Home / ಕಥೆ / ಸಣ್ಣ ಕಥೆ / ಮುದಿ ಕಪ್ಪೆ

ಮುದಿ ಕಪ್ಪೆ

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ.

ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿದ. ಕಪ್ಪೆ ಕದಲಲಿಲ್ಲ. ಅವನ ಹೆಂಡತಿಯೇ ಅವನಿಗೆ ಹೆದರುವದಿಲ್ಲ. ಅಂದ ಮೇಲೆ ಕಪ್ಪೆ ಬೆದರುತ್ತದೆಯೇ? ಕಪ್ಪೆಗೇ ಹೊಡೆಯಲು ಅವನ ಮನಸ್ಸಾಗಲಿಲ್ಲ. ಈ ಕಪ್ಪೆಯನ್ನೋಡಿಸಲು ಹಿಂದೆ ಮುಂದೆ ನೋಡುವವರು ಯುದ್ಧಗಿದ್ದಕ್ಕೆ ಹೋದರೆ….” ಎಂದು ಉಮೆ ಚುಚ್ಚಿದಳು. ತನಗೆ ಕಪ್ಪೆಯೆನ್ನೊಡಿಸುವ ಧೈರವೂ ಇಲ್ಲವೆಂದು ಮಡದಿ ತೀರ್ಮಾನಿಸಿ ಕೊಂಡಳಲ್ಲ ಎಂದು ಉಮೇಶನಿಗೆ ನಾಚಿಕೆಯಾಯಿತು. ಆದರೆ ಅವನ ಸಂಕಟ ಅವಳಿಗೆಲ್ಲಿ ತಿಳಿಯಬೇಕು? ಕುರುಕ್ಷೇತ್ರದಲ್ಲಿ ಬಿಲ್ಲು ಬಾಣ ಬಿಸಾಡಿ ನಿಂತ ಅರ್ಜುನನಂತಾಗಿದ್ದ ಉಮೇಶ ಅವನ ತಲೆತುಂಬ ವಿಚಾರ.

ಪಾಪ, ಈ ಕಪ್ಪೆ ಕಚ್ಚುವದಿಲ್ಲ. ಏನೂ ಕದ್ದು ತಿನ್ನುವದಿಲ್ಲಸುಮ್ಮನೆ ನೀರಿನ ತಂಪಿಗಾಗಿ ಕೊಡದ ಬಳಿಗೆ ಕುಳಿತಿದೆ. ಹೊಡೆದರೆ
ಸಾಯುವದು. ನನ್ನ ಮೇಲೆ ತಿರುಗಿ ಬೀಳುವ ಪಾಶ್ವೀವೃತ್ತಿಯದಲ್ಲ. ಇಂಥ ಪ್ರಾಣಿಯನ್ನು ಓಡಿಸಬೇಕೇ? ಏಕೆ? ನನ್ನ ಮನೆಯೊಳಗೆ ಬಂದಿತೆಂದೇ? ಹೆಂಡತಿ ಹೇಳುತ್ತಾಳೆಂದೇ? ನನಗೆ ಈ ಕಪ್ಪೆಯನ್ನು ಹೊಡೆಯಲು ಯಾವ ಅಧಿಕಾರವಿದೆ? ನನ್ನ ಮನೆಯೊಳಗೆ ಬಂದಿತೆಂದು…ನಿಜ. ಆದರೆ ಈ ಮನೆ ನನ್ನದು ಎಷ್ಟರ ಮಟ್ಟಿಗೆ? ಬಾಡಿಗೆ ಕೊಟ್ಟು ಬಿಟ್ಟರೆ ಮನೆ ನನ್ನದಾಗಲಿಲ್ಲ. ನಾಳೆ ಮಾಲಿಕನು ಬಂದು ಹೊರಡಿರಿ ಎಂದರೆ ನಾನು- ನಾವು- ಕಪ್ಪೆಯಂತೆ ಕುಳಿತುಕೊಳ್ಳುತ್ತೇವೆ! ಇನ್ನು ನಾನು…. ಎಂದರೆ ಹತ್ತುವರುಷಗಳ ಹಿಂದೆ ವಿದ್ಯಾರ್ಥಿಯಾಗಿದ್ದಾಗ ಎಲ್ಲಿಯೋ ಹೇಗೋ ದಿನ ಕಳೆಯುತ್ತಿದ್ದಾಗ ಜ್ವರ ಬಂದು ನರಳುತ್ತಿದ್ದಾಗ ಈ ಕಪ್ಪೆಯಂತೆ ಒಂದು ಮೂಲೆಯಲ್ಲಿ ಬಿದ್ದಿದ್ದಾಗ ಯಾರೋ ತಾಯಿಯಂತೆ ಆರೈಕೆ ಮಾಡಿ ಬದುಕಿಸದಿದ್ದರೆ….

