Home / ಕವನ / ಕವಿತೆ / ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...