Home / ಕಥೆ / ಕಿರು ಕಥೆ / ಮೀನದ ಪರಿಮಳ

ಮೀನದ ಪರಿಮಳ

(ಕೇಳಿದ ಕತೆ)

ಮೀನ ಮಾರಿ ಮರುಳುವಾಗ ಕತ್ತಲಾಯಿತು. ಪರಿಚಿತರಾದ ಯೆಂಕಟ ಆಚಾರ್ರ ಮನೆಯ ಅಂಗಳದಲ್ಲೇ ‘ಹಮ್ಕೊಂಡು’ ‘ಹೊತ್ತಾರೆ’ ಹೋದರಾಯಿತೆಂದು ಅವರು ನಿಶ್ಚಯಿಸಿದರು.

ಆಚಾರಿಯ ಮನೆಯಲ್ಲಿ ಅಂದು ಸತ್ಯನಾರಾಯಣವಾಗಿತ್ತು. ಬಾಗಿಲಿಗೆ ಬಂದ ಅಂಬಿಗಿತಿಯರಿಗೆ ಅಂಗಳದ ತುದಿಗೆ ಮಲಗಲು ಜಾಗ ಕೊಡದಷ್ಟು ಕೆಟ್ಟವನಲ್ಲ ಆಚಾರಿ. “ಓಹೋ ಆಚಾರ್ರ ಮನೇಲಿಯೇನೋ ಇಶೇಷ ಅಂತ್ಕಾಣ್ತೀದು!” ಎಂದು ಅಂಬಿಗಿತಿಯರು ಹೇಳಿದ ಮೇಲೆ ಅವರಿಗೆ ಒಂದು ಚೂರು ಅದು ಇದು ಕೊಡದೆ ಇರಲೂ ಅವನಿಂದಾಗಲಿಲ್ಲ.

ದಣಿದುಬಂದ ಅಂಬಿಗಿತಿಯರು ಅಂಗಳದ ತುದಿಗೆ ಗೊರೆಯಹತ್ತಿದರು. ಸತ್ಯನಾರಾಯಣವಾದ್ದರಿಂದ ಹೂವು ಕಪ್ಪುರ ಊದುಬತ್ತಿಗಳ ನರುಗಂಪು ಆಚಾರಿಯ ಮನೆಯೊಳಗೂ ಆ ವಠಾರದಲ್ಲೂ ತುಂಬಿಕೊಂಡಿತ್ತು.

“ಯೇನೇ ಅಕ್ಕಾ, ವರ್ಕ ಬರ್ಲಿಲ್ವನೇ?”

“ನಿನ್ಗೂ ಬರ್ಲಿಲ್ವೊ ನೋಡ್ತೆ”

“ಇಲ್ವೆ, ಯೇನೋ ಒಂದ್ ನಮೂನಿ ನಾತ ಬತ್ತಿದು.”

“ನನ್ಗೂ ಅದೇ ನೋಡು.”

“ಯೇನ್ಮಾಡ್ವ? ನನ್ಗೆ ಇಲ್ಲಿ ವರ್ಕ ಬರ್ವಾಂಗೇ ಇಲ್ಲ”

“ನನ್ಗೂ ಹಾಗೇ, ತೋಟಕ್‌ ಹೋಗಿ ಹಂಮ್ಕಂಬನೆ?”

ಆ ಕಂಪಿನಿಂದ ನಿದ್ದೆ ಉಡುಗಿ ಹೋಗಲು ಇಬ್ಬರೂ ವಿಚಾರಿಸಹತ್ತಿದರು. “ಬೇಡ್ವೆ. ಇಲ್ಲೇ ನಂ ಬುಟ್ಟಿ ತಂದಿಟ್ಕಂಬ” ಎಂಬ ನಿರ್ಣಯಕ್ಕೆ ಬಂದರು.

ಆಚಾರಿಯ ಮನೆಯೆದುರು ಕಂಪು ಬೀರಲು ತರಬಾರದೆಂದು ತೋಟದಲ್ಲಿಯೇ ಬಿಟ್ಟು ಬಂದ ಮೀನಿನ (ಖಾಲಿಯಾದ) ಬುಟ್ಟಿಗಳನ್ನು ತಲೆಬದಿಗೆ ಇಟ್ಟುಕೊಂಡರು.

ಮೀನು ಇರದಿದ್ದರೂ ಬುಟ್ಟಿಗೆ ಪರಿಮಳ ಇದ್ದೇ ಇತ್ತು, ಇದರಿಂದ ಊದಬತ್ತಿ, ಕಪ್ಪುರ, ಹೂಗಳ ‘ನಾತ’ ಓಡಿಹೋಯಿತು.

ಅಂಬಿಗಿತಿಯರಿಗೆ ತಮ್ಮ ಗುಡಿಸಲಿನಲ್ಲೇ ಮಲಗಿದಷ್ಟು ಸುಖವಾಗಿ ನಿದ್ದೆ ಹತ್ತಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...