ಯಾವ ಗಳಿಗೆಯಲ್ಲಿ ಒಳಗೆ ಹೇಗೆ ಬಂದೆ?

ಯಾವ ಗಳಿಗೆಯಲ್ಲಿ ಒಳಗೆ ಹೇಗೆ ಬಂದೆ ಚೆಲುವೆ
ಯಾವ ಮಾಯೆ ನುಡಿಸಿ ತೆಗೆದೆ ಎದೆಬಾಗಿಲ ಒಲವೆ?

ತಂಗಳಾದ ಬಾಳಿನಲ್ಲಿ ತಿಂಗಳೊಂದು ಮೂಡಿತು
ಹಂಗಿನಲ್ಲಿ ನಮೆದ ಜೀವಕೊಂದು ಬೆಳಕ ಹಾಡಿತು
ದಿನದ ದುಃಖ ದುಡಿತ
ಇದ್ದಂತೇ ಇರುತ
ಹೊಸದಾಯಿತೆ ಇಡಿಯ ಲೊಕ ನೀ ಹಜ್ಜೆಯನಿಡುತ!

ಬೀಗಿ ನಿಂತ ಹೂವಿನೆದೆಯ ತಾಗಿ ಗಾಳಿ ಬೆರಳು
ಸಾಗಿ ಬಂತು ಕಂಪಿನ ಹೊಳೆ ಜೀವವಾಯ್ತು ಮರುಳು
ಸೊಕ್ಕಿ ಪ್ರಾಣ ತುಟಿಯಲಿ
ಉಕ್ಕಿತಲ್ಲೆ ಭಾವ
ಹಕ್ಕಿಯಾಗಿ ಆಗಸದಲಿ ತೇಲಿತಲ್ಲೆ ಜೀವ!

ಕಾಮವಿರದೆ ಜೀವಕೆ? ಅದೇ ಮೂಲ ಪ್ರೇಮಕೆ
ನೇಮವಿಲ್ಲ ಕನವರಿಕೆಯ ಭಾವಾಗ್ನಿಯ ಹೋಮಕೆ
ತೀರದಲ್ಲೆ ಉಳಿದು
ಕೂಗಿ ಕೂಗಿ ಕರೆದು
ಜೀವದ ಚೀರಾಟವೇ ಹಾಡಾಯಿತು ಒಲಿದು
*****

ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರ್ವಕಾಲ
Next post ನಗೆ ಡಂಗುರ – ೭೫

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…