Home / ಕವನ / ಕವಿತೆ / ಇತಿಹಾಸಾವಲೋಕನ ನಿರ್ವೇದ

ಇತಿಹಾಸಾವಲೋಕನ ನಿರ್ವೇದ

ಪರಶಿವಗು ತಪದಿಚ್ಛೆಯೊಮ್ಮೆಗೆ ಹರಿಗು ಯೋಗದ ನಿದ್ದೆಯು
ಭಾರತಾತ್ಮವೆ, ನಿನಗು ಅಂತರ್ಮುಖತೆಯಾಯಿತೆ ಸಹಜದಿ?
ನೀನು ಸಾಸಿರವರುಷ ಜಡರೊಳೆಯಿದ್ದೆ ಹರಣವ ಹದುಗಿಸಿ
ತವರ ಸೇರಿದ ಮೇಲೆ ಜಾನಕಿ ರಾಮರಾಜ್ಯವಿದೋ ಎನೆ.

ಕೃಷಿಯುಪೇಕ್ಷಿತವಾಗಿ ಹುಲುಸದ ನೆಲಕೆ ಚಿಚ್ಚರದೊಕ್ಕಲು
ಗೊಬ್ಬರವನಿಕ್ಕೊವೊಲು ತಂದನು ಪರಜನವ ಪಶುಪತಿಯೆನೆ
ಶಕರು ಹೂಣರು ತುರುಕರಾಫ್ಘನರಂತೆ ಮುಘಲರು ತಮ್ಮಯ
ತನುಮನವ ಬೆರಸಿದರು ನಿನ್ನಯ ಮಣ್ಣಿನೊಳು ರಸವೂರಲು.

ಬೇಸಾಯ ಬೆಳೆಯಪ್ಪ ಕಾಲಕೆ ಕಳೆಗಳೇಳ್ವವು ಹುಳುಗಳೂ
ಹಾಲು ತೆನೆಗೂಡುತಿರೆ ಪೈರೊಳು ಬೆಳ್ಳಕ್ಕಿ ಸಾಲಿಡುವುವು
ಇಂತೆ ಆಯಿತೊ ಏನೊ ನಮ್ಮೀನಾಡಿನೈಸಿರಿ ಸುಗ್ಗಿಗೆ
ಈ ನೆಲದಿ ಹುಳು ಹುಪಟೆ ಹೆಚ್ಚಿತು, ಬಿಳಿಯ ಜನ ಕಾಲೂರಿತು.

ಮೇದನಿಯ ಬಲದಿಂದಲೊಯ್ಯುವ ಹಿರಣ್ಯಾಕ್ಷರೊ ಎಂಬೊಲು
ಆಸುರವ ಮೆರೆಸುತ್ತ ಸೆಳೆದರು ಭಾರತಾತ್ಮವನಾಂಗ್ಲರು
ವಿಜ್ಞಾನ ಪಾಶಗಳ ಬೀಸುತ ಬಂಧಿಸುತ ಕೊಂಡೊಯ್ದರು
ಸಪ್ತಸಾಗರದಾಚೆ ತಮ್ಮಯ ನಾಡ ಮಂಚಕೆ ಬಿಗಿದರು.

ಎಲೆ, ಹರಿಪ್ರಿಯೆ, ನಿನ್ನ ತನುಜರ ಭಂಗಕಾವನು ಮರುಗನು
ನಿನ್ನ ಋಷಿಕವಿದೇವಗಮನವ ಸೆಳೆದೆಯಾ ನಿಟ್ಟುಸಿರೊಳು?
ಮುಕ್ತರವರನುತಪಿಸಿ ಬಿದ್ದರೆ ಪುನರ್ಜನ್ಮದ ಬವಣೆಗೆ
ನಿನ್ನ ಮಣ್ಣೊಳೆ ತನುವನಾನುತ ನಿನ್ನ ನಿಭವವ ಮರಳಿಸೆ?
*****

Tagged:

Leave a Reply

Your email address will not be published. Required fields are marked *

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...