Home / ಬಾಲ ಚಿಲುಮೆ / ಕಥೆ / ಮಹಾ ಚತುರಕನ ಕಥೆ

ಮಹಾ ಚತುರಕನ ಕಥೆ

ಒಂದಾನೊಂದು ಕಾಡಿನಲ್ಲಿ ಮಹಾಚತುರಕನೆಂಬ ನರಿಯು ಇತ್ತು. ಒ೦ದು ದಿನ ಅದಕ್ಕೆ ತಾನಾಗಿ ಸತ್ತ ಆನೆಯ ಹೆಣವೊಂದು ಸಿಕ್ಕಿತು. ಅದು ಆ ಹೆಣದ ಸುತ್ತಲೂ ತಿರುಗಿ ನೋಡಿತು. ಆನೆಯ ಚರ್ಮವನ್ನು ಕತ್ತರಿಸುವುದಕ್ಕೆ ಅದರ ಕೈಯಲ್ಲಾಗದು. ಆದರೂ ಅದನ್ನು ತಿನ್ನಬೇಕೆಂಬ ಆಸೆ ಬಿಡಲೊಲ್ಲದು.
ಹೀಗೆ ಅದು ಅಲ್ಲಿಯೇ ಒದ್ದಾಡುತ್ತಿರುವಾಗ ಸಿಂಹವೊಂದು ಅತ್ತಕಡೆ ಬಂತು. ಆ ಮೃಗರಾಜನನ್ನು ಕಂಡು ನೆಲದ ಮಲಗಿ ನಮಸ್ಕರಿಸಿ, ಎದ್ದು ಕೈ ಮುಗಿದು ವಿನಯದಿಂದ ಹೇಳಿತು: “ಒಡೆಯ, ತಮ್ಮ ಪಾದದ ಸೇವಕನು ನಾನು” ತಾವು ಬಂದೀರಿ ಎಂದು ಈ ಆನೆಯನ್ನು ರಕ್ಷಿಸಿಕೊಂಡಿದ್ದೆನು. ಇದನ್ನು ದೇವರು ಒಪ್ಪಿಸಿಕೊಳ್ಳಬೇಕು” ಎಂದು ಮತ್ತೆ ಕೈ ಮುಗಿಯಿತು. ಹಾಗೆ ವಿನಯದಿಂದ ಹೇಳಿದ ನರಿಯನ್ನು ನೋಡಿ “ಎಲಾ, ನಾನು ಇನ್ನೊಬ್ಬರು ಹೊಡೆದ ಬೇಟೆಯನ್ನು ಯಾವಾಗಲೂ ತಿನ್ನುವವನಲ್ಲ. ಕೇಳಿಲ್ಲವೇ?
ಸಿಂಹವು ಮಾಂಸವ ತಿನ್ನುವ ಜಂತು ॥ 
ಹಸಿದರು ಹುಲ್ಲನು ತಿನ್ನುವುದಿಲ್ಲ ॥ 
ಒಳ್ಳೆಯಕುಲದವಗಾಪದ ಬಂದರು | 
ನೀತಿಯ ಮಾರ್ಗವ ಬಿಡುವುದೆ ಇಲ್ಲ ॥ ೨೯ ॥
ಅದರಿಂದ ಈ ಆನೆಯನ್ನು “ನೀನೇ ಪ್ರಸಾದವಾಗಿ ತೆಗೆದುಕೋ” ಎಂದ್ದು ಹೇಳಿತು. ನರಿಯು “ಒಡೆಯನು ಸೇವಕರಲ್ಲಿ ಯಾವಾಗಲೂ ಹೀಗೆಯೇ! ದೊಡ್ಡವರು ಎಂದಿಗೂ ತಮ್ಮ ದೊಡ್ಡ ಗುಣಗಳನ್ನು ಬಿಡುವುದಿಲ್ಲ. ಶಂಖವನ್ನು ಬೆಂಕಿಗೆ ಹಾಕಿ ಸುಟ್ಟರೆ ತಾನೇ ಕಪ್ಪಾದೀತೇ” ಎಂದು ಹೊಗಳಿತು. ಸಿಂಹವು ಪ್ರಸನ್ನವಾಗಿ ಹೊರಟು ಹೋಯಿತು.
ಅದು ಅತ್ತ ಹೋದಮೇಲೆ ಹುಲಿಯು ಬಂತು. ಆದನ್ನು ಕಂಡು ನರಿಯು ಯೋಚಿಸಿತು: “ಭಾರಿಯ ಭೂತವೊಂದನ್ನು ನಮಸ್ಕಾರ ಮಾಡಿ ಕಳುಹಿಸಿಯಾಯಿತು. ಅದು ಹೋಯಿತು  ಎನ್ನುವುದರೊಳಗಾಗಿ ಇನ್ನೊಂದು ಬಂತಲ್ಲಾ! ಇದನ್ನು ತಪ್ಪಿಸುವುದೆಂತು? ಇದು