Home / ಕವನ / ಕವಿತೆ / ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)

ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)

ಮೇಳ: ಸಿರಿ ಅಂತರಗಟ್ಟೆ ಮಾರಿ ಎನಿಸಿದವಳೆ
ನೆಲೆ ನಿಂತು ಜೀವಗಳ ಕಾದವಳೆ ||

ಕಂದಗಳ ಕಾದವಳೆ
ಜೀವಿನ ಮರದವಳೆ
ಕೇಳಿದ್ದ ಕೊಟ್ಟವಳೆ
ಬೇಡಿದ್ದ ಬಿಟ್ಟವಳೆ ||

ಸತ್ಯವ್ವ ಮುತ್ಯವ್ವ ಕರಿಕಾರಲರಮ್ಮ
ಬೇವ ತಿಂದು ಬೇವನುಟ್ಟಮ್ಮ
ಸಿಡುಬ ನುಂಗಿ ಕಂದಗಳ ಕಾದವಳೆ
ಪ್ಲೇಗಮ್ಮನನ್ನು ಬಿಡದೆ ನುಂಗಿದವಳೆ ||

ಜೋಗಿಯ ಪ್ರಸಂಗ

ಮೇಳ:     ತಾಯೆ ನೀ ಯಾರೆ
ಅಂತರ್‍ಗಟ್ಟೆ ಮಾರಿ ||

ಕೇಡು ಬಯಸಿದವಗೆ
ಕೇಡು ನೀಡಿದೆ ಕೊಡುಗೆ
ಒಳಿತು ಬಯಸಿದವಗೆ
ಕೊಟ್ಟೆ ಬಯಸಿದ ಹಾಗೆ ||

ನಿಂತಲ್ಲೆ ನಿಂತವಳೆ
ಕುಂತಲ್ಲೆ ಕುಂತವಳೆ
ಬ್ರಹ್ಮಾಂಡ ತಿಳಿದವಳೆ
ಸಕಲವಾ ನಡೆದವಳೆ

ರೂಪದೊಳು ರೂಪವಿಲ್ಲ
ಕಾಯದೊಳು ಕಾಯವಿಲ್ಲ
ಇಲ್ಲವೆಂದರೆ ಐದೀ
ಐದಿಯೆಂದರೆ ಇಲ್ಲ ||

ಹೆಬ್ಬೂರು ನಿಗರು ಶಿಖೆಯ ಗಣಂಗು ಪ್ರಸಂಗ

ಮೇಳ:    ಮಾಟಗಾತಿ ಮಾಯಗಾತಿ
ಏನೆ ನಿನ್ನ ಕೀರುತಿ ||

ಮಾಯಾವ ಗೆದ್ದವಳೆ
ಗೆಲುವನ್ನೆ ಹೊದ್ದವಳೆ
ಮೀಯ ಬಂದವರಿಗೆಲ್ಲ
ಹಿಂಗು ತಿನ್ನಿಸಿದವಳೆ ||

ಗರಿ ನಿರಿಗೆ ಸೆರಗ ತಾಯಿ
ಸೋಜಿಗವೆ ಮಹಾಮಾಯಿ
ಪಿಂಡಾಂಡ ಬ್ರಹ್ಮಾಂಡವೆಲ್ಲ
ನಿನ್ನ ಸೀರೆಯಾಯಿತಲ್ಲ ||

ತ್ರಿಮೂರ್ತಿಗಳ ತ್ರಿಶೂಲ ಮಾಡಿ
ದಿಕ್ಕು ದೆಸೆನೆಲ್ಲ ಪಟ್ಟಣ ಮಾಡಿ
ಅಂತರದ ನಿನ್ನ ಕಟ್ಟೆಯ ಒಳಗೆ
ಜೀವ ಕಾಯುವ ಕಾಯಕದೊಳಗೆ ||

ಮೇಳ:    ಕಿಲಗುಡವ ಹಸಿಗೂಸ
ನುಂಗೀದನಲ್ಲ
ಕೂಸಾದ ಅಮ್ಮನ್ನ
ನುಂಗೀದನಲ್ಲ ||

ಹೊಟ್ಟೇಲಿಂದ ತಾಯಿ
ಬಿಳಲಾದಳಲ್ಲ
ಬೆಳಬೆಳೆದು ಮಾಯಾವಿ
ಮರವಾದಳಲ್ಲ ||

ಕಂಚಿ ವೀರನ ಪ್ರಸಂಗ

ಮೇಳ:     ಕಂಚಿಯ ವೀರನೊಬ್ಬ
ಅಂತರಗಟ್ಟೆವ್ವನ ಸುದ್ದಿಕೇಳಿ
ಗೆಲ್ಲುತ್ತೇನಂತ ಬಂದಾನೆ
ತಂದನ್ನಾ ತಾನ ||

ವೀರಾನ ವೇಸ ಧರಿಸಿ
ಬರುತಾನೆ ಕಂಚಿ ಕಡಿಯಿಂದ
ತಂದನ್ನಾ ತಾನ ||

ಮೇಳ :    ಅವ್ವಾ ತಾಯೆ
ಅಂತರಗಟ್ಟೆವ್ವ ||

ಕಾಯಿ ಹಣ್ಣು ಮಾಡಿದವಳೆ
ಕಲ್ಲು ನೀರು ಮಾಡಿದವಳೆ
ಬೀಜ ವೃಕ್ಷ ಮಾಡಿದವಳೆ ||

ಮೂರು ಲೋಕ ಬ್ರಹ್ಮಾಂಡವನೆ
ಸೀರೆ ಮಾಡಿ ಸುತ್ತಿ ನೆರಿಗೇಲಿ
ನೆಲದ ಕಂದಗಳ ಕಾದವಳೆ ||

ತಂದನ್ನೊ ತಾನೊ
ತಾನಂದಾನೊ ತಾನೊ ||

ಬಾಳ ಹಸನು ಮಾಡಲು ಕುಂತು
ಕಂದಗಳಿಗೆ ಜೀವ ಹಿಡಿದು ಕುಂತು
ಜಗದ ಜುಟ್ಟ ನಡುಗಿಸಿದವಳೆ
ಬಂದ ಮಕ್ಕಳನ್ನೆಲ್ಲ ಕಾಪಾಡಿದವಳೆ ||

ಹಂಸದ ಮೇಲಿನ ಪದ

ಹುಡುಕಿ ಬಂದಾ ಹಂಸೆ
ಎತ್ತ ಹಾರಿತು ನಂಬಿಸಿ ||

ಸೆಳೆದಿತ್ತು ಕಣ್ಣಮಿಂಚ
ಹಾಕಿ ಪ್ರೀತಿಯ ಹೊಂಚ
ಕರೆದೊಯ್ಯಲು ಮುಗಿಲತ್ತ
ಕಾಣದೆ ಹೋಯಿತೆತ್ತ ||

ಅಮೃತವ ಕುಡಿದ ಹಂಸೆ
ಬಿಟ್ಟು ಮಾನವ ಹಿಂಸೆ
ನಲಿನಲಿದು ನರಕವ
ಮಾಡಿತಲ್ಲ ಸ್ವರ್ಗವ ||

ಏಕತಾರಿಯ ಕಾಯಿ
ಹಣ್ಣಾದಂತೆ ಕಾಯ
ತಂತಿ ನಾದದ ಇಂಪು
ತತ್ವ ಗ್ಯಾನದ ತಂಪು ||

*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...