Home / ಕವನ / ಕವಿತೆ / ಅರೇಬಿಯಾದ ಅರುಣೋದಯ

ಅರೇಬಿಯಾದ ಅರುಣೋದಯ

ಸುಪ್ರಭಾತ ಗೀತಗಳಿಲ್ಲದೆ
ಅಂಗಳಕೆ ಹೆಂಗಳೆಯರ ರಂಗವಲ್ಲಿಗಳಿಲ್ಲದೆ
ಓಡಾಡಿ ಹಾಲು ಕೊಡುವ
ಪೇಪರ ಒಗೆಯುವ
ತರಕಾರಿ ಎಂದು ಕೂಗುವ ಹುಡುಗರಿಲ್ಲದೆ
ಘಮಘಮಿಸುವ ಹೂಮೊಗ್ಗುಗಳ
ಯಾವೊಂದೂ ಸ್ವಾಗತವಿಲ್ಲದೆ
ಸಿಟ್ಟಿಗೆದ್ದ ಸೂರ್ಯ ಧಗಧಗಿಸುತ್ತಲೇ ಹುಟ್ಟುತ್ತಾನೆ.

ಸೂರ್ಯಪೂಜೆ
ಸೂರ್ಯ ನಮಸ್ಕಾರಗಳಿಲ್ಲದೆ
ಜನರ ನಡುವೆ ಏಳುತ್ತಾನೆ
ಗಿಡಗಳ ನೆರಳಿಲ್ಲದ ಅರಮನೆಗಳಿಗೆ
ಬಡವರ ತುಂಬಿದ ದೊಡ್ಡಿಗಳಿಗೆ
ಮುನ್ನುಗ್ಗುತ್ತಾನೆ.

ಬಿಳಿಯರ ಬೆತ್ತಲೆ ತೊಗಲಿಗೆ ಮುದ್ದಿಸಿ
(ಸನ್‍ಬಾಥ್) ಪ್ರೀತಿಸಿಕೊಳ್ಳುವ
ಕರಿಯರಿಂದ ಸಿಟ್ಟಿಗೆಬ್ಬಿಸಿಕೊಳ್ಳುವ
ಬುರ್ಕಾದ ಅರೇಬಿಯರಿಗೆ ಮುಟ್ಟದೆ
ಎತ್ತರೆತ್ತರಕ್ಕೇರುತ್ತಾನೆ.
ತನ್ನ ದೇಹದೊಳಗೆ
ದಿಗಂಬರ ಬಂಜರು ಮರುಭೂಮಿಗೆ
ತೆಕ್ಕೆಯಾಗಿ
ಅವಳೊಳಗೆ ಇವನೋ
ಇವನೊಳಗೆ ಅವಳೋ ಆಗಿ
ಕುರುಹುಗಳು ಮೊಳಕೆಯೊಡೆಯುತ್ತವೆ

ಪರಿಶುದ್ಧ ಸ್ಫಟಿಕ ಜಲ (ಓಯಸಿಸ್)
ಕಣ್ಣು ಮುಚ್ಚಾಲೆಯಾಡುತ್ತದೆ
ಅಲ್ಲೊಂದು ಇಲ್ಲೊಂದು
ಕ್ಯಾಕ್ಟಸ್‌ಗಳು ಬಿಚ್ಚಿಕೊಳ್ಳುತ್ತವೆ.
ಪ್ರೀತಿಯ ಜೀನು ಮುತ್ತಿನ
ಖರ್ಜೂರಗಳ ಮಳೆಯುದುರುತ್ತದೆ.
ಸುಖ ದುಃಖಗಳ ಸೋಂಕು ಮರೆತು
ಈಗೀಗ ಅರೇಬಿಯದ ಸೂರ್ಯ
ಬರೆಯವವರಿಗೆ ಜೀವಂತ ಕಾವ್ಯವಾಗುತ್ತಿದ್ದಾನೆ.

“ಬಿಸಿಲಿನ ಧಗೆಯಲ್ಲೂ
ಹರಿದ್ವರ್ಣಿಸಿದ ಕ್ಷಣಗಳಿಗೆ
ಬೆಲೆ ಕಟ್ಟಲಾದೀತೆ?
ಉಸುಕಿನ ಕಣಗಳೊಡನೆ
ಓಯಸಿಸ್ ಹನಿಗಳೊಡನೆ
ಬೆಳೆಸಿದ ಕ್ಯಾಕ್ಟಸ್‌ಗಳೂಡನೆ
ಕಡಲಾಳ ಕಡಲಿತ್ತರದೊಡನೆ
ಬೆರೆಸಿದ ಉಸುರಿಗೆ
ಬೆಲೆ ಕಟ್ಟಲಾದೀತೆ?”
*****

ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...