ಶೂರನು. ಇದರಲ್ಲಿ ಭೇದೋಪಾಯ ಬಿಟ್ಟರೆ ಇನ್ನು ಯಾವುದೂ ಸಿದ್ಧಿಸುವುದಿಲ್ಲ. ಎಂತಹ ಸರ್ವಗುಣಸಂಪನ್ನನಾದರೂ ಭೇದಕ್ಕೆ ಸಿಕ್ಕಿಹೋಗುವನು. ಗುಂಡು ಗುಂಡಗೆ ಕಲ್ಲಿನ ಹಾಗೆ ಗಟ್ಟಿಯಾಗಿರುವ ಮುತ್ತನ್ನು ಕೂಡಾ ಕೊರೆದು ಮಾಲೆ ಮಾಡುವುದಿಲ್ಲವೆ? ಇರಲಿ,” ಎಂದುಕೊಂಡು ಗರ್ವದಿಂದ ತಲಯೆತ್ತಿಕೊಂಡು ನಿಂತು – “ಏನು ಮಾವ, ಬೇಕೆಂದು ಸಾವನ್ನು ಹುಡುಕಿ ಕೊಂಡು ಬಂದೆಯಾ? ಈ ಆನೆಯನ್ನು ಹೊಡೆದುರುಳಿಸಿ ಸಿಂಹವು ಮಿಂದು ಬರುವೆನೆಂದು ನದಿಗೆ ಹೋಗಿದೆ. ಹೋಗುವಾಗ ನನ್ನನ್ನು ಕರೆದು, “ಹುಲಿಯೇನಾದರೂ ಬಂದರೆ ನನಗೆ ಗುಟ್ಟಾಗಿ ಬಂದು ಹೇಳು. ಹಿಂದೆ ನಾನು ಹೊಡೆದ ಆನೆಯನ್ನು ಒಂದು ಹುಲಿ ತಿಂದು ಬಿಟ್ಟಿತು. ಅಂದಿನಿಂದ ನನಗೆ ಹುಲಿಗಳ ಮೇಲೆ ವೈರ ಬಂದಿದೆ. ಈ ವನದಲ್ಲಿರುವ ಹುಲಿಗಳನ್ನೆಲ್ಲ ಧ್ವಂಸ ಮಾಡಬೇಕು ಎಂದಿದ್ದಾನೆ. ಈ ಕಾಡಿನಲ್ಲಿ ಹುಲಿಗಳೇ ಇರಕೂಡದು ಎಂದು ಹೇಳಿ ಹೋಗಿದೆ:” ಎಂದಿತು. ಹುಲಿಗೆ ಹೆದರಿಕೆಯಾಗಿ, “ತಮ್ಮ, ನನ್ನನ್ನು ಉಳಿಸು, ನಾನು ಬಂದಿದ್ದೆನೆಂದೂ ಸಿಂಹಕ್ಕೆ ಹೇಳಬೇಡ.” ಎಂದು ಕಾಲಿಗೆ ಬುದ್ಧಿ ಹೇಳಿತು.
ಅದು ಹೋದಮೇಲೆ ಒಂದು ಚಿರತೆ ಬಂತು. “ಪಟ್ಟೆಯವನು ಹೋದ ಚುಕ್ಕಿಯವನು ಬಂದ. ಇದಕ್ಕೂ ಹಲ್ಲು ಗಟ್ಟಿ. ಇದರಿಂದ ಈ ಆನೆಯ ಚರ್ಮ ಕತ್ತರಿಸಬೇಕು. ಇದಕ್ಕೊಂದು ಉಪಾಯ ಮಾಡುವೆನು” ಎಂದು ಅದರ ಹತ್ತಿರ ಹೋಗಿ ಹೇಳಿತು: “ಭಾವ, ನಿನ್ನನ್ನು ನೋಡಿ ಬಹಳ ದಿನವಾಯಿತು. ಏಕೆ ಮುಖ ಒಣಗಿಸಿಕೊಂಡಿದ್ದೀಯೆ? ಹಸಿದಿದ್ದೀಯೇನು? ಹಾಗಾದರೆ ಬಾ, ನನ್ನ ಅತಿಥಿಯಾಗಿರು. ಈ ಆನೆಯನ್ನು ಸಿಂಹವು ಕೆಡವಿದೆ. ನಾನೇ ಇದಕ್ಕೆ ಕಾವಲು. ‘ಸಿಂಹವು ಬರುವುದರೊಳಗಾಗಿ ನೀನು ತೃಪ್ತಿಯಾಗಿ ತಿಂದು ಹೋಗು?’ ಎಂದಿತು. ಅದು “ಭಾವ, ಈ ಸಿಂಹದ ಊಟವು ನನಗೆ ಬೇಡ. “ಬದುಕಿದ್ದರೆ ಭದ್ರ ಬರದೇ ಹೋದೀತೆ?” ಕೇಳಿಲ್ಲವೆ?
ನುಂಗುವಷ್ಟು ಕಚ್ಚಿಕೋ | ಅರಗುವಷ್ಟು ತಿಂದುಕೋ | 
