Home / ಬಾಲ ಚಿಲುಮೆ / ಕಥೆ / ದೇವಶರ್ಮನ ಕಥೆ

ದೇವಶರ್ಮನ ಕಥೆ

ಒಂದಾನೊಂದು ಊರಿನಲ್ಲಿ ದೇವಶರ್ಮನೆಂಬ ಬ್ರಾಹ್ಮಣನಿದ್ದನು. ಅವನು ವೇದ ಶಾಸ್ತ್ರಗಳನ್ನು ಬಲ್ಲವನು.  ದಿನವೂ ವೇದಗಳನ್ನು ಓದುವನು. ಶಾಸ್ತ್ರದಲ್ಲಿ ಹೇಳಿರುವಂತೆ ನಡೆಯುವನು. ಆಹಿತಾಗ್ನಿಯು (ಮನೆಯಲ್ಲಿ ಅಗ್ನಿಯನ್ನು ಇಟ್ಟುಕೊಂಡು ದಿನವೂ ಬೆಳಿಗ್ಗೆ ಸಂಜೆ ತಪ್ಪದೆ ಹೋಮ ಮಾಡುವವರು.) ಆತನಿಗೆ ಪರಮ ಪತಿವ್ರತೆಯಾದ ಯಜ್ಞದತ್ತೆಯೆಂಬ ಹೆಂಡತಿಯಿದ್ದಳು. ಅವಳೊಮ್ಮೆ ಬಸುರಾಗಿ ಒಂದು ಗಂಡು ಮಗುವನ್ನು ಹೆತ್ತಳು. ಅದೇ ದಿನವೇ ಅವರ ಮನೆಯಲ್ಲಿದ್ದ ಮುಂಗುಸಿಯೂ ಒಂದು ಮರಿಯನ್ನು ಹಾಕಿತು. ಆ ಬ್ರಾಹ್ಮಣಿಯು ತನ್ನ ಮಗುವಿನಂತೆ ಆ ಮರಿಯನ್ನು ವಿಶ್ವಾಸದಿಂದ ಸಾಕುತ್ತಿದ್ದಳು:
ಅದೂ ಮಗುವಿನಲ್ಲಿ ಬಲು ಅಕ್ಕರೆಯಿಂದ ಇದ್ದರೂ ಆಕೆಗೆ “ಇದು ಕೆಟ್ಟಜಾತಿ. ಯಾವಾಗಲಾದರೂ ಮಗುವಿಗೆ. ಕೇಡುಮಾಡಿದರೂ ಮಾಡೀತು ಎಂದು ಬಲು ಎಚ್ಚರಿಕೆಯಿಂದ ಇರುತ್ತಿದ್ದಳು.
ಒಂದುದಿನ ಆಕೆಯು ಮಗುವನ್ನು ತೊಟ್ಟಿಲಲ್ಲಿ ಮಲಗಿಸಿ ಗಂಡನನ್ನು ಕೂಗಿ, “ನಾನು ಕೆರೆಗೆ ಹೋಗಿ ನೀರು ತರುವೆನು. ನೀವು ಈ ಮಗುನನ್ನು ನೋಡಿಕೊಳ್ಳಿ, ಮುಂಗುಸಿಯೂ ಇಲ್ಲಿಯೇ  ಇದೆ. ಎಚ್ಚರಿಕೆ.” ಎಂದು ಹೇಳಿ ಒಪ್ಪಿಸಿ ಕೊಡವನ್ನು ತೆಗೆದುಕೊಂಡು ನೀರಿಗೆ ಹೋದಳು. ಆ ವೇಳೆಗೆ ಆ ಊರಿನ ಅರಸು “ದಾನಕ್ಕಾಗಿ ಬರಬೇಕು” ಎಂದು ಆಳುಗಳನ್ನು ಕಳುಹಿಸಿದನು. ಆ ದೇವಶರ್ಮನು ಅರಸನ ಮಾತು ಮೀರಲಾರದೆ ಅಲ್ಲಿಗೆ ಹೋದನು.
