Home / ಕವನ / ಕವಿತೆ / ಅರೇಬಿಯಾದ ಅರುಣೋದಯ

ಅರೇಬಿಯಾದ ಅರುಣೋದಯ

ಸುಪ್ರಭಾತ ಗೀತಗಳಿಲ್ಲದೆ
ಅಂಗಳಕೆ ಹೆಂಗಳೆಯರ ರಂಗವಲ್ಲಿಗಳಿಲ್ಲದೆ
ಓಡಾಡಿ ಹಾಲು ಕೊಡುವ
ಪೇಪರ ಒಗೆಯುವ
ತರಕಾರಿ ಎಂದು ಕೂಗುವ ಹುಡುಗರಿಲ್ಲದೆ
ಘಮಘಮಿಸುವ ಹೂಮೊಗ್ಗುಗಳ
ಯಾವೊಂದೂ ಸ್ವಾಗತವಿಲ್ಲದೆ
ಸಿಟ್ಟಿಗೆದ್ದ ಸೂರ್ಯ ಧಗಧಗಿಸುತ್ತಲೇ ಹುಟ್ಟುತ್ತಾನೆ.

ಸೂರ್ಯಪೂಜೆ
ಸೂರ್ಯ ನಮಸ್ಕಾರಗಳಿಲ್ಲದೆ
ಜನರ ನಡುವೆ ಏಳುತ್ತಾನೆ
ಗಿಡಗಳ ನೆರಳಿಲ್ಲದ ಅರಮನೆಗಳಿಗೆ
ಬಡವರ ತುಂಬಿದ ದೊಡ್ಡಿಗಳಿಗೆ
ಮುನ್ನುಗ್ಗುತ್ತಾನೆ.

ಬಿಳಿಯರ ಬೆತ್ತಲೆ ತೊಗಲಿಗೆ ಮುದ್ದಿಸಿ
(ಸನ್‍ಬಾಥ್) ಪ್ರೀತಿಸಿಕೊಳ್ಳುವ
ಕರಿಯರಿಂದ ಸಿಟ್ಟಿಗೆಬ್ಬಿಸಿಕೊಳ್ಳುವ
ಬುರ್ಕಾದ ಅರೇಬಿಯರಿಗೆ ಮುಟ್ಟದೆ
ಎತ್ತರೆತ್ತರಕ್ಕೇರುತ್ತಾನೆ.
ತನ್ನ ದೇಹದೊಳಗೆ
ದಿಗಂಬರ ಬಂಜರು ಮರುಭೂಮಿಗೆ
ತೆಕ್ಕೆಯಾಗಿ
ಅವಳೊಳಗೆ ಇವನೋ
ಇವನೊಳಗೆ ಅವಳೋ ಆಗಿ
ಕುರುಹುಗಳು ಮೊಳಕೆಯೊಡೆಯುತ್ತವೆ

ಪರಿಶುದ್ಧ ಸ್ಫಟಿಕ ಜಲ (ಓಯಸಿಸ್)
ಕಣ್ಣು ಮುಚ್ಚಾಲೆಯಾಡುತ್ತದೆ
ಅಲ್ಲೊಂದು ಇಲ್ಲೊಂದು
ಕ್ಯಾಕ್ಟಸ್‌ಗಳು ಬಿಚ್ಚಿಕೊಳ್ಳುತ್ತವೆ.
ಪ್ರೀತಿಯ ಜೀನು ಮುತ್ತಿನ
ಖರ್ಜೂರಗಳ ಮಳೆಯುದುರುತ್ತದೆ.
ಸುಖ ದುಃಖಗಳ ಸೋಂಕು ಮರೆತು
ಈಗೀಗ ಅರೇಬಿಯದ ಸೂರ್ಯ
ಬರೆಯವವರಿಗೆ ಜೀವಂತ ಕಾವ್ಯವಾಗುತ್ತಿದ್ದಾನೆ.

“ಬಿಸಿಲಿನ ಧಗೆಯಲ್ಲೂ
ಹರಿದ್ವರ್ಣಿಸಿದ ಕ್ಷಣಗಳಿಗೆ
ಬೆಲೆ ಕಟ್ಟಲಾದೀತೆ?
ಉಸುಕಿನ ಕಣಗಳೊಡನೆ
ಓಯಸಿಸ್ ಹನಿಗಳೊಡನೆ
ಬೆಳೆಸಿದ ಕ್ಯಾಕ್ಟಸ್‌ಗಳೂಡನೆ
ಕಡಲಾಳ ಕಡಲಿತ್ತರದೊಡನೆ
ಬೆರೆಸಿದ ಉಸುರಿಗೆ
ಬೆಲೆ ಕಟ್ಟಲಾದೀತೆ?”
*****

ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...