Home / ಬಾಲ ಚಿಲುಮೆ / ಕಥೆ / ನರಿಯ ಮರಿಯ ಕಥೆ

ನರಿಯ ಮರಿಯ ಕಥೆ

ಒಂದಾನೊಂದು ಕಾಡಿನಲ್ಲಿ ಸಿಂಹ ದಂಪತಿಗಳು ಇದ್ದವು. ಸಿಂಹಿಯು ಒಂದು ಸಲ “ಎರಡು ಮರಿಗಳನ್ನು ಈದಿತು. ಸಿಂಹವು ದಿನವೂ ಹೋಗಿ ಬೇಟೆಯಾಡಿ ಆ ತಾಯಿ ಮಕ್ಕಳಿಗೆ ಮಾಂಸವನ್ನು ತಂದುಕೊಡುತ್ತಿತ್ತು. ಒಂದು ದಿನ ಬೇಟೆಯಿಂದ ಬರುವಾಗ ಒಂದು ನರಿಯ ಎಳೆಯ ಮರಿಯು ಸಿಕ್ಕಲು, ಸಿಂಹವು ಅದನ್ನು ತಂದು ಹೆಂಡತಿಗೆ ಕೊಟ್ಟಿತು. ಸಿಂಹಿಯು ಅದನ್ನು ಕೊಲ್ಲದೆ, ಅದಕ್ಕೂ ಹಾಲು ಕೊಟ್ಟು ಸಾಕಿತು. ಆಮರಿಗಳೊಡನೆ ಅದೂ ಬೆಳೆಯಿತು.
ಅವು ಒ೦ದು ದಿನ ಅರಣ್ಯದಲ್ಲಿ ಅಲೆಯುತ್ತಿರುವಾಗ ಅವುಗಳ ಎದುರಿಗೆ ಒ೦ದು ಆನೆಯು ಬಂತು. ಸಿಂಹದ ಮರಿಗಳು ಅದನ್ನು ಕಂಡು ರೇಗಿ ಅದರ ಮೇಲೆ ಬೀಳಲು ಹೋದುವು. ನರಿಯ ಮರಿಯು “ಬೇಡ ಬೇಡ” ಎಂದು ತಡೆಯಿತು; ಅವು ನಿಲ್ಲದಿರಲು ತಾನು ಮನೆಯ ಕಡೆಗೆ “ಓಡಿತು. ಇದು ಓಡುತ್ತಲೂ ಅವು ಏನೋ ಎಂತೋ ಎಂದು ಅದರ ಹಿಂದೆಯೇ ಬಂದುಬಿಟ್ಟುವು. ಕೇಳಿಲ್ಲವೆ?
ಉತ್ಸಾಹಿ ಧೀರನಿಂದುತ್ಸಾಹ ಸೇನೆಗೆಲ್ಲ | 
ಸೋತೊಬ್ಬನೋಡಲ್ಕೆ ಸೋತಂತೆ ಸೇನೆಯೆಲ್ಲ ॥೨೧॥ 
ಮನೆಗೆ ಬಂದಮೇಲೆ ಸಿಂಹದ ಮರಿಗಳೆರಡೂ ತಾಯಿ ಬಳಿಯಲ್ಲಿ “ಅಮ್ಮಾ, ಅಣ್ಣ ಈ ವೊತ್ತು ಹೆದರಿ ಓಡಿ ಬಂದುಬಿಟ್ಟ” ಎಂದು ಹಾಸ್ಯಮಾಡಿ ನಗುತ್ತ ನರಿಯ ಮರಿಯು ಮಾಡಿದುದನ್ನೆಲ್ಲಾ ಹೇಳಿದುವು. ಅದನ್ನು ಕೇಳಿ ನರಿಯ ಮರಿಗೆ ಕೋಪ ಬಂತು. ಅವರನ್ನು ಗದರಿಸಿಕೊಂಡು ಬಯ್ಯಿತು.
