Home / ಕವನ / ಕವಿತೆ / ‘ಶಾರ್ ಕಣಿವೆ’ಯಲ್ಲಿ

‘ಶಾರ್ ಕಣಿವೆ’ಯಲ್ಲಿ

ಇಕ್ಕಟ್ಟು ‘ಶಾರ್ ಕಣಿವೆ’ ಮಾರ್ಗ
ಧೂಳು ತುಂಬಿದ ಭಯಾನಕ ಪೊದೆಗಳು
ಕಣಿವೆ ಎದೆಗೆ ತಬ್ಬಿದ್ದ
ಮುಳ್ಳು ಗೋರಂಟಿಗಳ
ಹಳದಿ ಹೂವುಗಳ ತುಂಬ
ಜೇಡರ ಬಲೆಗಳು
ಹಾರಾಡುತ್ತಿವೆ ಹುಳು ಹುಪ್ಪಡಿಗಳು
ಚಿರ್ ಚಿರ್ ಚಿಪ್ ಚಿಪ್‌ಗೂಡುತ್ತ
ಕಂದಕದಾಳಕ್ಕೆ ಬೈನಾಕ್ಯುಲರ್ ಸ್ಪರ್ಶಿಸದೆ
ಪಕ್ಷಿಗಳ ಕೀಟಗಳ
ಒಂದಕ್ಕೊಂದರ ಬೇಟೆಯಾಟ
ಕಪ್ಪು ಪತಂಗಗಳ, ರಣಹದ್ದುಗಳ
ಕಿಚ್ ಕಿಚ್ ಶಬ್ದ
ಹರಿದಾಡುವ ಪೆಟ್ರೋ ವಾಹನಗಳಲ್ಲಿ
ಹೆಪ್ಪುಗಟ್ಟಿವೆ ಪುರಾತನ
ಅರೇಬಿಯ ವ್ಯಾಪಾರಿ ಮಾರ್ಗಗಳು
ಆದರೂ ಕಾಣುತ್ತೇನೆ ಅಲ್ಲಲ್ಲಿ
ಕಾಲ್ನಡಿಗೆಯಿಂದಲೇ
ಹಾದಿಕೊಂದ ಜನರನ್ನು
ಸೊಂಟಕ್ಕೆ ಬಿಗಿದ ಖಡ್ಗಗಳನ್ನು
ತಲೆಗೆ ಸುತ್ತಿದ ‘ಘೋತ್ರಾ’ ಗಳನ್ನು
ನನ್ನದು ನಿನ್ನದು ಎಂದು
ಕಾದಾಡಿದ ಜನರನ್ನು
ಕೊಳ್ಳೆ ಹೊಡೆದ ಕೊಲೆಗಡುಕರನ್ನು
ಕೊಳ್ಳಕ್ಕೆ ಹರಿದ ನೆತ್ತರನ್ನು
ಮರುಭೂಮಿಯಲ್ಲಿ ಹೂತು ಹೋದ
ಎಲುಬುಗಳನ್ನು, ಅವುಗಳೆದೆಯ ಮೇಲೆ
ಬೆಳೆದ ಪೊದೆಗಳನ್ನು.
ಇಂದು ಒಂಟೆಗಳು
ಸ್ವತಂತ್ರತೆಯ ಖುಷಿಯಲ್ಲಿ
ಧ್ವನಿ ಕಳೆದುಕೊಂಡಿವೆ.
ಬುರ್ಕಾದ ಕಾಲು ತೊಡೆತಕ್ಕೆ ಬಿದ್ದೇಳುವ
ಕುರಿ ಕಾಯುವ ತುಂಟು ಹುಡುಗಿಯರು
ಕೆಂಡ ಸಂಪಿಗೆಯಂತೆ
ತುಂಬು ಗುಲಾಬಿಗಳಂತೆ
ಅರಳುತ್ತಿದ್ದಾರೆ, ಅಷ್ಟೇ
ಕನಸು ಕಾಣದ ಕೋಮಲೆಯರು
ಸುಡುತ್ತಲೂ ಇದ್ದಾರೆ.
ಈಗ ಎಲ್ಲವೂ ನಿಶ್ಶಬ್ದ
ಶತ ಶತಮಾನಗಳ
ಪರಿಪೂರ್ಣತೆಗೆ ಕೃತಜ್ಞತೆಗಳು ಎಂದು
ಸೂರ್ಯ ತೆಪ್ಪಗಾಗುತ್ತಿದ್ದಾನೆ.
ಹೊಸ ಶತಮಾನದ ಉಬ್ಬರಕ್ಕೆ
ಸ್ವಾಗತದ ಹೆಜ್ಜೆಗಳು
ಪುಟಿ ಪುಟಿದು ಓಡಾಡುತ್ತಿವೆ.

(ಅರೇಬಿಯದ ದಕ್ಷಿಣ ಭಾಗದಲ್ಲಿ ಆಳವಾದ ‘ಶಾರ್ ಕಣಿವೆ’ ಮಾರ್ಗಗಳಲ್ಲಿ ಪ್ರವಾಸ ಕೈಗೊಂಡಾಗ ನೋಡಿದ ದೃಶ್ಯ)
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...