ಇತ್ತ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಒಂದು ನಾಗರಹಾವು ತನ್ನ ಬಿಲದಿಂದ ಈಚೆಗೆ ಬಂತು. ಮುಂಗುಸಿಯು ಅದನ್ನು ಕಂಡು ಅದರಮೇಲೆ ಬಿದ್ದು ಕಾದಾಡಿ ಅದನ್ನು ಕೊಂದಿತು.
ಹಾಗೆ ಹಗೆಯನ್ನು ಕೊಂದೆನೆಂಬ ತನ್ನ ಸಂತೋಷವನ್ನು ತಾಯಿಗೆ ಹೇಳಲು ಅದು ಅಕೆಗೆ ಎದುರಾಗಿ ಬಂತು. ಆಕೆಯು ಅದರ ಮುಸುಡಿಯಲ್ಲಿದ್ದ ಮಾಂಸ ರಕ್ತಗಳನ್ನು ನೋಡಿ ಮಗುವನ್ನು ಕೊಂದು ಬಂದಿರುವುದು ಎಂದುಕೊಂಡು, ಆ ಕೋಪ ದುಃಖಗಳಲ್ಲಿ ತಾನು ತಂದಿದ್ದ ನೀರಿನ ಕೊಡವನ್ನು ಅದರ ತಲೆಯ ಮೇಲೆ ಕುಕ್ಕಿದಳು. ಅದು ಅಲ್ಲಿಯೇ ಸತ್ತು ಬಿದ್ದಿತು.
ಬ್ರಾಹ್ಮಣಿಯು ಮನೆಗೆ ಬಂದು ನೋಡಿದಳು. ಮಗುವು ತೊಟ್ಟಿಲಲ್ಲಿ ಸುಖವಾಗಿ ಆಡಿಕೊಂಡಿತ್ತು. ತೊಟ್ಟಿಲಿನ ಮಗ್ಗುಲಲ್ಲಿಯೇ ನಾಗರಹಾವು ತುಂಡಾಗಿ ಬಿದ್ದಿತ್ತು ಆ ವೇಳೆಗೆ ಗಂಡನೂ ಬಂದನು. ಬ್ರಾಹ್ಮಣಿಯು ಬಲವಾಗಿ ಅತ್ತು. “ನಿಮ್ಮನ್ನು ಕಾದಿಕೊಂಡಿರಿ ಎಂದರೆ ನೀವು ಕೇಳಲಿಲ್ಲ. ದಾನದಮೇಲಿನ ಆಸೆಯಿಂದ ನೀವು ಹೊರಟು ಹೋದಿರಿ. ಅದರ ಫಲವಾಗಿ ಇಷ್ಟೂ ಆಯಿತು. ನಾನು ಬರುವವರೆಗೂ ತಡೆಯಬಾರದಾಗಿತ್ತೇ? ಮಗುವಂತಿದ್ದ ಮುಂಗುಸಿಯು ಅನ್ಯಾಯವಾಗಿ ಮೃತ್ಯುವಿನ ಪಾಲಾಯಿತು. ಅಷ್ಟಲ್ಲದೆ ಹೇಳಿದರೇ?
ಲೋಭ ಬಲಿತತಿಯಾಗಬಾರದು | ಲೋಭವನು ಪೂರ್ಣ ಬಿಡಬಾರದು ॥
ಲೋಭವು ಅತಿಯಾಗಲು ಫಲವಾಗಿ | ಆಯಿತು ಚಕ್ರವು ಮಸ್ತಕದಲ್ಲಿ ॥೮॥
ಬ್ರಾಹ್ಮಣನು ಹೇಳಿದನು: – “ಅದು ಹೇಗೆ?” ಎಂದು
ಆಕೆಯು ಹೇಳಿದಳು:-
*****
ಚಕ್ರಧರನ ಕಥೆ ಓದಿ
Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...