Home / ಬಾಲ ಚಿಲುಮೆ / ಕಥೆ / ದೇವಶರ್ಮನ ಕಥೆ

ದೇವಶರ್ಮನ ಕಥೆ

ಒಂದಾನೊಂದು ಊರಿನಲ್ಲಿ ದೇವಶರ್ಮನೆಂಬ ಬ್ರಾಹ್ಮಣನಿದ್ದನು. ಅವನು ವೇದ ಶಾಸ್ತ್ರಗಳನ್ನು ಬಲ್ಲವನು.  ದಿನವೂ ವೇದಗಳನ್ನು ಓದುವನು. ಶಾಸ್ತ್ರದಲ್ಲಿ ಹೇಳಿರುವಂತೆ ನಡೆಯುವನು. ಆಹಿತಾಗ್ನಿಯು (ಮನೆಯಲ್ಲಿ ಅಗ್ನಿಯನ್ನು ಇಟ್ಟುಕೊಂಡು ದಿನವೂ ಬೆಳಿಗ್ಗೆ ಸಂಜೆ ತಪ್ಪದೆ ಹೋಮ ಮಾಡುವವರು.) ಆತನಿಗೆ ಪರಮ ಪತಿವ್ರತೆಯಾದ ಯಜ್ಞದತ್ತೆಯೆಂಬ ಹೆಂಡತಿಯಿದ್ದಳು. ಅವಳೊಮ್ಮೆ ಬಸುರಾಗಿ ಒಂದು ಗಂಡು ಮಗುವನ್ನು ಹೆತ್ತಳು. ಅದೇ ದಿನವೇ ಅವರ ಮನೆಯಲ್ಲಿದ್ದ ಮುಂಗುಸಿಯೂ ಒಂದು ಮರಿಯನ್ನು ಹಾಕಿತು. ಆ ಬ್ರಾಹ್ಮಣಿಯು ತನ್ನ ಮಗುವಿನಂತೆ ಆ ಮರಿಯನ್ನು ವಿಶ್ವಾಸದಿಂದ ಸಾಕುತ್ತಿದ್ದಳು:
ಅದೂ ಮಗುವಿನಲ್ಲಿ ಬಲು ಅಕ್ಕರೆಯಿಂದ ಇದ್ದರೂ ಆಕೆಗೆ “ಇದು ಕೆಟ್ಟಜಾತಿ. ಯಾವಾಗಲಾದರೂ ಮಗುವಿಗೆ. ಕೇಡುಮಾಡಿದರೂ ಮಾಡೀತು ಎಂದು ಬಲು ಎಚ್ಚರಿಕೆಯಿಂದ ಇರುತ್ತಿದ್ದಳು.
ಒಂದುದಿನ ಆಕೆಯು ಮಗುವನ್ನು ತೊಟ್ಟಿಲಲ್ಲಿ ಮಲಗಿಸಿ ಗಂಡನನ್ನು ಕೂಗಿ, “ನಾನು ಕೆರೆಗೆ ಹೋಗಿ ನೀರು ತರುವೆನು. ನೀವು ಈ ಮಗುನನ್ನು ನೋಡಿಕೊಳ್ಳಿ, ಮುಂಗುಸಿಯೂ ಇಲ್ಲಿಯೇ  ಇದೆ. ಎಚ್ಚರಿಕೆ.” ಎಂದು ಹೇಳಿ ಒಪ್ಪಿಸಿ ಕೊಡವನ್ನು ತೆಗೆದುಕೊಂಡು ನೀರಿಗೆ ಹೋದಳು. ಆ ವೇಳೆಗೆ ಆ ಊರಿನ ಅರಸು “ದಾನಕ್ಕಾಗಿ ಬರಬೇಕು” ಎಂದು ಆಳುಗಳನ್ನು ಕಳುಹಿಸಿದನು. ಆ ದೇವಶರ್ಮನು ಅರಸನ ಮಾತು ಮೀರಲಾರದೆ ಅಲ್ಲಿಗೆ ಹೋದನು.
