Home / ಬಾಲ ಚಿಲುಮೆ / ಕಥೆ / ಹುಲಿಯಾಗಿದ್ದ ಕತ್ತೆಯ ಕಥೆ

ಹುಲಿಯಾಗಿದ್ದ ಕತ್ತೆಯ ಕಥೆ

ಒಂದಾನೊಂದು ಊರಿನಲ್ಲಿ ಶುದ್ಧ ಪಟನೆಂಬ ಅಗಸನು ಇದ್ದನು. ಅವನಿಗೆ ಒಂದು ಕತ್ತೆಯಿತ್ತು. ಅದು ಹೊಟ್ಟೆಗಿಲ್ಲದೆ ಬಹಳ ಇಳಿದುಹೋಗಿ ನಿಶ್ಶಕ್ತಿಯಾಗಿತ್ತು. ಆ ಅಗಸನು ಒ೦ದು ದಿನ ಎಲ್ಲಿಯೋ ಹೋಗಿ ಬರುತ್ತಿದ್ದಾಗ ಕಾಡಿನಲ್ಲಿ ಸತ್ತು ಬಿದ್ದಿದ್ದ ಹುಲಿಯೊಂದನ್ನು ಕಂಡನು. ಅಹಾ, ಇದರ ಚರ್ಮವನ್ನು “ತಗೆದು ಕೊಂಡು ಹೋಗಿ ನಮ್ಮ ಕತ್ತೆಗೆ ಹೊದಿಸಿ ಹೊಲಗಳಲ್ಲಿ ಬಿಟ್ಟು ಬಿಟ್ಟರೆ, ಕಾವಲುಗಾರರು ಹುಲಿಯೆಂದುಕೊಳ್ಳುವರು; ಇದನ್ನು ಯಾರೂ ಓಡಿಸುವುದಿಲ್ಲ. ಹಾಗೆ ಆದಕ್ಕೆ, ಕತ್ತೆಯು ಚೆನ್ನಾಗಿ ಮೇದು ಬಲವಾಗುವುದು” ಎಂದು ಯೋಚನೆ ಬಂತು. ಅವನು ಹಾಗೆಯೇ ಮಾಡಿದನು. ರಾತ್ರಿಯೆಲ್ಲವೂ ಕತ್ತೆಯು ಬೆಳೆದ ಹೊಲದಲ್ಲಿ ಮೇಯುವುದು.  ಬೆಳಗಾಗುವುದಕ್ಕೆ ಮುಂಚೆಯೇ ಅಗಸನು ಬಂದು ಅದನ್ನು ಹೊಡೆದುಕೊಂಡು ಹೋಗುವನು.
“ಹೀಗೆಯೇ ಕೆಲವು ಕಾಲ ನಡೆಯಲು ಕತ್ತೆಯು ಚೆನ್ನಾಯಿತು. ಅವನ್ನು ಹಿಡಿಯುವುದೇ ಕಷ್ಟವಾಯಿತು. ಹೀಗಿರಲು ಒಂದು ದಿನ ಹೊಲದಲ್ಲಿ ಮೇಯುತ್ತಿದ್ದ ಕತ್ತೆಯು ದೂರದಲ್ಲಿ ಎಲ್ಲಿಯೋ ಇನ್ನೊ೦ದು ಕತ್ತೆಯು ಕೂಗಿದುದನ್ನು ಕೇಳಿತು. ಅದು ಹೆಣ್ಣು ಕತ್ತೆಯೆಂದುಕೊಂಡು‌ ತಾನೂ ಕೂಗುವುದಕ್ಕೆ ಆರಂಭಿಸಿತು.
ಕೂಡಲೇ ಕಾವಲುಗಾರರು “ಎಲೆಲಾ ಇದು ಹುಲಿಯಲ್ಲ. ಹುಲಿಯ ಚರ್ಮ ಹೊದ್ದ ಕತ್ತೆ” ಎಂದು ತಿಳಿದುಕೊಂಡು ಬಂದು ಕಲ್ಲು ದೊಣ್ಣೆ ಮುಂತಾದವುಗಳಿಂದ ಹೊಡೆದು ಕೊಂದರು.
