Home / ಬಾಲ ಚಿಲುಮೆ / ಕಥೆ / ಯುಧಿಷ್ಠಿರನ ಕಥೆ

ಯುಧಿಷ್ಠಿರನ ಕಥೆ

ಒಂದಾನೊಂದು ಊರಿನಲ್ಲಿ ಒಬ್ಬ ಕುಂಬಾರನಿದ್ದನು. ಅವನ ಹೆಸರು ಯುಧಿಷ್ಠಿರ. ಅವನು ಒಂದಾನೊಂದು ದಿನ ಬಹು ವೇಗವಾಗಿ ಓಡಿಬರುತ್ತಾ ಒಡೆದ ಮಡಕೆಯ ತುಂಡಿನ ಮೇಲೆ ಬಿದ್ದು ತಲೆಯನ್ನು ಒಡೆದುಕೊಂಡನು. ಮೈಯೆಲ್ಲಾ ರಕ್ತವಾಗಿ ಹೇಗೆ ಹೇಗೋ ಮನೆಗೆ ಬಂದು ಸೇರಿದನು. ಗಾಯಕ್ಕೆ ಎನೋ ಅಪಥ್ಯವಾಗಿ, ಅದು ಕೀವು ಕಟ್ಟಿಕೊಂಡು ವಾಸಿಯಾಗುವುದೇ ಅಸಾಧ್ಯವಾಗಿ, ಕೊನೆಗೆ ಹೇಗೆ ಹೇಗೋ ವಾಸಿಯಾಯಿತು.
ಒಂದು ಸಲ ಅವನಿದ್ದ ದೇಶದಲ್ಲೆ ಕ್ಷಾಮವು ಬರಲು, ಅವನು ದೇಶಾಂತರ ಹೋಗಿ ಒಬ್ಬ “ರಾಜನ ಬಳಿ ಸೇವಕನಾದನು. ಆ ರಾಜನು ಅವನ ಹಣೆಯಲ್ಲಿರುವ ಭಾರಿಯ ಕಲೆಯನ್ನು ನೋಡಿ “ಇವನು ವೀರಪುರುಷನಿರಬೇಕು. ಇವನ ಹಣೆಯ ಮೇಲಿನ ಕಲೆಯು ಮಖಾಮಖಿ ಯುದ್ಧಮಾಡಿದಾಗ ಆದದ್ದು ಇರಬೇಕು.” ಎಂದುಕೊಂಡು ಅವನಿಗೆ ಬೇಕಾದ ಮಾನ ಮರ್ಯಾದೆಗಳನ್ನು ಮಾಡಿ ರಾಜಪುತ್ರರ ಬಳಿ ಇಟ್ಟುಕೊಂಡಿದ್ದನು.
ಒ೦ದು ದಿನ ಅರಸನು ವೀರ ಸಂಭಾವನೆಯನ್ನು ಕೊಡಲು ಎಲ್ಲರನ್ನೂ ಕರೆಸಿದನು. ಆನೆ ಕುದುರೆ ಮೊದಲಾದುವುಗಳೂ ವೀರ ಪುರುಷರೂ ಬಂದು ನಿಂತಿದ್ದರು. ಆಗ ಅಗಸನು ಕುಂಬಾರನನ್ನು ಕರೆದು, “ಎಲೈ ರಾಜಪುತ್ರ, ನಿನ್ನ ಹೆಸರೇನು? ನೀನು ಯಾವ  ಜಾತಿಯವನು? ಯಾವ ಯುದ್ಧದಲ್ಲಿ ಏಟು ತಿಂದು ನಿನಗೆ ಈ ಹಣೆಯು ಹೀಗಾಯಿತು?” ಎಂಡು ಕೇಳಿದನು. ಕುಂಬಾರನು “ದೇವ, ಇದು ಶಸ್ತ್ರದ ಗಾಯವಲ್ಲ. ಯುಧಿಸ್ಠಿರನೆಂಬ ಕುಂಬಾರನು ನಾನು. ನಮ್ಮ ಮನೆಯಲ್ಲಿ ಎಷ್ಟೋ ಓಡುಗಳು ಇದ್ದವು. ಒಂದು ದಿನ ನಾನು ಓಡಿಬರುತ್ತಾ ಒಂದು ಓಡಿನ ಮೇಲೆ ಬಿದ್ದೆನು. ಅದು ತಗಲಿ ಇಷ್ಟು ಗಾಯವಾಯಿತು” ಎಂದು
ಹೇಳಿದನು.
ರಾಜನು ಅದನ್ನು ಕೇಳಿ. “ಮೋಸವಾಯಿತು,” ಎಂದು ಕೊಂಡು ಮೊದಲು ಇವನನ್ನು ಹೊರಕ್ಕೆ ತಳ್ಳಿ ಎಂದನು. ಕುಂಬಾರನು, “ಅರಸಾ, ತಡೆ, ತಡೆ, ಯುದ್ಧ ಬರಲಿ, ನನ್ನ ಕೈ ತೋರಿಸುವೆನು.” ಎನ್ನಲು ಅರಸನು ಹೇಳಿದನು: “ಆಹಾ, ಅಲ್ಲವೇ? ನೀನು ಸರ್ವ ಗುಣ ಸಂಪನ್ನನು. ಆದರೂ ನಮಗೆ ಬೇಡ, ಕೇಳಲಿಲ್ಲವೇ?”
ಶೂರನೆ ಅಹುದು, ಸುಂದರನಹುದು, ಪಂಡಿತನಹುದು ॥
ಆದರು ಮಗನೆ, ನಿನ್ನವರಾನೆಯ ಕೊಂದವರಲ್ಲಾ ॥ ೨೦ ॥
ಕುಂಬಾರನು “ಅದು ಹೇಗೆ?” ಎನ್ನಲು : ಅರಸನು ಹೇಳಿದನು:-
*****
ನರಿಯ ಮರಿಯ ಕಥೆ ಓದಿ.
Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...