Home / ಕವನ / ಕವಿತೆ / ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಹಾಡು – ೧

ಯಲ್ಡಕ್ಕೆ ಹೋಗದೆಲ್ಲಿ
ಕೇಳೊ ಅಣ್ಣಾ ಕೇಳೊ
ಯಲ್ಲಾ ಕಡೆಯೂ ಇಸ್ಸಿಸ್ಸಿ
ನೋಡೊ ಅಣ್ಣಾ ನೋಡೊ ||

ಊಟವು ಶುದ್ಧ ಅಂತಾದ್ರೆ
ಇದ್ಕೂ ಗಮನ ಬೇಕಲ್ವೆ
ಎಲ್ರಿಗೂ ಆರೋಗ್ಯ ಬೇಕಂದ್ರೆ
ಇದೂನು ಸೈತ ಮುಖ್ಯಲ್ವೆ ||

ಎಲ್ಲೆಲ್ಲೂ ಹೋದ್ರೆ ಅಲ್ಲೆಲ್ಲ
ನೀ ರೋಗ ಹಂಚುತೀಯ
ಒಂದ್ಕಡೆ ಸ್ವಚ್ಚ ಹೋದ್ರೆ
ಜೀವನ ಹರ್ಷ ಇಡ್ತೀಯ ||

ಅಣ್ಣಾ ತಗಿಯೊ ತರವಲ್ಲ
ದರಿದ್ರ ಮೈಲಿಗೆ ಮಡಿನೆಲ್ಲ
ಕಕ್ಕಸ ಜಗದ ಜನಕೆಲ್ಲ
ಮರ್‍ಯಾದಿ ತರೊ ಮಹಲಣ್ಣ ||

ಹಾಡು – ೨

ಬುದ್ಧಿ ಕೊಡಲಿ ದೇವರು
ಊಟ ಮಾಡೊ ಜನಕೆಲ್ಲ ||

ಚೊಂಬು ಹಿಡಿದು ನಿತ್ಯವು
ಪರರ ಬೇಲಿಗೆ ಹೋಗದಂಥ ||

ಹಾಡು – ೩

ಕೇಳ್ರಯ್ಯಾ ಗಂಡಸರೆ
ನಿತ್ಯಗೋಳು ಹೆಂಗಸರ ||

ಮಾನ ಮುಚ್ಚಲು ಬಟ್ಟೆಯು
ಅಂತೇ ಕಕ್ಕಸದಾ ಮನೆಯು ||

ಹಾಡು – ೪

ಬೇಕೊ ಅಣ್ಣಾ ಮರ್‍ವಾದೆ
ಅನ್ನಬಟ್ಟೆಗಿಂತ ಮಿಗಿಲಾದ್ದೆ ||

ಆರು ಮೂರು ದಿನದ ಬದುಕು
ಮಾನದಿಂದ ಕೂಡಿರಬೇಕು ||

ಹಾಡು – ೫

ಅರಿವು ಬೇಕಣ್ಣ
ತಿಳಿವು ಬೇಕಣ್ಣ
ಪಶುವಾಗಿರದ
ಮನುಜನಿಗೆ ||

ಬಾಳೆಲ್ಲ ಬಡಸ್ತನ
ದಿನದಿನ ಅವಮಾನ
ಎಲ್ಲವ ನುಂಗುತ
ಬದುಕಣ್ಣ ನಗುತ ||

ಬಡವನಾದರೇನು
ದರಿದ್ರನಾಗಲ್ಲ
ಸ್ವಚ್ಛ ಬದುಕಿಂದ
ಘನತೆ ಬಂತಲ್ಲ ||

ಬದುಕೆಂಬುದೇ ಮಲ
ಆಗಬೇಕು ನಿರ್ಮಲ
ಮುಂದೆ ಅಬಲರೆಲ್ಲ
ಸಬಲರಾಗುವರಲ್ಲ ||

*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...