Home / ಕವನ / ಕವಿತೆ / ಯಾರಿವಳೀ ದೀಪಿಕಾ?

ಯಾರಿವಳೀ ದೀಪಿಕಾ?

ಯಾರಿವಳೀ ದೀಪಿಕಾ?
ಕವಿಕನಸಿಗೆ ಕಣ್ಣು ಬಂತೊ ಉಸಿರಾಡಿತೊ ರೂಪಕ!
ಬಿಸಿಯೂಡಿಸಿ ಹಸಿರಾಡಿಸಿ
ಕನವರಿಕೆಯ ನಾಡಿಗೆ
ಹಳಿಯನೆಳೆದ ಹದಿನಾರರ ಬಿರಿವ ಹೂವ ಮಾಲಿಕಾ

ಕನಕಾಂಬರ ಬೆಳಕ ಹೊದ್ದ ಮುಗಿವ ಹಗಲ ತುದಿಗೆ
ಮೊಲ್ಲೆ ಮಾಲೆಯಾಗಿ ತೂಗಿ ನೀಲನಭದ ಜಡಗೆ
ಚಿತ್ರವಾಗಿ ಅರಳಿ
ವಿಚಿತ್ರವಾಗಿ ಹೊರಳಿ
ಬರೆದು ಅಳಿಸಿ ಬರೆದು ಸರಿವ ಬೆಳ್ಳಕ್ಕಿಯ ಗೆರೆಯೆ,
ಸಿಕ್ಕಿದ೦ತೆ ಸಿಕ್ಕದಂತೆ
ಹರಿವ ಜಿ೦ಕೆಮರಿಯೆ,
ಯಾರೇ ನೀ ದೀಪಿಕಾ?
ಒಳಗೆ ಬರುವೆ ತೆಗೆಯೇ ನಿನ್ನೆದೆ ಬಾಗಿಲ ಚಿಲಕ

ಕಣ್ಣಪಟ್ಟಿ ಕಟ್ಟಿ ನಡೆದ ಬಿನ್ನಾಣದ ಚೆಲುವೆ
ಬೇರೇನೂ ಕಾಣದೀಗ ಬರಿಯ ನಿನ್ನ ನಿಲುವೆ!
ನೋಟಕಷ್ಟೆ ಸಿಕ್ಕು
ಉಳಿದುದಕ್ಕೆ ಮಿಕ್ಕು
ಕೆರೆಯ ನಡುವೆ ನಿಂತು ಅರಳಿ ನಗುವ ಕೆಂಪು ಕಮಲೇ
ಉರಿಯ ನೂರು ಬುಗ್ಗೆ ಹಿರಿಯುತಿರುವ ಚಿಗುರು ಹಿಗ್ಗೇ
ಧಗೆಯೆ ನಗುವ ದೀಪಿಕಾ
ಬಗೆವೆ ಕಣೇ ನವನಿಧಿಗಳ ಚೆಲುವೆ ನಿನ್ನ ಮೂಲಕ!

ನೀ ಹಚ್ಚಿದ ಪಂಚಾಗ್ನಿಯ ವೃತ್ತದಲ್ಲಿ ಉರಿದೆ
ಕಬ್ಬಿನಾಲೆಯಲ್ಲಿ ಸಿಕ್ಕ ಜಲ್ಲೆಯಂತೆ ನುರಿದೆ.
ದಳ ದಳ ದಳ ತೆರೆದು ನೀನು ಪರಿಮಳಗಳ ಸುರಿಯೆ
ಸೊಕ್ಕಿನ ಗಡಿಯೊಡೆದು ಒಳಗೆ ಮೆತ್ತಗಾಗಿ ಬಿರಿದೆ
ನೋವೇ ಹೂವಾಗಿದೆ ಇದೊ ಒಪ್ಪಿಕೊಳ್ಳೆ ದೀಪಿಕಾ
ಕೆಂಡಸಂಪಿಗೆಯನೆ ಕಟ್ಟಿತಂದ ಭಾವಮಾಲಿಕಾ!
ದೀಪಿಕಾ ದೀಪಿಕಾ
ಕವಿಕನಸಿಗೆ ಕಣ್ಣು ಬ೦ದು ಉಸಿರಾಡುವ ರೂಪಕ!
*****

ಪುಸ್ತಕ: ನಿನಗಾಗೇ ಈ ಹಾಡುಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...