Home / ಲೇಖನ / ಇತರೆ / ಯಾರು ಹಿತವರು?

ಯಾರು ಹಿತವರು?

ನಾವು ಸಮಾಜದಲ್ಲಿ ಎರಡು ರೀತಿಯ ಜನರನ್ನು ಕಾಣುತ್ತೇವೆ. ಕಾಲದ ಜೊತೆಗೆ ಅದರ ಸರಿಸಮನಾಗಿ, ಕೆಲವೊಮ್ಮೆ ಕಾಲನಿಗಿಂತಾ ಮುಂದೂ ನಡೆಯುತ್ತಾ ಕಾಲನ ಎಲ್ಲಾ ಬದಲಾವಣೆಗಳಿಗೆ ಒಗ್ಗಿಕೊಂಡು ವೇಗವಾಗಿ ಸಾಗುವ ಚುರುಕಿನವರು ಒಂದು ಗುಂಪಿನವರಾದರೆ, ಯಾವುದು ಏನೇ ಆಗಲಿ ತಟಸ್ಥವಾಗಿ, ಕಾಲನೊಂದಿಗೆ ಬದಲಾವಣೆಗೆ ಸ್ಪಂದಿಸದೆ, ತನಗೆ ಬೇಕಾದ್ದನ್ನು ಮಾತ್ರ ಬದಲಿಸಿಕೊಂಡು, ಒಂದು ರೀತಿಯಲ್ಲಿ ಕಾಲನ ಗತಿಗಿಂತಾ ತುಂಬಾ ಹಿಂದೆಯೇ ಉಳಿದುಬಿಡುವ ಸೋಮಾರಿಗಳು ಇನ್ನೊಂದು ಗುಂಪಿನವರು. ಇವರಿಬ್ಬರಲ್ಲಿ ನಿಜವಾಗಿಯೂ ನಮಗೆ ಉಪಯುಕ್ತರು ಯಾರು? ಅನುಪಯುಕ್ತರು ಯಾರು? ಒಂದು ರೀತಿಯಲ್ಲಿ ಇಬ್ಬರೂ ಅನುಪಯುಕ್ತರು! ಇನ್ನೊಂದು ರೀತಿಯಲ್ಲಿ ಇಬ್ಬರೂ ಉಪಯುಕ್ತರು. ಸೋಮಾರಿಯೂ ಸಮಾಜಕ್ಕೆ ಹೇಗೆ ಉಪಯುಕ್ತ ಎನ್ನುವುದನ್ನು ಕವಿ ಎಚ್. ಎಸ್. ಬಿಳಿಗಿರಿ ಯವರು ತಮ್ಮ ಕವನದಲ್ಲಿ ಸೊಗಸಾಗಿ ವರ್ಣಿಸಿದ್ದಾರೆ.
Kushi Dukka
ಪಾದರಸವು ದಿಟ, ಚುರುಕ ತವರೂರು!
ಏನುಪಯೋಗವೋ? ಬಿದ್ದರೆ ಚೂರು!
ಬೆಣ್ಣೆಯು ಜಗೆದೊಳು ಮೊದ್ದಿನ ಮುದ್ದೆ
ನೆಲಕ್ಕೆ ಬಿದ್ದರೂ ಒಡೆವುದೇ ಪೆದ್ದೆ?
ಇನ್ನೇತಕೆ ಬರಿ ಚರ್ಚೆಯು ಸಾಕು
ಓಡುವಿಳೆಗೆ ಸೋಮಾರಿಯೇ ಬ್ರೇಕು!

