Home / ಕವನ / ಕವಿತೆ / ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)

ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)

ಮೇಳ: ಸಿರಿ ಅಂತರಗಟ್ಟೆ ಮಾರಿ ಎನಿಸಿದವಳೆ
ನೆಲೆ ನಿಂತು ಜೀವಗಳ ಕಾದವಳೆ ||

ಕಂದಗಳ ಕಾದವಳೆ
ಜೀವಿನ ಮರದವಳೆ
ಕೇಳಿದ್ದ ಕೊಟ್ಟವಳೆ
ಬೇಡಿದ್ದ ಬಿಟ್ಟವಳೆ ||

ಸತ್ಯವ್ವ ಮುತ್ಯವ್ವ ಕರಿಕಾರಲರಮ್ಮ
ಬೇವ ತಿಂದು ಬೇವನುಟ್ಟಮ್ಮ
ಸಿಡುಬ ನುಂಗಿ ಕಂದಗಳ ಕಾದವಳೆ
ಪ್ಲೇಗಮ್ಮನನ್ನು ಬಿಡದೆ ನುಂಗಿದವಳೆ ||

ಜೋಗಿಯ ಪ್ರಸಂಗ

ಮೇಳ:     ತಾಯೆ ನೀ ಯಾರೆ
ಅಂತರ್‍ಗಟ್ಟೆ ಮಾರಿ ||

ಕೇಡು ಬಯಸಿದವಗೆ
ಕೇಡು ನೀಡಿದೆ ಕೊಡುಗೆ
ಒಳಿತು ಬಯಸಿದವಗೆ
ಕೊಟ್ಟೆ ಬಯಸಿದ ಹಾಗೆ ||

ನಿಂತಲ್ಲೆ ನಿಂತವಳೆ
ಕುಂತಲ್ಲೆ ಕುಂತವಳೆ
ಬ್ರಹ್ಮಾಂಡ ತಿಳಿದವಳೆ
ಸಕಲವಾ ನಡೆದವಳೆ

ರೂಪದೊಳು ರೂಪವಿಲ್ಲ
ಕಾಯದೊಳು ಕಾಯವಿಲ್ಲ
ಇಲ್ಲವೆಂದರೆ ಐದೀ
ಐದಿಯೆಂದರೆ ಇಲ್ಲ ||

ಹೆಬ್ಬೂರು ನಿಗರು ಶಿಖೆಯ ಗಣಂಗು ಪ್ರಸಂಗ

ಮೇಳ:    ಮಾಟಗಾತಿ ಮಾಯಗಾತಿ
ಏನೆ ನಿನ್ನ ಕೀರುತಿ ||

ಮಾಯಾವ ಗೆದ್ದವಳೆ
ಗೆಲುವನ್ನೆ ಹೊದ್ದವಳೆ
ಮೀಯ ಬಂದವರಿಗೆಲ್ಲ
ಹಿಂಗು ತಿನ್ನಿಸಿದವಳೆ ||

ಗರಿ ನಿರಿಗೆ ಸೆರಗ ತಾಯಿ
ಸೋಜಿಗವೆ ಮಹಾಮಾಯಿ
ಪಿಂಡಾಂಡ ಬ್ರಹ್ಮಾಂಡವೆಲ್ಲ
ನಿನ್ನ ಸೀರೆಯಾಯಿತಲ್ಲ ||

ತ್ರಿಮೂರ್ತಿಗಳ ತ್ರಿಶೂಲ ಮಾಡಿ
ದಿಕ್ಕು ದೆಸೆನೆಲ್ಲ ಪಟ್ಟಣ ಮಾಡಿ
ಅಂತರದ ನಿನ್ನ ಕಟ್ಟೆಯ ಒಳಗೆ
ಜೀವ ಕಾಯುವ ಕಾಯಕದೊಳಗೆ ||

ಮೇಳ:    ಕಿಲಗುಡವ ಹಸಿಗೂಸ
ನುಂಗೀದನಲ್ಲ
ಕೂಸಾದ ಅಮ್ಮನ್ನ
ನುಂಗೀದನಲ್ಲ ||

ಹೊಟ್ಟೇಲಿಂದ ತಾಯಿ
ಬಿಳಲಾದಳಲ್ಲ
ಬೆಳಬೆಳೆದು ಮಾಯಾವಿ
ಮರವಾದಳಲ್ಲ ||

ಕಂಚಿ ವೀರನ ಪ್ರಸಂಗ

ಮೇಳ:     ಕಂಚಿಯ ವೀರನೊಬ್ಬ
ಅಂತರಗಟ್ಟೆವ್ವನ ಸುದ್ದಿಕೇಳಿ
ಗೆಲ್ಲುತ್ತೇನಂತ ಬಂದಾನೆ
ತಂದನ್ನಾ ತಾನ ||

ವೀರಾನ ವೇಸ ಧರಿಸಿ
ಬರುತಾನೆ ಕಂಚಿ ಕಡಿಯಿಂದ
ತಂದನ್ನಾ ತಾನ ||

ಮೇಳ :    ಅವ್ವಾ ತಾಯೆ
ಅಂತರಗಟ್ಟೆವ್ವ ||

ಕಾಯಿ ಹಣ್ಣು ಮಾಡಿದವಳೆ
ಕಲ್ಲು ನೀರು ಮಾಡಿದವಳೆ
ಬೀಜ ವೃಕ್ಷ ಮಾಡಿದವಳೆ ||

ಮೂರು ಲೋಕ ಬ್ರಹ್ಮಾಂಡವನೆ
ಸೀರೆ ಮಾಡಿ ಸುತ್ತಿ ನೆರಿಗೇಲಿ
ನೆಲದ ಕಂದಗಳ ಕಾದವಳೆ ||

ತಂದನ್ನೊ ತಾನೊ
ತಾನಂದಾನೊ ತಾನೊ ||

ಬಾಳ ಹಸನು ಮಾಡಲು ಕುಂತು
ಕಂದಗಳಿಗೆ ಜೀವ ಹಿಡಿದು ಕುಂತು
ಜಗದ ಜುಟ್ಟ ನಡುಗಿಸಿದವಳೆ
ಬಂದ ಮಕ್ಕಳನ್ನೆಲ್ಲ ಕಾಪಾಡಿದವಳೆ ||

ಹಂಸದ ಮೇಲಿನ ಪದ

ಹುಡುಕಿ ಬಂದಾ ಹಂಸೆ
ಎತ್ತ ಹಾರಿತು ನಂಬಿಸಿ ||

ಸೆಳೆದಿತ್ತು ಕಣ್ಣಮಿಂಚ
ಹಾಕಿ ಪ್ರೀತಿಯ ಹೊಂಚ
ಕರೆದೊಯ್ಯಲು ಮುಗಿಲತ್ತ
ಕಾಣದೆ ಹೋಯಿತೆತ್ತ ||

ಅಮೃತವ ಕುಡಿದ ಹಂಸೆ
ಬಿಟ್ಟು ಮಾನವ ಹಿಂಸೆ
ನಲಿನಲಿದು ನರಕವ
ಮಾಡಿತಲ್ಲ ಸ್ವರ್ಗವ ||

ಏಕತಾರಿಯ ಕಾಯಿ
ಹಣ್ಣಾದಂತೆ ಕಾಯ
ತಂತಿ ನಾದದ ಇಂಪು
ತತ್ವ ಗ್ಯಾನದ ತಂಪು ||

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...