Home / ಬಾಲ ಚಿಲುಮೆ / ಕಥೆ / ಅರಸು ಮಂತ್ರಿಗಳ ಕಥೆ

ಅರಸು ಮಂತ್ರಿಗಳ ಕಥೆ

ನಂದನೆಂಬ ಒಬ್ಬಾನೊಬ್ಬ ರಾಜನು ಇದ್ದನು. ಸಮುದ್ರಗಳವರೆಗಿನ ಭೂಮಿಯೆಲ್ಲವೂ ಆತನದು. ಆತನಿಗೆ ವರರುಚಿಯೆಂಬ ಒಬ್ಬ ಮಂತ್ರಿಯಿದ್ದನು. ಆತನು ಸರ್ವಶಾಸ್ತ್ರಗಳನ್ನೂ ಬಲ್ಲವನು.
ಆ ಮಂತ್ರಿಯು ಒಂದು ದಿನ ಹೆಂಡತಿಯೊಡನೆ ಸರಸವಾಡುತ್ತಾ ಇರುವಾಗ ಅವಳಿಗೆ ಕೋಪ ಬಂತು. ಆತನು ಏನು ಮಾಡಿದರೂ ಅವಳು ಕೋಪವನ್ನು ಬಿಡಲಿಲ್ಲ. ಆಗ ಆತನು “ಏನು ಮಾಡಿದರೆ ನಿನ್ನ ಕೋಪವು ತೀರುವುದು? ಅದನ್ನಾದರೂ ಹೇಳು?” ಎಂದು ಕೇಳಿದನು. ಅವಳು “ನೀನು ತಲೆಯನ್ನು ಇವೊತ್ತೇ ಬೋಳಿಸಿಕೊಂಡು ನನ್ನ ಕಾಲಿಗೆ ಬೀಳಬೇಕು” ಎಂದಳು. ಆ ದಿನ ಅಮಾವಾಸ್ಯೆ. ಅಮಾವಾಸ್ಯೆ, ಹುಣಿಮೆ, ಸಂಕ್ರಮಣ, ಇವು ಪರ್ವಗಳು. ತಿಳಿದವರು ಯಾರೂ ಆ ದಿನಗಳಲ್ಲಿ ತಲೆಯನ್ನು ಬೋಳಿಸಿಕೊಳ್ಳುವುದಿಲ್ಲ. ಆದರೂ ವರರುಚಿಯು ಹೆಂಡತಿಗೆ ಸಂತೋಷವಾಗಲೆಂದು ತಲೆಯನ್ನು ಬೋಳಿಸಿಕೊಂಡು ಬಂದು ಅವಳ ಕಾಲಿಗೆ ಬಿದ್ದನು. ಅವಳಿಗೆ ಸಂತೋಷವಾಯಿತು: ಪ್ರಸನ್ನಳಾದಳು.
ಅತ್ತ ಅರಸನ ಹೆಂಡಿತಿಯೂ ಹೀಗೆಯೇ ಯಾವುದೋ ಕಾರಣಕ್ಕಾಗಿ ಕೋಪ ಮಾಡಿಕೊಂಡಳು. ಅರಸನೂ ಹೆಂಡಿತಿಯನ್ನು “ಏನು ಮಾಡಿದರೆ ಪ್ರಸನ್ನಳಾಗುವೆಯೋ ಹೇಳು” ಎಂದು ಕೇಳಿದನು. ಅವಳು “ನೀನು ಕುದುರೆಯಂತೆ ಬಾಯಿಗೆ ಕಡಿವಾಣ ಹಾಕಿಸಿಕೊಂಡು, ನನ್ನನ್ನು ಬೆನ್ನಿನ ಮೇಲೆ ಕುಳ್ಳರಿಸಿಕೊಂಡು ಕುದುರೆಯಂತೆ ಕೆನೆಯುತ್ತ ಓಡಬೇಕು.” ಎಂದಳು. ಅರಸನೂ ಹಾಗೆಯೇ ಮಾಡಿದನು.
ಮರುದಿನ ದೊರೆಯನ್ನು ಕಾಣುವುದಕ್ಕೆ ಮಂತ್ರಿಯು ಬಂದನು. ಅರಸನು ಮಂತ್ರಿಯು ತಲೆ ಬೋಳಿಸಿಕೊಂಡಿರುವುದನ್ನು ನೋಡಿ ಆಶ್ಚರ್ಯಪಟ್ಟು, “ಏನು ಮಂತ್ರಿಗಳೇ, ಪರ್ವಕಾಲದಲ್ಲಿಯೂ ಮುಂಡನವೇ?” ಎಂದನು. ಆತನು ನಗು ನಗುತ್ತಾ “ಮಹಾಸ್ವಾಮಿ, ಅರಸನು ಕುದರೆಯಂತೆ ಕಡಿವಾಣ ಕಚ್ಚಿಕೊಂಡು ಕೆನೆಯುತ್ತಾ ತಿರುಗಿದ ದಿವಸ ಪರ್ವವಾದರೂ ಮುಂಡನವಾಗಬಹುದು” ಎಂದನು. ಅರಸನು ಸುಮ್ಮನಾದನು.
ಅದರಿಂದ ಎಲೆ ದುಷ್ಟ ಮೊಸಳೆಯೇ, ನೀನೂ ನಂದವರ ರುಚಿಗಳಂತೆ ಸ್ತ್ರೀ ವಶನಾದವನು. ಒಂದು ಉಪಾಯ ಮಾಡಿ ನನ್ನನ್ನು ವಧ ಮಾಡಲು ಕರೆದುಕೊಂಡೂ ಹೋದೆ: ಆದರೆ ನಿನ್ನ ವಾಗ್ದೇಷದಿಂದಲೇ ನಿನ್ನ ಕೆಲಸ ಕೆಟ್ಟಿತು. ಕೇಳಿಲ್ಲವೇ?
ಶುಕ ಸಾರಿಕೆಗಳ ಬಂದಿಪುದೇಕೆ? ನುಡಿವುದರಿಂ ಬಂಧನವವಕೆ ॥ 
ಬಕವನು ಬಂಧಿಸದಿರುವುದದೇಕೆ? ನುಡಿಯದು ಬಂಧನವಿಲ್ಲದಕೆ ॥೨೨॥ 
ಮತ್ತು, 
ಹುಲಿಯಚರ್ಮವ ಹೊದ್ದುಕೊಂಡು | 
ಭೀತಿತೋರುವ ರೂಪುಗೊಂಡು 
ಮೇಯುತಿದ್ದಾ ಕತ್ತೆಗಂದು | 
ಕೂಗಿಕೊಂಡುದೆ ಮೃತ್ಯುವಾಯ್ತು ॥ ೨೩ ॥ 
ಮೊಸಳೆಯು… “ಅದು ಹೇಗೆ?” ಎನ್ನಲು ಕಪಿಯು ಹೇಳಿತು.
*****
ಹುಲಿಯಾಗಿದ್ದ ಕತ್ತೆಯ ಕಥೆ ಓದಿ
Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...