ಅದರಿಂದ ಹೇಳಿದೆನು. “ಕತ್ತೆಗಂದು ಕೂಗಿಕೊಂಡುದೆ ಮೃತ್ಯುವಾಯ್ತು ಎಂದು” ಎಂದು ಕಪಿಯು ಕಥೆಯನ್ನು ಮುಗಿಸುತ್ತಿದ್ದ ಹಾಗೆಯೇ ಒಂದು ಜಲಚರವು (ನೀರಿನ ಪ್ರಾಣಿ) ಬಂದು “ಎಲೆ ಮೊಸಳೆ ನಿನ್ನ ಹೆಂಡತಿಯು ನೀನು ಬರಲಿಲ್ಲವೆಂದು ಉಪವಾಸಮಾಡಿ ಬಿಟ್ಟಳು? ಎಂದು ಹೇಳಿತು. ಸಿಡಿಲಿನಂತಹ ಆ ಕೆಟ್ಟ ಸುದ್ದಿಯನ್ನು ಕೇಳಿ ಮೊಸಳೆಯು ಹೋ ಎಂದು ಅತ್ತಿತು.
“ಅಯ್ಯೋ, ನನ್ನ ಅದೃಷ್ಟಟವೇ! ಹೀಗಾಗಬಹುದೇ? ಕೇಳಿಲ್ಲವೆ?
ಎಲ್ಲಿ ತಾಯಿಯಿಲ್ಲವೋ; ನುಡಿವ ಮುದ್ದು
ಮಡದಿ ಎಲ್ಲಿಯಿಲ್ಲವೋ, ಆ ಮನೆಯು
ಮನೆಯೇ? ಅದರಲಿಲ್ಲದಿದ್ದರೇನಿದ್ದರೇನು? ॥
ಅಡವಿಗಾಮನೆಗುಂ ನೋಡಲಾಗಿ ಭೇದವೇನು? ॥೨೪॥
ಆದದ್ದು ಆಗಿ ಹೋಯಿತು. ನನ್ನ ಅಪರಾಧವನ್ನು ಮನ್ನಿಸು. ನನ್ನ ಹೆ೦ಡಿತಿಯೂ ಹೋದಳು. ಆ ದುಃಖವನ್ನು ನಾನು ತಡೆಯಲಾರೆ. ನಾನು ಬೆಂಕಿಗೆ ಬೀಳುವೆನು” ಎಂದು ಬಹಳವಾಗಿ ಅತ್ತು ಕೊಂಡಿತು.
ಅದನ್ನು ಕೇಳಿ ಕಪಿಯು ನಕ್ಕುಬಿಟ್ಟತು. “ಎಲೆಲಾ, ಈಗ ತಿಳಿಯಿತು. ನೀನು ಕೇವಲ ಸ್ತ್ರೀವಶನು ಮಾತ್ರವಲ್ಲ ಹೆಣ್ಣಿಗೆ ಸೋತವನೂ ಹೌದು. ಅದರಿಂದ ನೀನು ಅಪರಾಧಿಯಲ್ಲ ಎಂದು ನಂಬಿಕೆಯಾಯಿತು. ಮೂಢ, ಇದು ಆನಂದ ಪಡುವ ಸಮಯ. ಅಳುವ ಸಮಯವಲ್ಲ. ಅಂತಹ ಹೆಂಡತಿಯು ಸತ್ತರೆ ಹಬ್ಬ ಮಾಡಬೇಕು.” ಎಂದಿತು.
ಮೊಸಳೆಯು ಹೇಳಿತು. “ಮಿತ್ರ, ನೀನು ಹೇಳುವುದಿರಲಿ, ಈಗ ನೋಡು,” ನನಗೆ ಎರಡು ನಷ್ಟವಾಯಿತು. ಮೊದಲನೆಯದಾಗಿ ಮನೆಯು ಹಾಳಾಗಿ ಹೋಯಿತು. ಎರಡನೆಯದಾಗಿ ನಿನ್ನಂತಹ ಸ್ನೇಹಿತನ ಸ್ನೇಹವು ಹೋಯಿತು. ಇದಿಷ್ಟೂ ನನ್ನ ಹಣೆಯ ಬರೆಹ! ಕೇಳಿಲ್ಲವೆ?
ನನ್ನ ಜಾಣಿಗೆರಡುಪಾಲು ನಿನ್ನ ಜಾಣು ॥ 
ಗಂಡನಿಲ್ಲ ಮಿಂಡನಿಲ್ಲ ಆದೆ ಬೆತ್ತಲೆ ॥೨೫ ॥ 
ಕಪಿಯು “ಅದು ಹೇಗೆ?” ಎಂದು ಕೇಳಲು, ಮೊಸಳೆಯು ಹೇಳಿತು:-
*****
ಎರಡೂ ಇಲ್ಲವಾದ ಕಥೆ ಓದಿ
Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...