“ಬೇಗ ಓಡಿಸಿ ಅಂದ್ರೆ” ಎಂದು ಉಮೆಯು ತನ್ನ ‘ಗೀತೆ’ಯನ್ನು ನುಡಿದಳು. ಉಮೇಶನು ತನ್ನ ಹತ್ತರ ಸಾಧ್ಯವಿಲ್ಲವೆಂದು ಸೌದೆಯನ್ನು ಬಿಸಾಡಿ ಕೋಣೆಯೊಳಗೆ ನಡೆದನು. ಅವಳು ನಕ್ಕು, ತನ್ನ ಅತ್ತೆಯನ್ನು ಕರೆದು ಹೇಳಿ ಚೇಷ್ಟೆ ಮಾಡಿದಳು. “ಕಲಿತವರೆಲ್ಲಾ ಹೀಗೇ, ಪುಕ್ಕರು. ಕಪ್ಪೆ ಓಡಿಸಲಿಕ್ಕೂ ಬರುವದಿಲ್ಲ!” ಎಂದು ಅತ್ತೆ ಸೊಸೆಯರಿಬ್ಬರೂ ಕೂಡಿ ಟೀಕಿಸಿದರು. ಉಮೇಶ ಕೇಳಿಯೂ ಕೇಳದವನಂತೆ ಮಲಗಿದ.

ಹೊರಗೆ ಮಲಗಿದ ಆಳನ್ನು ಕರೆದು ಒಂದೇ ನಿಮಿಷದೊಳಗೆ ಓಡಿಸಿ ಬಂದು ಗಂಡನಿಗೆ “ನಿಮ್ಮ ಹತ್ತಿರ ಆಗದಿದ್ದರೇನು? ಸುಬ್ಬ ಒಂದೇ ಪೆಟ್ಟಿಗೆ ಓಡಿಸಿಬಿಟ್ಟ, ಓಹೋ!” ಅಂದಳು ಉಮೆ.

ಉಮೇಶನಿಗೆ ನಿದ್ದೆಯೇ ಹತ್ತಲಿಲ್ಲ. ತಾನು ಹೇಡಿಯೇ? ಎಂದು ತನ್ನನ್ನೇ ಕೇಳಿಕೊಂಡ. ಹೇಡಿಯಾಗಿದ್ದರೆ ದಾರಿದ್ರದ ದಿನಗಳನ್ನು ದಾಟಿ ಊರೂರಲೆದು ಕಲಿಯಲು ಸಮರ್ಥನಾಗುತ್ತಿದ್ದಿಲ್ಲ. ಆದರೆ ಸಾಹಸಕ್ಕೂ ಕಪ್ಪೆಯನ್ನು ಹೊಡೆದೋಡಿಸುವದಕ್ಕೂ ಯಾವ ಸಂಬಂಧ? ಈ ಕೆಲಸದಲ್ಲಿ ಹೇಡಿಯೇ ಆದೆ. ಆಗಲಿ, ಅಡ್ಡಿಯಿಲ್ಲ. ಆದರೆ ಹೆಂಡತಿಯೂ ಚೇಷ್ಟೆ ಮಾಡುವಂತಾಯಿತಲ್ಲ.

ಬದಿಗೆ ಉಮೆಯು ನಿದ್ದೆ ಹೋಗಿದ್ದಳು. ಉಮೇಶನು ಎದ್ದು ಆ ಕಪ್ಪೆಯನ್ನು ಹೊರಗೆ ಹಾಕಿ ಮುಚ್ಚಿದ ಬಾಗಿಲನ್ನೇ ತೆರೆದ. ಬೇಟ್ರಿ ಹಿಡಿದು ನೋಡಿದ. ಅಲ್ಲೇ ಇತ್ತು ಆ ಮುದಿಕಪ್ಪೆ! ಅದು ಉಬ್ಬಸಬಿಡುವದೂ ಅವನಿಗೆ ಕಂಡಿತು. ಅದಕ್ಕೆ ಮಾತಾಡಲು ಬರುತ್ತಿದ್ದರೆ ಎನೆಲ್ಲ ಹೇಳುತ್ತಿತ್ತೋ! ಉಮೇಶ ಎನೇನು ಹೇಳುತ್ತಿದ್ದನೋ! ಒಂದೆರಡು ನಿಮಿಷ ಅವನು ಏನೋ ವಿಚಾರಿಸಿದ. ಮೂರು ನಾಲ್ಕು ಸಲ ಬೇಟ್ರಿಯ ಬೆಳಕು ಬಿಟ್ಟು ನೋಡಿದ. ಕೊನೆಗೆ ಒಂದು ತಂಬಿಗೆ ನೀರು ತಂದು ಅದರ ಬಳಿಗೆ ಸುರಿದು ಬಾಗಿಲ ಹಾಕಿಕೊಂಡು ಬಂದ.

“ಎಲ್ಲಿಗೆ ಹೋಗಿದ್ದಿರಿ?” ಉಮೆಗೆ ಎಚ್ಚರವಾಗಿಬಿಟ್ಟಿತ್ತು!

“ನಿತ್ಯದಂತೆ ಹೊರಗೆ ಹೋಗಿದ್ದೆ” ಎಂದು ಮಲಗಿದ. ಅವನಿಗೆ ಹಿಂದಿನ ದಾರಿದ್ರ್ಯವೆಲ್ಲ ನೆನಪಾಗಿ ಕನಸಿನಲ್ಲಿಯೂ ತೋರಿಸಿಕೊಂಡವು. ಹೀಗೆ ಸ್ಮೃತಿ ಪಟಲವನ್ನು ತಟ್ಟಿದವರು ಯಾರು? ಮುದಿಕಪ್ಪೆಯೋ ಮಡದಿಯೋ ಎಂಬುದು ಮಾತ್ರ ಅವನಿಗೆ ತಿಳಿಯಲಿಲ್ಲ.
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...