ಸಿಂಹಿಯು ನರಿಯ ಮರಿಯನ್ನು ಬೇರೆಯಾಗಿ ಕರೆದು “ಮಗು, ನೀನು ಹೀಗೆಲ್ಲ ಹಾರಾಡಬಾರದು. ನಿನ್ನ ತಮ್ಮಂದಿರು ಅವರು” ಎನ್ನಲು, ಅದು ಇನ್ನೂ ರೇಗಿ ಹಾರಾಡಿತು. “ನಾನೇನು ಇವರಿಗಿಂತ ಕಡಿಮೆಯೋ? ನನಗೆ ಶೌರ್ಯವಿಲ್ಲವೋ? ರೂಪವಿಲ್ಲವೋ? ವಿದ್ಯೆಯಿಲ್ಲವೋ? ನನ್ನನ್ನು ಇವರು ಏಕೆ ಹಾಸ್ಯ ಮಾಡುವುದು?” ಎಂದು ಕೂಗಿತು. ಆಗ ಸಿಂಹಿಯು ನಗುತ್ತ ಹೇಳಿತು:-“ನೀನು ಎಲ್ಲವೂ ಅಹುದು. ಅದರೂ ನಿನ್ನವರು ಆನೆಯನ್ನು ಕೊಂದವರಲ್ಲ. ನೀನು ನರಿಯ ಮಗನು. ನಾನು ನಿನ್ನನ್ನು ಕಾಪಾಡಿದೆ ಅಷ್ಟೆ? ನನ್ನ ಮರಿಗಳಿಗೆ ನೀನು ನರಿಯೆಂಬುದು ಇನ್ನೂ ತಿಳಿಯದು. ಈಗಲೇ ಹೊರಟು ಹೋಗಿ ನಿನ್ನವರ ಜೊತೆ ಸೇರಿಕೊ. ಇಲ್ಲದಿದ್ದರೆ ಇವರ ಏಟು ತಿಂದು ಸತ್ತೀಯೆ” ಎಂದು ಹೇಳಿ ಅದನ್ನು ಅಲ್ಲಿಂದ ಕಳುಹಿಸಿ ಕೊಟ್ಟಿತು.
ಅದರಂತೆಯೇ ನೀನೂ ಈ ರಾಜಪುತ್ರರು ನೀನು ಕುಂಬಾರನೆಂದು ತಿಳಿಯುವುದಕ್ಕಿಂತ ಮುಂಚೆಯೇ ಓಡಿಬಿಡು.ಇಲ್ಲವಾದರೆ ಇವರ ಕೈಗೆ ಸಿಕ್ಕಿ ಬದುಕವುದೇ ಕಷ್ಟವಾದೀತು.” ಎಂದು ಹೇಳಲು ಅವನೂ ಹೋಗಿ ಬದಕಿದನು.
“ಎಲೆ ಮೊಸಳೆ, ನೀನು ನಿಜವಾಗಿ ಮೂರ್ಖನು. ಹೆಂಗಸಿನ ಮಾತು ಕೇಳಿ ಕೆಟ್ಟೆ. ಕಥೆಯನ್ನು ಕೇಳಿಲ್ಲವೇ?
ಹೆಣ್ಣು ಮಾಡೆನೆ ಗಂಡು ಮಾಡನದೇನ? 
ಕುದುರೆಯಿಲ್ಲದ ಅರಸು ಕೆನೆಯುವ ॥ ಪರ್ವ 
ಕಾಲವೆನ್ನದೆ ಮಂತ್ರಿ ಬೋಳಿಪ ತಲೆಯನು ॥ 
ಮೊಸಳೆಯು ಅದು ಹೇಗೆ ಎನ್ನಲು ಕಪಿಯು ಹೇಳಿತು: –
*****
ಅರಸು ಮಂತ್ರಿಗಳ ಕಥೆ ಓದಿ
Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...