Home / ಕವನ / ಕವಿತೆ / ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಮಳೆಯ ಬೆಳೆ (ಬೀದಿ ನಾಟಕದ ಹಾಡು)

ಯಾತಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಮಳೆಯಿಲ್ಲ ಬೆಳೆಯಿಲ್ಲ ಶಿವನೆ
ನಮ ಬದುಕಿಗೆ ನೆಲೆಯೆಲ್ಲಿ ಶಿವನೆ ||

ದಿನವೂ ಮುಗಿಲತ್ತ ದಿಟ್ಟಿಯನಿಟ್ಟು
ಕಾಣದಾದೆವೊ ಹೊಟ್ಟೆಗೆ ಹಿಟ್ಟು
ಎತ್ತ ನೋಡಲ್ಲಿ ಬಿಸಿಲು ರಣರಣಾ
ಬರಿದಾದ ಒಡಲೆಲ್ಲ ಭಣ ಭಣಾ ||

ಮಳೆರಾಯ ನಮ್ಮ ಮರೆತಾನಲ್ಲ
ಸೂರ್ಯಪ್ಪ ನಮ್ಮ ಸುಡುತಾನಲ್ಲ
ಗಂಗಮ್ಮ ನಮ್ಮ ಕೈಬಿಟ್ಟಳಲ್ಲ
ಭೂತಾಯಿ ಮಾತ್ರ ಸಲುವ್ತಾಳಲ್ಲ ||

ಯಾತಕ್ಕೆ ಮಳೆ ವಾದವೊ
ಶಿವಶಿವನೆ
ಜೀವ ತಲ್ಲಣಿಸುತಾವೊ ||

ಹಾಡು – ೨

ಗಂಡ ಹೆಂಡಿರ ಕೆಡಿಸಿತು
ನೀರು ಕಣಣ್ಣಾ ನೀರು ||

ಅತ್ತೆ ಸೊಸೆಯ ಕೆಡಿಸಿತು
ನೀರು ಕಣಣ್ಣಾ ನೀರು ||

ತಾಯಿ ಮಗನ ಕೆಡಿಸಿತು
ನೀರು ಕಣಣ್ಣಾ ನೀರು ||

ಹಾಡು – ೩

ದೊಡ್ಡ ಮನೆಯ ದೊಡ್ಡವ್ವ
ಮನಸು ಮಾತ್ರ ಚಿಕ್ಕದವ್ವ ||

ಹಟ್ಟಿಯಿಂದ ಹನುಮಂತನ
ದೊಡ್ಡವ್ವನಲ್ಲಿಗೆ ಕರೆಸಿತು ನೀರು ||

ಒಡತಿ ಆಳಿನ ಮನಸನೆಲ್ಲ
ಕೆಡಿಸಿತು ನೀರು ||

ಹಾಡು – ೪

ಊರಿನ ಮಾನ ಎಲ್ಲೈತಣ್ಣ
ಕುಡಿಯೊ ನೀರಲ್ಲಿ ||

ಹೆಣ್ಣಿನಮಾನ ಗಂಡಿನ ಕಣ್ಣು
ಕೆರೆಯ ನೀರಿನ ಬಣ್ಣ ||

ಜೀವ ನೀರು ಮಾನ ಪ್ರಾಣ
ಊರ ಘನತೆಣ್ಣ ||

ಹಾಡು – ೫

ದೇಸಾಯಿಗೆ ಎಂಥಾ ರೋಗವಯ್ಯ
ದೊಡ್ಡರೋಗ ದೊಡ್ಡರೋಗ ||

ಯಾತರಿಂದ ಬಂದ ರೋಗ
ಸಾವಿನ ಸಿದ್ಧತೆಗೆಲ್ಲಾ ಯೋಗ ||

ಜೀವನ ಶುದ್ಧ ಇಲ್ಲದಿದ್ದರೆ
ಬರುತೈತಣ್ಣ ದೊಡ್ಡ ರೋಗ ||

ಹಾಡು – ೬

ನೀಡಿರಮ್ಮ ದಾನ ನೀರ
ಕೇಳ ಬಂದಿಹನೀ ವಜೀರ ||

ಬಾವಿ ಬತ್ತಿ ಬಾಯಿ ಬತ್ತಿ
ಜೀವ ತಲ್ಲಣಿಸೂತೈತೆ ||

ಸಾಯಲಿರುವ ಜೀವವನ್ನು
ಚೊಂಬು ನೀರಲಿ ಉಳಿಸಲಿನ್ನು ||

ಹಾಡು – ೭

ಜೀವಕ್ಕೆ ಜಲಬೇಕು
ಜಲದೊಳಗೆ ಜೀವವುಂಟು ||

ದೇಸಾಯ ಜೀವ ಎಂಬೋದು
ಊರು ನೀಡಿದ ಧರ್ಮ ||

ಮಾಡಿದ್ದ ಉಣ್ಣುತೀಯ ತಮ್ಮ
ತಿಳೀಯಿದುವೆ ಬದುಕ ಮರ್ಮ ||

ಹಾಡು – ೮

ಬಾವಿ ಬತ್ತಿದರೇನಣ್ಣಾ
ಭೂಮಿ ಬಂಜೆಯಲ್ಲ ||

ಕರೆಯ ಆಳದಿ ತೋಡಣ್ಣ
ನೀರ ನೆಲೆಯ ನೋಡಣ್ಣ ||

ಬಿದ್ದ ಮಳೆಯ ನೀರನ್ನು
ಕೆರೆಯಲಿ ತಡೆಯಣ್ಣ ||

ಹಾಡು – ೯

ನೀರಿನ ನಾಯಕನೊ
ನಮ್ಮ ವಜೀರ್‌ಸಾಬನೊ ||

ಕೆರೆ ಹೂಳೆತ್ತಿಸಿ ನೀರನಿಂಗಿಸಿ
ಬಾವಿ ಜಲವನು ಬರಿಸಿದನೊ ||

ಮಳೆಯ ಬೆಳೆಯನು ಬೆಳೆಸಿದನೊ
ಊರಿನ ಬರವಾ ಮುಗಿಸಿದನೊ ||

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...