ಎನ್ನುತ್ತಾರೆ. ಮೇಲುನೋಟಕ್ಕೆ ತಮಾಷೆಯಾಗಿ ಕಂಡರೂ ಆಳಕ್ಕಿಳಿದು ವಿವೇಚಿಸಿದಾಗ ಅದರಲ್ಲೊಂದು ತತ್ವ ಅಡಗಿರುವುದು ಕಾಣುತ್ತದೆ. ಚುರುಕಿನವರು ಕಾಲನ ಜೊತೆಗೆ ಓಡುವ ಅವಸರದಲ್ಲಿ ಸರಿ-ತಪ್ಪುಗಳ ವಿವೇಚನೆಯಿಲ್ಲದೆ ನಡೆದು ಪಾದರಸವು ಬಿದ್ದಾಗ ಚೂರಾಗುವಂತೆ ವ್ಯಕ್ತಿತ್ವವನ್ನು ಚೂರಾಗಿಸಿಕೊಂಡು ಹುಡಿಯಾಗಿ ಹೋಗುತ್ತಾರೆ. ಅದೇ ಸೋಮಾರಿಗಳು ಬೆಣ್ಣೆಯಂತೆ ಕೆಳಗೆ ಬಿದ್ದರೂ ಒಡೆಯುವುದಿಲ್ಲ! ಅವರ ಸೋಮಾರಿತನದಿಂದ ತಮ್ಮ ವ್ಯಕ್ತಿತ್ವಕ್ಕೆ ಎಂದೂ ಧಕ್ಕೆಯಾಗುವುದಕ್ಕೆ ಬಿಡುವುದಿಲ್ಲ. ಹೀಗೇ ಲಂಗುಲಗಾಮಿಲ್ಲದೇ ಓಡುವ ಹುಚ್ಚು ಕುದುರೆಯೆಂಬ ಇಳೆಗೆ ಸೋಮಾರಿಗಳು ಬ್ರೇಕ್ ಹಾಕುತ್ತಾರೆ ಎನ್ನುತ್ತಾರೆ ಕವಿ.

ಪ್ರಿಯ ಸಖಿ, ನಿನಗೆ ಆಮೆ ಮತ್ತು ಮೊಲದ ಕಥೆ ನೆನಪಾಗುತ್ತಿದೆಯೇ? ನಮ್ಮ ಹಿರಿಯರೇ ಹೇಳಿಲ್ಲವೇ ಆತುರಗಾರನಿಗೆ ಬುದ್ಧಿ ಮಟ್ಟ ಎಂದು. ಆದರೆ ಎಲ್ಲಾ ಸಮಯದಲ್ಲೂ ಸೋಮಾರಿ ಇದೇ ರೀತಿ ಉಪಯುಕ್ತನಾಗಬೇಕಾದರೆ ಅವನು ತಕ್ಕ ಸಮಯದಲ್ಲಿ, ತಕ್ಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸದಾ ಸೋಮಾರಿಯಾಗಿ ನಿಂತಲ್ಲೇ ನಿಂತು ಬಿಟ್ಟರೆ, ಕಾಲ ಇವನನ್ನು ಬಿಟ್ಟು ಮುಂದೆ ಸಾಗುತ್ತದೆ. ಸರಿ-ತಪ್ಪುಗಳನ್ನು ವಿವೇಚಿಸಿ ಸರಿಯಾದ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಂಡು ನಡೆಯುವವನೇ ಸದಾ ಗೆಲ್ಲುವವನು. ವಿವೇಕವಿಲ್ಲದೇ ಹುಚ್ಚಾಗಿ ಕಾಲನೊಂದಿಗೆ ಓಡುವವನೂ ಸೋಲುತ್ತಾನೆ, ಹಾಗೇ ಕಾಲನೊಂದಿಗೆ ಸ್ಪಂದಿಸದೇ ನಿಂತಲ್ಲೇ ನಿಲ್ಲುವವನೂ ಸೋಲುತ್ತಾನೆ. ಇವೆರಡರ ಮಧ್ಯದ ರೇಖೆಯಲ್ಲೇ ವಿವೇಚನೆ ಮೂಡಿ ಬರುತ್ತದೆ. ಅದನ್ನೇ ನಾವು ಕಂಡುಕೊಳ್ಳಬೇಕಿರುವುದು. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...