ಬದುಕಬೇಕು ಎಂದರೆ | ಕೊನೆಗೆ ಅಹುದ ನೋಡಿಕೋ ॥ ೩೦ ॥ 
ಅದರಿಂದ, ನಾನು ಇನ್ನೆಲ್ಲಿಯಾದರೂ ಹೋಗುವೆನು.” ಎ೦ದಿತು.
ನರಿಯು ನಕ್ಕು ಹೇಳಿತು: “ಭಾವ, ನೀನೆಲ್ಲೋ ಹೇಡಿ ಸುಖವಾಗಿ ಊಟಮಾಡು. ನಾನು ದೂರದಲ್ಲಿ ನಿಂತು ನೋಡಿ ಕೂಂಡಿರುತ್ತೇನೆ. ಸಿಂಹವು ಇನ್ನೂ ದೂರದಲ್ಲಿ ಬರುತ್ತಿರುವಾಗಲೇ
ಹೇಳುತ್ತೇನೆ” ಎಂದು ಅದನ್ನು ಒಪ್ಪಿಸಿತು. ಅದು ಆಗಲೆಂದು ಆನೆಯನ್ನು ತಿನ್ನಲು ಮೊದಲು ಮಾಡಿತು. ಅದು ಚರ್ಮವನ್ನು ಕತ್ತರಿಸಿದೆಯೆಂದು ನಂಬಿಕೆಯಾದಮೇಲೆ, ದೂರದಲಿದ್ದ ನರಿಯು ಸಿಳ್ಳುಹಾಕಿ, ಕಣ್ಣುಹಾರಿಸಿ “ಬಂತು ಬಂತು” ಎಂದಿತು. ಅದನ್ನು ಕೇಳಿ ಚಿರತೆಯು ನೆಗೆದು ಹಾರಿ ಓಡಿತು.
ಆ ಮೇಲೆ ನರಿಯು ಬಂದು ಚಿರತೆಯು ಕೊರದಿದ್ದ ತೂತಿನಿಂದ ಮಾಂಸವನ್ನು ಎಳೆದು ತಿನ್ನುತ್ತಿದ್ದಾಗ ಇನ್ನೊಂದು ನರಿಯು ಬಂತು. ಅದನ್ನು ಕಂಡು, “ಸಮಶಕ್ತಿಯಿದು. ಇದನ್ನು ಪರಾಕ್ರಮದಿಂದಲೇ ಗೆಲ್ಲಬೇಕು.” ಎಂದು ನಿಶ್ಚಯಿಸಿಕೊಂಡು ಅದರ ಮೇಲೆ ಯುದ್ಧಕ್ಕೆ
ಹೋಯಿತು: ಅದರ ಮೇಲೆ ಬಿದ್ದು ಕಚ್ಚಿ ಗಾಯಮಾಡಿ ಓಡಿಸಿ ಬಂದು ಆನೆಯನ್ನು ತಿಂದುಕೊಂಡು ಸುಖವಾಗಿತ್ತು.
ನೀನೂ ಅದರಂತೆಯೇ ನಿನ್ನ ಜಾತಿಯವನಾದ ಹಗೆಯನ್ನು ಯುದ್ಧ ಮಾಡಿ ಸೋಲಿಸು. ಇಲ್ಲದಿದ್ದರೆ, ಅದೇ ನಿನ್ನನ್ನು ಹಾಳು ಮಾಡುವುದು, ಕೇಳಿಲ್ಲವೆ ?
ಹಸುವಿನಿಂದ ಹಾಲು ಮೊಸರು| ಜಪವು ತಪವು ಪಾರ್ವನಲ್ಲಿ ॥ 
ಹೆಣ್ಣಿನಲ್ಲಿ ಡಪಲತನವು | ಸ್ವಕುಲದಿಂದ ಭಯವು ತಪ್ಪದು ॥೩೧॥ 
ಮೊಸಳೆಯು:  ಅದು ಹೇಗೆ? ಸ್ವಕುಲದಿಂದ ಭಯವೆನ್ನುವುದು ಹೇಗೆ?” ಎನ್ನಲು, ಕಪಿಯು ಹೇಳತು:-
*****
ಚಿತ್ರಾಂಗನ ಕಥೆ ಓದಿ
Tagged:

Leave a Reply

Your email address will not be published. Required fields are marked *

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...