Home / ಬಾಲ ಚಿಲುಮೆ / ಕಥೆ / ಯುಧಿಷ್ಠಿರನ ಕಥೆ

ಯುಧಿಷ್ಠಿರನ ಕಥೆ

ಒಂದಾನೊಂದು ಊರಿನಲ್ಲಿ ಒಬ್ಬ ಕುಂಬಾರನಿದ್ದನು. ಅವನ ಹೆಸರು ಯುಧಿಷ್ಠಿರ. ಅವನು ಒಂದಾನೊಂದು ದಿನ ಬಹು ವೇಗವಾಗಿ ಓಡಿಬರುತ್ತಾ ಒಡೆದ ಮಡಕೆಯ ತುಂಡಿನ ಮೇಲೆ ಬಿದ್ದು ತಲೆಯನ್ನು ಒಡೆದುಕೊಂಡನು. ಮೈಯೆಲ್ಲಾ ರಕ್ತವಾಗಿ ಹೇಗೆ ಹೇಗೋ ಮನೆಗೆ ಬಂದು ಸೇರಿದನು. ಗಾಯಕ್ಕೆ ಎನೋ ಅಪಥ್ಯವಾಗಿ, ಅದು ಕೀವು ಕಟ್ಟಿಕೊಂಡು ವಾಸಿಯಾಗುವುದೇ ಅಸಾಧ್ಯವಾಗಿ, ಕೊನೆಗೆ ಹೇಗೆ ಹೇಗೋ ವಾಸಿಯಾಯಿತು.
ಒಂದು ಸಲ ಅವನಿದ್ದ ದೇಶದಲ್ಲೆ ಕ್ಷಾಮವು ಬರಲು, ಅವನು ದೇಶಾಂತರ ಹೋಗಿ ಒಬ್ಬ “ರಾಜನ ಬಳಿ ಸೇವಕನಾದನು. ಆ ರಾಜನು ಅವನ ಹಣೆಯಲ್ಲಿರುವ ಭಾರಿಯ ಕಲೆಯನ್ನು ನೋಡಿ “ಇವನು ವೀರಪುರುಷನಿರಬೇಕು. ಇವನ ಹಣೆಯ ಮೇಲಿನ ಕಲೆಯು ಮಖಾಮಖಿ ಯುದ್ಧಮಾಡಿದಾಗ ಆದದ್ದು ಇರಬೇಕು.” ಎಂದುಕೊಂಡು ಅವನಿಗೆ ಬೇಕಾದ ಮಾನ ಮರ್ಯಾದೆಗಳನ್ನು ಮಾಡಿ ರಾಜಪುತ್ರರ ಬಳಿ ಇಟ್ಟುಕೊಂಡಿದ್ದನು.
ಒ೦ದು ದಿನ ಅರಸನು ವೀರ ಸಂಭಾವನೆಯನ್ನು ಕೊಡಲು ಎಲ್ಲರನ್ನೂ ಕರೆಸಿದನು. ಆನೆ ಕುದುರೆ ಮೊದಲಾದುವುಗಳೂ ವೀರ ಪುರುಷರೂ ಬಂದು ನಿಂತಿದ್ದರು. ಆಗ ಅಗಸನು ಕುಂಬಾರನನ್ನು ಕರೆದು, “ಎಲೈ ರಾಜಪುತ್ರ, ನಿನ್ನ ಹೆಸರೇನು? ನೀನು ಯಾವ  ಜಾತಿಯವನು? ಯಾವ ಯುದ್ಧದಲ್ಲಿ ಏಟು ತಿಂದು ನಿನಗೆ ಈ ಹಣೆಯು ಹೀಗಾಯಿತು?” ಎಂಡು ಕೇಳಿದನು. ಕುಂಬಾರನು “ದೇವ, ಇದು ಶಸ್ತ್ರದ ಗಾಯವಲ್ಲ. ಯುಧಿಸ್ಠಿರನೆಂಬ ಕುಂಬಾರನು ನಾನು. ನಮ್ಮ ಮನೆಯಲ್ಲಿ ಎಷ್ಟೋ ಓಡುಗಳು ಇದ್ದವು. ಒಂದು ದಿನ ನಾನು ಓಡಿಬರುತ್ತಾ ಒಂದು ಓಡಿನ ಮೇಲೆ ಬಿದ್ದೆನು. ಅದು ತಗಲಿ ಇಷ್ಟು ಗಾಯವಾಯಿತು” ಎಂದು
ಹೇಳಿದನು.
ರಾಜನು ಅದನ್ನು ಕೇಳಿ. “ಮೋಸವಾಯಿತು,” ಎಂದು ಕೊಂಡು ಮೊದಲು ಇವನನ್ನು ಹೊರಕ್ಕೆ ತಳ್ಳಿ ಎಂದನು. ಕುಂಬಾರನು, “ಅರಸಾ, ತಡೆ, ತಡೆ, ಯುದ್ಧ ಬರಲಿ, ನನ್ನ ಕೈ ತೋರಿಸುವೆನು.” ಎನ್ನಲು ಅರಸನು ಹೇಳಿದನು: “ಆಹಾ, ಅಲ್ಲವೇ? ನೀನು ಸರ್ವ ಗುಣ ಸಂಪನ್ನನು. ಆದರೂ ನಮಗೆ ಬೇಡ, ಕೇಳಲಿಲ್ಲವೇ?”
ಶೂರನೆ ಅಹುದು, ಸುಂದರನಹುದು, ಪಂಡಿತನಹುದು ॥
ಆದರು ಮಗನೆ, ನಿನ್ನವರಾನೆಯ ಕೊಂದವರಲ್ಲಾ ॥ ೨೦ ॥
ಕುಂಬಾರನು “ಅದು ಹೇಗೆ?” ಎನ್ನಲು : ಅರಸನು ಹೇಳಿದನು:-
*****
ನರಿಯ ಮರಿಯ ಕಥೆ ಓದಿ.
Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...