Home / ಕವನ / ಕವಿತೆ / ಕಾವ್ಯ ಸ್ರೋತ

ಕಾವ್ಯ ಸ್ರೋತ

ಒಣಗುತಿದೆ ನನ್ನ ಪಂಚೆ,
ಒಣಗುತಿದೆ ನನ್ನ ಪಂಚೆ
ಎಲ್ಲಿ ತೊಯ್ಯಿಸಲಿ ಈ ಪಂಚೆ,
ಎಲ್ಲಿ ಒದ್ದಿ ಮಾಡಲಿ ಈ ಪಂಚೆ
ಜಗದೊಳಗಿನ ಹಳ್ಳ ಕೊಳ್ಳ ನದಿ ಸಮುದ್ರಗಳು ಬತ್ತಿಹವು
ನಿಮ್ಮ ಕಣ್ಣೀರಲಿ ನನ್ನ ಪಂಚೆ ತೊಯಿಸಲೆ
ನಿಮ್ಮ ಕಣ್ಣೀರೂ ಬತ್ತಿಹುದು
ಸಮೀಪಿಸುತಿದೆ ನನ್ನ ಜೀವನದ ಸಂಜೆ
ಒಣಗುತಿದೆ ನನ್ನ ಪಂಚೆ

ಒಣಗಿದ ಪಂಚೆಯುಟ್ಟು
ಒಣಗಿದ ಕವಿತೆಗಳ ಬರೆಯುತಿರುವೆ
ಗೀಚುತಿರುವೆ,
ಗೀಚಿ ಬರೆಯುತಿರುವೆ
ಕವಿತೆಯಾಗಬಹುದೆಂಬಾಸೆಯಿಂದ
ಎಲ್ಲವೂ ಒಣಗಿವೆ, ಸಂಸಾರದ ತಾಪದ ಬಿಸಿಯಿಂದ
ನಿಮ್ಮ ಉದಾಸೀನತೆಯ
ನಿಟ್ಟುಸಿರಿನ ಕಾವಿನಿಂದ
ಇದು ಎಂಥ ಬರ, ಒಣಗಿವೆ ಎಲ್ಲಾ

ದೇವರೇ ಮಳೆಯಾಗಲಿ
ಮರ ಗಿಡ ಬಳ್ಳಿಗಳು
ಬಯಲೋ ಬಯಲು
ಹುಯಿಲೋ ಹುಯಿಲು

ಇದನು ವರ್‍ಣಿಸಿ ಕವಿ ಅನ್ನಿಸಿಕೊಳ್ಳಲು ನಾಚಿಕೆಯಾಗುತಿದೆ
ಯಾರಿಗಿಹುದು ನನ್ನ ಒಣಗಿದ ಪಂಚೆಯ ಚಿಂತೆ
ಎಲ್ಲರಿಗೂ ಅವರವರ ದಿನದ ಗಂಜಿಯ ಚಿಂತೆ
ದೇವರೇ, ಮಳೆಯಾಗಲಿ ಬೆಳೆಯಾಗಲಿ, ಎಲ್ಲ ಹಸಿರಾಗಲಿ
ಜಗದ ನೋಟ ಕಣ್ಣಿಗೊಂದು ಹಬ್ಬವಾಗಲಿ,
ನೋಡಿ ವರ್‍ಣಿಸಿದುದು ಕಬ್ಬವಾಗಲಿ!
ಆದರೆಂದು ತೀರುವದೊ ಈ ಬರ,
ಎಂದು ಚಿಗುರುವದೊ ನಾ ನೆಟ್ಟ ಮರ…

ಮಳೆಯಾದಾಗ ತೊಯ್ಯಿಸಲು ಈ ಪಂಚೆ
ನಾನೇ ಇರದಿರಬಹುದು
ಬಾಳ ಸಂಜೆಯ ದಾಟಿ ದೂರ ಸಾಗಿರಬಹುದು
ಆದರೂ ಪ್ರಾರ್‍ಥಿಸುವೆ ಮಳೆಯಾಗಲೆಂದು

ನಾನಿದ್ದರೂ ಇರದಿದ್ದರೂ ನಾ
ಬಿಟ್ಟು ಹೋಗುವೆ ನಾನುಟ್ಟ ಪಂಚೆ
ನಾನುಟ್ಟ ಪಂಚೆಯೆಂದು ಅಲಕ್ಷಿಸದಿರಿ,
ಇದು ಕುಮಾರವ್ಯಾಸನುಟ್ಟ ಪಂಚೆ-
ಅವನು ನನಗೆ ಕೊಟ್ಟ ಪಂಚೆ;
‘ಹಲಗೆ ಬಳಪವ ಹಿಡಿಯದೊಂದಗ್ಗಳಿಕೆಯ ಪಂಚೆ’
ಉಟ್ಟು ನೋಡಿರಿ ಮಳೆಯಾದಾಗ –
ನಾ ಹೋಗುವೆ, ಮತ್ತೆ ಬರುವೆ
ಮಳೆ ನೀರಿನ ಹನಿಗಳಾಗಿ ಬೀಳುವೆ –
ಬಿದ್ದು ನಿಮ್ಮ ಬರವ ತೀರಿಸುವೆ
ನಾ ನೆಟ್ಟ ಮರದ ಹೂವಾಗುವೆ.
ಆದರೆ ಆ ಹೂವ ಬಣ್ಣಿಸಲು ಮರೆಯದಿರಿ
ನಿಮ್ಮ ವರ್‍ಣನೆಯಲಿ ನಾನೊಂದು ಕವನವಾಗುವೆ
ಕವಿಯಾಗದಿದ್ದರೂ ಚಿಂತೆಯಿಲ್ಲ
ನೀವು ಬರೆದ ಕವನವಾದರೂ ಆಗುವೆ
*****

ಕನ್ನಡದ ದಿಗ್ಗಜ ಕವಿ ಕುಮಾರವ್ಯಾಸ ಮಹಾಭಾರತವನ್ನು ರಚಿಸುವ ಮುನ್ನ ಕೆರೆಯಲ್ಲಿ ಮಿಂದು, ಹಾಗೆಯೇ ಒದ್ದೆ ಪಂಚೆಯನ್ನು ಉಟ್ಟು ಪಂಚೆ ಆರಿಹೋಗುವ ತನಕ ಗದಗಿನ ವೀರನಾರಾಯಣ ಗುಡಿಯಲ್ಲಿ ಕುಳಿತುಕೊಂಡು ರಚಿಸುತ್ತಿದ್ದನೆಂದು ಪ್ರತೀತಿ. ಇದನ್ನೇ ಕಾವ್ಯ ಸ್ರೋತದ ಸ್ಫೂರ್‍ತಿಯ ಸಂಕೇತವನ್ನಾಗಿಟ್ಟುಕೊಂಡು ರಚಿಸಿದ ಕವನ.

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...