Home / ಕವನ / ಕವಿತೆ / ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಹಾಡು – ೧

ಯಲ್ಡಕ್ಕೆ ಹೋಗದೆಲ್ಲಿ
ಕೇಳೊ ಅಣ್ಣಾ ಕೇಳೊ
ಯಲ್ಲಾ ಕಡೆಯೂ ಇಸ್ಸಿಸ್ಸಿ
ನೋಡೊ ಅಣ್ಣಾ ನೋಡೊ ||

ಊಟವು ಶುದ್ಧ ಅಂತಾದ್ರೆ
ಇದ್ಕೂ ಗಮನ ಬೇಕಲ್ವೆ
ಎಲ್ರಿಗೂ ಆರೋಗ್ಯ ಬೇಕಂದ್ರೆ
ಇದೂನು ಸೈತ ಮುಖ್ಯಲ್ವೆ ||

ಎಲ್ಲೆಲ್ಲೂ ಹೋದ್ರೆ ಅಲ್ಲೆಲ್ಲ
ನೀ ರೋಗ ಹಂಚುತೀಯ
ಒಂದ್ಕಡೆ ಸ್ವಚ್ಚ ಹೋದ್ರೆ
ಜೀವನ ಹರ್ಷ ಇಡ್ತೀಯ ||

ಅಣ್ಣಾ ತಗಿಯೊ ತರವಲ್ಲ
ದರಿದ್ರ ಮೈಲಿಗೆ ಮಡಿನೆಲ್ಲ
ಕಕ್ಕಸ ಜಗದ ಜನಕೆಲ್ಲ
ಮರ್‍ಯಾದಿ ತರೊ ಮಹಲಣ್ಣ ||

ಹಾಡು – ೨

ಬುದ್ಧಿ ಕೊಡಲಿ ದೇವರು
ಊಟ ಮಾಡೊ ಜನಕೆಲ್ಲ ||

ಚೊಂಬು ಹಿಡಿದು ನಿತ್ಯವು
ಪರರ ಬೇಲಿಗೆ ಹೋಗದಂಥ ||

ಹಾಡು – ೩

ಕೇಳ್ರಯ್ಯಾ ಗಂಡಸರೆ
ನಿತ್ಯಗೋಳು ಹೆಂಗಸರ ||

ಮಾನ ಮುಚ್ಚಲು ಬಟ್ಟೆಯು
ಅಂತೇ ಕಕ್ಕಸದಾ ಮನೆಯು ||

ಹಾಡು – ೪

ಬೇಕೊ ಅಣ್ಣಾ ಮರ್‍ವಾದೆ
ಅನ್ನಬಟ್ಟೆಗಿಂತ ಮಿಗಿಲಾದ್ದೆ ||

ಆರು ಮೂರು ದಿನದ ಬದುಕು
ಮಾನದಿಂದ ಕೂಡಿರಬೇಕು ||

ಹಾಡು – ೫

ಅರಿವು ಬೇಕಣ್ಣ
ತಿಳಿವು ಬೇಕಣ್ಣ
ಪಶುವಾಗಿರದ
ಮನುಜನಿಗೆ ||

ಬಾಳೆಲ್ಲ ಬಡಸ್ತನ
ದಿನದಿನ ಅವಮಾನ
ಎಲ್ಲವ ನುಂಗುತ
ಬದುಕಣ್ಣ ನಗುತ ||

ಬಡವನಾದರೇನು
ದರಿದ್ರನಾಗಲ್ಲ
ಸ್ವಚ್ಛ ಬದುಕಿಂದ
ಘನತೆ ಬಂತಲ್ಲ ||

ಬದುಕೆಂಬುದೇ ಮಲ
ಆಗಬೇಕು ನಿರ್ಮಲ
ಮುಂದೆ ಅಬಲರೆಲ್ಲ
ಸಬಲರಾಗುವರಲ್ಲ ||

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...