ಇತ್ತ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಒಂದು ನಾಗರಹಾವು ತನ್ನ ಬಿಲದಿಂದ ಈಚೆಗೆ ಬಂತು. ಮುಂಗುಸಿಯು ಅದನ್ನು ಕಂಡು ಅದರಮೇಲೆ ಬಿದ್ದು ಕಾದಾಡಿ ಅದನ್ನು ಕೊಂದಿತು.
ಹಾಗೆ ಹಗೆಯನ್ನು ಕೊಂದೆನೆಂಬ ತನ್ನ ಸಂತೋಷವನ್ನು ತಾಯಿಗೆ ಹೇಳಲು ಅದು ಅಕೆಗೆ ಎದುರಾಗಿ ಬಂತು. ಆಕೆಯು ಅದರ ಮುಸುಡಿಯಲ್ಲಿದ್ದ ಮಾಂಸ ರಕ್ತಗಳನ್ನು ನೋಡಿ ಮಗುವನ್ನು ಕೊಂದು ಬಂದಿರುವುದು ಎಂದುಕೊಂಡು, ಆ ಕೋಪ ದುಃಖಗಳಲ್ಲಿ ತಾನು ತಂದಿದ್ದ ನೀರಿನ ಕೊಡವನ್ನು ಅದರ ತಲೆಯ ಮೇಲೆ ಕುಕ್ಕಿದಳು. ಅದು ಅಲ್ಲಿಯೇ ಸತ್ತು ಬಿದ್ದಿತು.
ಬ್ರಾಹ್ಮಣಿಯು ಮನೆಗೆ ಬಂದು ನೋಡಿದಳು. ಮಗುವು ತೊಟ್ಟಿಲಲ್ಲಿ ಸುಖವಾಗಿ ಆಡಿಕೊಂಡಿತ್ತು. ತೊಟ್ಟಿಲಿನ ಮಗ್ಗುಲಲ್ಲಿಯೇ ನಾಗರಹಾವು ತುಂಡಾಗಿ ಬಿದ್ದಿತ್ತು ಆ ವೇಳೆಗೆ ಗಂಡನೂ ಬಂದನು. ಬ್ರಾಹ್ಮಣಿಯು ಬಲವಾಗಿ ಅತ್ತು. “ನಿಮ್ಮನ್ನು ಕಾದಿಕೊಂಡಿರಿ ಎಂದರೆ ನೀವು ಕೇಳಲಿಲ್ಲ. ದಾನದಮೇಲಿನ ಆಸೆಯಿಂದ ನೀವು ಹೊರಟು ಹೋದಿರಿ. ಅದರ ಫಲವಾಗಿ ಇಷ್ಟೂ ಆಯಿತು. ನಾನು ಬರುವವರೆಗೂ ತಡೆಯಬಾರದಾಗಿತ್ತೇ? ಮಗುವಂತಿದ್ದ ಮುಂಗುಸಿಯು ಅನ್ಯಾಯವಾಗಿ ಮೃತ್ಯುವಿನ ಪಾಲಾಯಿತು. ಅಷ್ಟಲ್ಲದೆ ಹೇಳಿದರೇ?
ಲೋಭ ಬಲಿತತಿಯಾಗಬಾರದು | ಲೋಭವನು ಪೂರ್ಣ ಬಿಡಬಾರದು ॥
ಲೋಭವು ಅತಿಯಾಗಲು ಫಲವಾಗಿ | ಆಯಿತು ಚಕ್ರವು ಮಸ್ತಕದಲ್ಲಿ ॥೮॥
ಬ್ರಾಹ್ಮಣನು ಹೇಳಿದನು: – “ಅದು ಹೇಗೆ?” ಎಂದು
ಆಕೆಯು ಹೇಳಿದಳು:-
*****
ಚಕ್ರಧರನ ಕಥೆ ಓದಿ
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...