Home / ಕವನ / ಕವಿತೆ / ಅವ್ವ

ಅವ್ವ

ಬ್ರಿಟೀಷ್ ಕಾಲದ ಪೋಲಿಸನ ಮಗಳು ನಮ್ಮಮ್ಮ
ಹಾಗೇ ಕಿತ್ತೂರು ಚೆನ್ನಮ್ಮನ ನಾಡಿನಲ್ಲೇ ಹುಟ್ಟಬೆಳೆದವಳು
ಪೋಲಿಸನ ಕೆಲಸ ಅವನದಾಗಿದ್ದರೆ
ಇವಳ ಕೆಲಸ ಅದೇ ಝೆಂಡಾ ಹಿಡಿದು
ಊರತುಂಬೆಲ್ಲ ಪ್ರಭಾತಪೇರಿ ಹಾಕುತ
ಗಾಂಧಿ ಹೆಸರು ಹಿಡಿದು ಕೂಗುವುದು
ಅದೆಷ್ಟು ಧೈರ್ಯ ಅದೆಷ್ಟು ಶಕ್ತಿ ಅವಳಿಗೆ
ಒಬ್ಬೊಬ್ಬರನು ಎತ್ತಿ ಚಚ್ಚಿ ಬಿಡುವಷ್ಟು-
ಸುಳ್ಳು ಮೋಸ ಏನೇನೂ ನಡೆಯುವುದಿಲ್ಲ
ಎಲ್ಲವೂ ನೇರ ಕಡಾಖಂಡಿತ
ಹೀಗೆಂದು ಒಮ್ಮೊಮ್ಮೆ
ಜಗಳಗಂಟೆಯೂ ಅನಿಸಿಕೊಂಡಿದ್ದಾಳೆ

ಅವಳಪ್ಪ ಉದಾರಿ; ನಮ್ಮಪ್ಪ ಜಿಪುಣ ಸರಳವಾದಿ
ಉಂಡುಟ್ಟು ತಿಂದು ತೇಗಿದ ಮನೆಯಿಂದ
ಬಂಗಾರಕವಚ ತೊಟ್ಟು ಬಂದವಳಿಗೆ
ಇಲ್ಲಿ ಎಲ್ಲದಕೂ ಲೆಕ್ಖಾಚಾರ, ಸೀದಾ ಸಾದಾ
ವಯಸ್ಸಿನ ಶಿಕ್ಷಣದ ಅಂತರ ಇದ್ದ ಅವ್ವ
ಆಗಾಗ ಅಧಿಕಾರಿ ಗಂಡನೊಂದಿಗೆ
ಮಾತುಬಿಟ್ಟು ಮೌನಿ
ಮಾತನಾಡಿದ್ದು ಪುಸ್ತಕಗಳೊಂದಿಗೆ
ಕಲೆತದ್ದು ನಯ ನಾಜೂಕು ಶಿಸ್ತು

ನಿಂತನಿಂತಲ್ಲೇ ಬಟ್ಟೆಗಳ ಸುಕ್ಕು
ಒದ್ದೆ ಕೈಯಲೇ ಬಿಡಿಸುತ
ಇಸ್ತ್ರಿ ಹೊಡೆದಂತೆ ತೀಡಿ ತಿದ್ದಿ
ಯುನಿಫಾರ್ಮ್ ತೊಡಿಸಿ
ಬಿಗಿಯಾಗಿ ಜಡೆಹೆಣೆದು ಶಾಲೆಗೆ ಕಳಿಸುತ-
ಪಾಠ ಪುಸ್ತಕಗಳೊಂದಿಗೆ ಒಂದಾಗಿ ಓದಿ ಚರ್ಚಿಸುತ

ಈಗ ಸಾಹಿತಿಗಳ ರಾಜಕಾರಣಿಗಳ
ಸಮಾನಾಂತರ ಚರ್ಚಿಸುವಳು, ವಾದಿಸುವಳು.
ಅವರಪ್ಪ ನಮ್ಮಪ್ಪ ಇಬ್ಬರೂ
ಆಗಲೇ ದೇವರಪಾದ ಸೇರಿದ್ದಾರೆ
ಬ್ರಿಟೀಷರ ಸೇವೆಮಾಡಿ ಅವರಿಂದ
‘ಬಹದ್ದೂರ’ ಅನಿಸಿಕೊಂಡು ಆತ ಹೋದ
ಸರಕಾರದ ಸೇವೆಮಾಡಿ ಇವರಿಂದ
‘ದಕ್ಷ‌ಅಧಿಕಾರಿ’ ಎಂದೆನಿಸಿಕೊಂಡು ಈತ ಹೋದ
ನನಗೂ ಇನ್ನೊಂದಿಷ್ಟು ಓದಿಸಿದ್ದರೆ
ಸಹಕರಿಸಿದ್ದರೆ ಇವರಿಬ್ಬರನು ಮೀರಿಸುತ್ತಿದ್ದೆ
ಎನುತ ಒಮ್ಮೊಮ್ಮೆ ಅವರನು ಬಯ್ಯುತ

ನಮಗೆಲ್ಲ ಸಮಯಪ್ರಜ್ಞೆ ಸಮಾನತೆ
ಬಗೆಗೆ ಎಚ್ಚರಿಸಿ
ಬೆನ್ನುತಟ್ಟಿ ಆಶೀರ್ವದಿಸುವಳು
ಆಗಾಗ ಮಕ್ಕಳೆಲ್ಲರ ಸಾಧನೆಗೆ
ಕಣ್ಣೀರು ತುಂಬಿಕೊಂಡು
ಭಾವಪರವಶಳಾಗುತ್ತಾಳೆ.

ಆದರೂ ಅವಳೊಳಗೆ ಬೇರುಬಿಟ್ಟ
ಗಾಂಧಿತತ್ವ
ಪೋಲಿಸನ ದರ್ಪ
ಅಧಿಕಾರಿಯ ಮಾತುಗಳು
ಮತ್ತೆ ಮತ್ತೆ ಚಿಗಿಯುತ್ತವೆ
ಸಮಯ ಪ್ರಜ್ಞೆಗೆ ತಾನೂ
ಅವನ್ನೆಲ್ಲಾ ಬಳಸಿಕೊಳ್ಳುತ
ಒಮ್ಮೊಮ್ಮೆ ಗುಡುಗು ಸಿಡಿಲು ಮಳೆಯಾಗಿ ಬಿಡುತ್ತಾಳೆ.

ವಾತ್ಸಲ್ಯ
ಉಡಿತುಂಬ ತುಂಬಿಕಳಿಸಿದ
ನನ್ನವ್ವಳ ಆಶೀರ್ವಾದ
ಹಾಸಿದ್ದೇನೆ ಹೊದ್ದಿದ್ದೇನೆ
ಬಿತ್ತಿ ಬೆಳೆದುಕೊಂಡು
ತೊನೆದಾಡುತ್ತಿದ್ದೇನೆ.
*****

ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...