Home / ಬಾಲ ಚಿಲುಮೆ / ಕಥೆ / ಯುಧಿಷ್ಠಿರನ ಕಥೆ

ಯುಧಿಷ್ಠಿರನ ಕಥೆ

ಒಂದಾನೊಂದು ಊರಿನಲ್ಲಿ ಒಬ್ಬ ಕುಂಬಾರನಿದ್ದನು. ಅವನ ಹೆಸರು ಯುಧಿಷ್ಠಿರ. ಅವನು ಒಂದಾನೊಂದು ದಿನ ಬಹು ವೇಗವಾಗಿ ಓಡಿಬರುತ್ತಾ ಒಡೆದ ಮಡಕೆಯ ತುಂಡಿನ ಮೇಲೆ ಬಿದ್ದು ತಲೆಯನ್ನು ಒಡೆದುಕೊಂಡನು. ಮೈಯೆಲ್ಲಾ ರಕ್ತವಾಗಿ ಹೇಗೆ ಹೇಗೋ ಮನೆಗೆ ಬಂದು ಸೇರಿದನು. ಗಾಯಕ್ಕೆ ಎನೋ ಅಪಥ್ಯವಾಗಿ, ಅದು ಕೀವು ಕಟ್ಟಿಕೊಂಡು ವಾಸಿಯಾಗುವುದೇ ಅಸಾಧ್ಯವಾಗಿ, ಕೊನೆಗೆ ಹೇಗೆ ಹೇಗೋ ವಾಸಿಯಾಯಿತು.
ಒಂದು ಸಲ ಅವನಿದ್ದ ದೇಶದಲ್ಲೆ ಕ್ಷಾಮವು ಬರಲು, ಅವನು ದೇಶಾಂತರ ಹೋಗಿ ಒಬ್ಬ “ರಾಜನ ಬಳಿ ಸೇವಕನಾದನು. ಆ ರಾಜನು ಅವನ ಹಣೆಯಲ್ಲಿರುವ ಭಾರಿಯ ಕಲೆಯನ್ನು ನೋಡಿ “ಇವನು ವೀರಪುರುಷನಿರಬೇಕು. ಇವನ ಹಣೆಯ ಮೇಲಿನ ಕಲೆಯು ಮಖಾಮಖಿ ಯುದ್ಧಮಾಡಿದಾಗ ಆದದ್ದು ಇರಬೇಕು.” ಎಂದುಕೊಂಡು ಅವನಿಗೆ ಬೇಕಾದ ಮಾನ ಮರ್ಯಾದೆಗಳನ್ನು ಮಾಡಿ ರಾಜಪುತ್ರರ ಬಳಿ ಇಟ್ಟುಕೊಂಡಿದ್ದನು.
ಒ೦ದು ದಿನ ಅರಸನು ವೀರ ಸಂಭಾವನೆಯನ್ನು ಕೊಡಲು ಎಲ್ಲರನ್ನೂ ಕರೆಸಿದನು. ಆನೆ ಕುದುರೆ ಮೊದಲಾದುವುಗಳೂ ವೀರ ಪುರುಷರೂ ಬಂದು ನಿಂತಿದ್ದರು. ಆಗ ಅಗಸನು ಕುಂಬಾರನನ್ನು ಕರೆದು, “ಎಲೈ ರಾಜಪುತ್ರ, ನಿನ್ನ ಹೆಸರೇನು? ನೀನು ಯಾವ  ಜಾತಿಯವನು? ಯಾವ ಯುದ್ಧದಲ್ಲಿ ಏಟು ತಿಂದು ನಿನಗೆ ಈ ಹಣೆಯು ಹೀಗಾಯಿತು?” ಎಂಡು ಕೇಳಿದನು. ಕುಂಬಾರನು “ದೇವ, ಇದು ಶಸ್ತ್ರದ ಗಾಯವಲ್ಲ. ಯುಧಿಸ್ಠಿರನೆಂಬ ಕುಂಬಾರನು ನಾನು. ನಮ್ಮ ಮನೆಯಲ್ಲಿ ಎಷ್ಟೋ ಓಡುಗಳು ಇದ್ದವು. ಒಂದು ದಿನ ನಾನು ಓಡಿಬರುತ್ತಾ ಒಂದು ಓಡಿನ ಮೇಲೆ ಬಿದ್ದೆನು. ಅದು ತಗಲಿ ಇಷ್ಟು ಗಾಯವಾಯಿತು” ಎಂದು
ಹೇಳಿದನು.
ರಾಜನು ಅದನ್ನು ಕೇಳಿ. “ಮೋಸವಾಯಿತು,” ಎಂದು ಕೊಂಡು ಮೊದಲು ಇವನನ್ನು ಹೊರಕ್ಕೆ ತಳ್ಳಿ ಎಂದನು. ಕುಂಬಾರನು, “ಅರಸಾ, ತಡೆ, ತಡೆ, ಯುದ್ಧ ಬರಲಿ, ನನ್ನ ಕೈ ತೋರಿಸುವೆನು.” ಎನ್ನಲು ಅರಸನು ಹೇಳಿದನು: “ಆಹಾ, ಅಲ್ಲವೇ? ನೀನು ಸರ್ವ ಗುಣ ಸಂಪನ್ನನು. ಆದರೂ ನಮಗೆ ಬೇಡ, ಕೇಳಲಿಲ್ಲವೇ?”
ಶೂರನೆ ಅಹುದು, ಸುಂದರನಹುದು, ಪಂಡಿತನಹುದು ॥
ಆದರು ಮಗನೆ, ನಿನ್ನವರಾನೆಯ ಕೊಂದವರಲ್ಲಾ ॥ ೨೦ ॥
ಕುಂಬಾರನು “ಅದು ಹೇಗೆ?” ಎನ್ನಲು : ಅರಸನು ಹೇಳಿದನು:-
*****
ನರಿಯ ಮರಿಯ ಕಥೆ ಓದಿ.
Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...