ ಸುಗಂಧವು
ಉಸುರಿನೆಳೆತ ಎದೆಯ ಕುಣಿತ ಕಡಲಿನೇರು ಇಳಿತವು,
ಇದಕೆ ತಾಳ ಹಾಕುತಿಹವು ಚಿಕ್ಕೆ ಬೆರಗುಗೊಂಡವು.
ನೀನು ಸಾಗೆ ಅಮರನಾಗಿ ಹತ್ತು ದಿಕ್ಕು ತುಂಬುತ
ಗಾನ ಬಂತು ಗಗನದಿಂದ ನಿನ್ನ ಬೆನ್ನ ಹತ್ತುತ
ತುಂಬಿ ತುಳುಕಿತಿಳೆಯ ಕಲಶ ಕಾದಿಹ ಕದಲಾರತಿ
ಪ್ರಕೃತಿ ಪುರುಷಗೆತ್ತಿ ಹಿಡಿದ ಹೊನ್ನ ಮಂಗಲಾರತಿ


ದೇಹವಿದ್ದರೇನು ಜೀವ ನಿನ್ನನೆ ನೀ ಮರೆವೆಯಾ?
ನೀನು ಹೊತ್ತ ಪರಿಗಳನ್ನೆ ನೀನೆ ಅರಿಯದಿರುವೆಯಾ?
ಹುಟ್ಟಿನಲ್ಲೆ ಹುದುಗಿ ಸಾವು ದೇಹರೂಪ ತಾಳಿತು
ಸೃಷ್ಟಿಯಲ್ಲಿ ತಾನು ತೋರಿ ನಿನ್ನನು ಮರೆ ಮಾಡಿತು
ನಿನ್ನ ಜರೆದು ತಾನು ಮರೆದು ಇದಕೆ ಬಾಳು ಎಂದಿತು
ದಣಿದು ಕೊನೆಗೆ ಮಣ್ಣುಗೂಡೆ ದೇಹವಳಿದು ಹೋಯಿತು
ತನ್ನ ಅರಿವು ತನಗೆ ಬರದೆ ಇದ್ದು ಇಲ್ಲದಾಯಿತು
ಅಳಿದ ದೇಹದಿಂದ ಉಳಿದ ನಿನಗೆ ವಿಜಯವಾಯಿತು
*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...